ಹುಬ್ಬಳ್ಳಿ: ಜುಲೈ 24ರ ಬಳಿಕ ಧಾರವಾಡ ಜಿಲ್ಲೆಯಲ್ಲಿ ಲಾಕ್ಡೌನ್ ಮುಂದುವರಿಯುವುದು ಬಹುತೇಕ ಡೌಟ್ ಆಗಿದೆ. ಈ ಬಗ್ಗೆ ಕೈಗಾರಿಕಾ ಸಚಿವ ಹುಬ್ಬಳ್ಳಿಯಲ್ಲಿಂದು ಮುನ್ಸೂಚನೆ ಕೊಟ್ಟಿದ್ದು, ಧಾರವಾಡ ಜಿಲ್ಲೆಯಲ್ಲಿ ಲಾಕ್ಡೌನ್ ವಿಸ್ತರಣೆ ಬಗ್ಗೆ ಸಚಿವ ಸಂಪುಟದಲ್ಲಿ ಸಿಎಂ ಜೊತೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುತ್ತೇವೆ ಎಂದಿದ್ದಾರೆ. ಸಮಸ್ಯೆ ಪರಿಹಾರ ಮಾಡಲು ಲಾಕ್ಡೌನ್ ವಿಸ್ತರಣೆಯೇ ಪರಿಹಾರ ಅಲ್ಲ ಎಂದಿರುವ ಶೆಟ್ಟರ್, ಜುಲೈ 25ರ ನಂತರ ಮುಂದುವರಿಸುವ ಬಗ್ಗೆ ಯಾವುದಕ್ಕೂ ಜಿಲ್ಲಾಧಿಕಾರಿ, ವೈದ್ಯರು ಮತ್ತು ತಜ್ಞರ ಜೊತೆ ಚರ್ಚಿಸಿ ನಾಡಿದ್ದು ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಇದೇ ವೇಳೆ ಕೊರೊನಾ ನಿಯಂತ್ರಣ ವಿಚಾರದಲ್ಲಿ ಸಚಿವರ ಮಧ್ಯೆ ಸಮನ್ವಯತೆಯ ಕೊರತೆ ಇದೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಅದೆಲ್ಲ ಸುಳ್ಳು. ಸರ್ಕಾರ ಸೇರಿದಂತೆ ಎಲ್ಲಾ ಸಚಿವರುಗಳು ಪ್ರಾಮಾಣಿಕವಾಗಿ ಒಗ್ಗೂಡಿಕೊಂಡು ಕೆಲಸ ಮಾಡ್ತಿದ್ದಾರೆ. ಕೊರೊನಾ ಸಾಮಾಗ್ರಿಗಳ ಖರೀದಿ ವಿಚಾರದಲ್ಲಿ ಅವ್ಯವಹಾರವಾಗಿಲ್ಲ, ವಿರೋಧ ಪಕ್ಷದವರು ಆರೋಪ ಮಾಡಬೇಕು ಅಂತಾ ಮಾಡಬಾರದು. ರಚನಾತ್ಮಕವಾಗಿ ಟೀಕೆ ಮಾಡಬೇಕು ವ್ಯರ್ಥ ಆರೋಪ ಸರಿಯಲ್ಲ ಎಂದು ಹೇಳಿದರು. ಇನ್ನು ಧಾರವಾಡ ಜಿಲ್ಲೆಯಲ್ಲಿ ಇನ್ನೂ ಎರಡು ಸಾವಿರ ಹಾಸಿಗೆಗಳು ರೆಡಿ ಇದೆ. ಆಂಬುಲೆನ್ಸ್ ವ್ಯವಸ್ಥೆ ಸರಿಪಡಿಸಲು ಸೂಚನೆ ನೀಡಿರುವೆ. ಇನ್ನೆರಡು ದಿನದಲ್ಲಿ ಮತ್ತೆ 7 ಆಂಬುಲೆನ್ಸ್ ಹೊಸದಾಗಿ ಬರಲಿವೆ ಎಂದರು. ಅಲ್ಲದೇ ಕಿಮ್ಸ್ನಲ್ಲಿ ಹೆಚ್ಚುವರಿಯಾಗಿ ಶೀಘ್ರದಲ್ಲೇ 250 ಬೆಡ್ಗಳ ವ್ಯವಸ್ಥೆ ಮಾಡಲು ಸೂಚನೆ ನೀಡಿರುವೆ. ಮೂರ್ನಾಲ್ಕು ದಿನದಲ್ಲಿ ಕಿಮ್ಸ್ನಲ್ಲಿ ಹೆಚ್ಚುವರಿ ಬೆಡ್ಗಳು ಲಭ್ಯವಾಗಲಿದೆ ಎಂದು ಭರವಸೆ ನೀಡಿದರು.
from India & World News in Kannada | VK Polls https://ift.tt/2BnbmLm