ಅಯೋಧ್ಯೆಗೆ ಇಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭೇಟಿ

ಅಯೋಧ್ಯೆ: ಶ್ರೀರಾಮನ ಜನ್ಮಸ್ಥಳ ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ಮುಹೂರ್ತಕ್ಕೆ ದಿನ ನಿಗದಿಯಾಗಿದೆ. ಇದೇ ಬರುವ ಆಗಸ್ಟ್‌ 5ರಂದು ಪ್ರಧಾನಿ ನರೇಂದ್ರ ಸೇರಿದಂತೆ ಹಲವು ಗಣ್ಯರು ಭೂಮಿ ಪೂಜೆಗೆ ಸಾಕ್ಷಿಯಾಗಲಿದ್ದಾರೆ. ಈ ಹಿನ್ನೆಲೆ ಉತ್ತರ ಪ್ರದೇಶ ಮುಖ್ಯಮಂತ್ರಿ ಅವರು ಅಯೋಧ್ಯೆಗೆ ಭೇಟಿ ನೀಡಿ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಆಗಸ್ಟ್ 5ರಂದು ನಡೆಯುವ ಭೂಮಿಪೂಜೆ ಕಾರ್ಯಕ್ರಮಕ್ಕೆ ಈಗಾಗಲೆ ಸಕಲ ಸಿದ್ಧತೆಗಳನ್ನು ಮಾಡಲಾಗ್ತಿದ್ದು, ಕೊರೊನಾ ವೈರಸ್‌ ರೋಗ ಹರಡುವುದರಿಂದ ಜನರ ಮಧ್ಯೆ ಅಂತರ ಪಾಲಿಸಿಕೊಂಡು ಸರ್ಕಾರದ ನೀತಿ ನಿಯಮಗಳನ್ನು ಅನುಸರಿಸಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ಹೀಗಾಗಿ ಇದೆಲ್ಲದರ ಮಾಹಿತಿಯನ್ನು ಸಿಎಂ ಆದಿತ್ಯನಾಥ್ ಅವರು ಪಡೆಯಲಿದ್ದಾರೆ. ಅಯೋಧ್ಯೆಗೆ ಭೇಟಿ ನೀಡುವ ವೇಳೆ ಪೂಜಾ ಕೈಂಕರ್ಯದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ನಂತರ ಸಾಧು ಸಂತರ ಜೊತೆಗೂ ಆದಿತ್ಯನಾಥ್ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ಇನ್ನು ಆಗಸ್ಟ್ 5ರಂದು ವೇಳೆ ನಗರಿಯ ಮನೆಮನಗಳಲ್ಲಿ ದೀಪ ಬೆಳಗಿಸುವ ಬಗ್ಗೆಯೂ ನಿರ್ಧರಿಸಲಾಗಿದ್ದು, ಈಗಾಗಲೇ ಐದು ತೀರ್ಥ ಕ್ಷೇತ್ರಗಳ ಮಣ್ಣನ್ನು ಅಯೋಧ್ಯೆಗೆ ಕಳುಹಿಸಲಾಗಿದ್ದು, ವಿಶೇಷವಾಗಿ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿರುವ ಶಾರದಾ ಪೀಠದ ಮಣ್ಣನ್ನು ಕೂಡ ತರಿಸಲಾಗಿದೆ.


from India & World News in Kannada | VK Polls https://ift.tt/2CZYNpD

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...