'ಪ್ರಜಾಪ್ರಭುತ್ವಕ್ಕಾಗಿ ಧ್ವನಿ ಎತ್ತಿ': ಬಿಜೆಪಿ ವಿರುದ್ಧ ಜನಾಭಿಪ್ರಾಯ ರೂಪಿಸಲು ರಾಹುಲ್‌ ಗಾಂಧಿ ಪ್ರಯತ್ನ

ಹೊಸದಿಲ್ಲಿ: ರಾಜಸ್ಥಾನದ ರಾಜಕೀಯ ಬಿಕ್ಕಟ್ಟಿನ ವಿಚಾರವಾಗಿ ವಿರುದ್ಧ ಜನಾಭಿಪ್ರಾಯ ಸೃಷ್ಟಿಸಲು ಕಾಂಗ್ರೆಸ್‌ ನಾಯಕ ಪ್ರಯತ್ನಿಸುತ್ತಿದ್ದು, ‘ಪ್ರಜಾಪ್ರಭುತ್ವಕ್ಕಾಗಿ ಒಗ್ಗೂಡಿ ಮತ್ತು ಧ್ವನಿ ಎತ್ತಿ’ ಎಂದು ವಯನಾಡು ಸಂಸದ ವಿಡಿಯೋ ಒಂದನ್ನು ಭಾನುವಾರ ಟ್ವೀಟ್‌ ಮಾಡಿ ಕಾಂಗ್ರೆಸ್‌ಗೆ ಜನರ ಬೆಂಬಲ ಕೋರಿದ್ದಾರೆ. ರಾಹುಲ್‌ ಗಾಂಧಿ ಟ್ವೀಟ್‌ ಮಾಡಿರುವ ವಿಡಿಯೋದಲ್ಲಿ, ಕೊರೊನಾ ವೈರಸ್‌ ವಿರುದ್ಧ ಇಡೀ ದೇಶ ಹೋರಾಡುತ್ತಿರುವಾಗ ಬಿಜೆಪಿ ಸಂವಿಧಾನವನ್ನು ದುರ್ಬಲಗೊಳಿಸುತ್ತಿದೆ ಮತ್ತು ಪ್ರಜಾಪ್ರಭುತ್ವವನ್ನು ಪತನಗೊಳಿಸುತ್ತಿದೆ. ಇದು ಮಧ್ಯಪ್ರದೇಶದಲ್ಲಿ ಈಗಾಗಲೇ ಸಂಭವಿಸಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಇನ್ನು, ರಾಜಸ್ಥಾನದಲ್ಲಿ ವಿಧಾನಸಭೆ ಅಧಿವೇಶನ ನಡೆಸಲು ಅನುಮತಿ ನೀಡಲು ರಾಜ್ಯಪಾಲರು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್‌, ತಕ್ಷಣ ವಿಧಾನಸಭೆ ಅಧಿವೇಶನ ಕರೆದು, ನಮ್ಮ ಸಾಂವಿಧಾನಿಕ ಹಕ್ಕನ್ನು ರಕ್ಷಿಸಬೇಕು ಎಂದು ರಾಜ್ಯಪಾಲರನ್ನು ಆಗ್ರಹಿಸಿದೆ. ರಾಜ್ಯಪಾಲ ಕಲ್‌ರಾಜ್‌ ಮಿಶ್ರಾ ಈಗಾಗಲೇ ವಿಧಾನಸಭಾ ಅಧಿವೇಶನ ಕರೆಯಬೇಕು ಎಂಬ ಒಂದು ಪ್ರಸ್ತಾವನೆಯನ್ನು ತಿರಸ್ಕರಿಸಿದ್ದಾರೆ. ಭಾನುವಾರ ಮತ್ತೆ ಪ್ರಸ್ತಾವನೆ ಸಲ್ಲಿಸಿರುವ ಗೆಹ್ಲೋಟ್‌ ಸರಕಾರ ವಿಶ್ವಾಸಮತ ಸಾಬೀತಿಗೆ ಅಧಿವೇಶನ ಕರೆಯುತ್ತಿಲ್ಲ. ಕೊರೊನಾ ವೈರಸ್‌ ನಿರ್ವಹಣೆಗೆ ಸಂಬಂಧಿಸಿದ ಚರ್ಚೆ ನಡೆಸಲು ಅಧಿವೇಶನಕ್ಕೆ ಅನುಮತಿ ನೀಡಿ ಎಂದು ಒತ್ತಾಯಿಸಿದ್ದಾರೆ. ಇನ್ನು, ರಾಜಸ್ಥಾನದ ಬಿಕ್ಕಟ್ಟಿಗೆ ಸಂಬಂಧಪಟ್ಟಂತೆ ಕಾಂಗ್ರೆಸ್‌ ಸೋಮವಾರ ದೇಶಾದ್ಯಂತ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ಅಧಿಕೃತ ನಿವಾಸ ರಾಷ್ಟ್ರಪತಿ ಭವನದ ಹೊರಗಡೆ ಪ್ರತಿಭಟನೆ ಮಾಡುವುದಾಗಿ ಕಾಂಗ್ರೆಸ್‌ ತಿಳಿಸಿದೆ. ಸಚಿನ್‌ ಪೈಲಟ್‌ ಬಂಡಾಯದಿಂದ ರಾಜಸ್ಥಾನದಲ್ಲಿ ಅಶೋಕ್‌ ಗೆಹ್ಲೋಟ್‌ ಸರಕಾರ ಇಕ್ಕಟ್ಟಿಗೆ ಸಿಲುಕಿದೆ. ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ನಲ್ಲಿಯೂ ಕೂಡ ಗೆಹ್ಲೋಟ್‌ ಬಣಕ್ಕೆ ಹಿನ್ನಡೆಯಾಗಿದೆ. 200 ಸದಸ್ಯಬಲದ ರಾಜಸ್ಥಾನ ವಿಧಾನಸಭೆಯಲ್ಲಿ ಕಾಂಗ್ರೆಸ್‌ ಬಹುಮತ ಹೊಂದಿದೆ. ಆದರೆ, ಸಚಿನ್‌ ಪೈಲಟ್‌ ಕ್ಯಾಂಪ್‌ ನಮ್ಮೊಂದಿಗೆ 30 ಶಾಸಕರು ಇದ್ದಾರೆ ಎಂದು ಹೇಳುತ್ತಿರುವುದು ಗೆಹ್ಲೋಟ್‌ ಸರಕಾರದ ಸಂಕಷ್ಟಕ್ಕೆ ಕಾರಣವಾಗಿದೆ. ಆದರೆ, ಇದುವರೆಗೂ ಪೈಲಟ್‌ ಪಡೆಯಲ್ಲಿ ಕಂಡಿರುವುದು 19 ಶಾಸಕರು ಮಾತ್ರ. ಇನ್ನು ಬಿಜೆಪಿ 72 ಶಾಸಕರನ್ನು ಹೊಂದಿದೆ.


from India & World News in Kannada | VK Polls https://ift.tt/30MsPpc

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...