ಮಂಡ್ಯ: ಸಾಲಮನ್ನಾ ಮಾಡಿಸಿಕೊಡುವಂತೆ ಒತ್ತಾಯಿಸಿ ರೈತನೊಬ್ಬ ಮೊಬೈಲ್ ಟವರ್ ಏರಿ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ ಘಟನೆ ಮಂಡ್ಯದಲ್ಲಿ ನಡೆದಿದೆ. ನಗರದ ಸಂಜಯ್ ವೃತ್ತದಲ್ಲಿರುವ ಮೊಬೈಲ್ ಟವರ್ಗೆ ಏರಿದ ಹೈಡ್ರಾಮವನ್ನೇ ಸೃಷ್ಟಿಸಿದ್ದಾನೆ. ರೈತನ ಅವಾಂತರಕ್ಕೆ ಬೆಚ್ಚಿಬಿದ್ದ ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಆತನ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ. ನಡೆದಿದ್ದು ಏನು?ಮದ್ದೂರು ತಾಲೂಕಿನ ಬಿದರಮೊಳೆ ಗ್ರಾಮದ ರೈತ ಮೋಹನ್ ಎಂಬವರನ್ನ ಬೆಕ್ಕಳಲೆ ಗ್ರಾಮದ ಪ್ರಾಥಮಿಕ ಸಹಕಾರ ಸಂಘದಲ್ಲಿ ಸಾಲಮನ್ನಾ ಯೋಜನೆಯಿಂದ ಹೊರಗಿಟ್ಟಿದ್ದರಂತೆ. ತನ್ನ ಸಾಲವನ್ನ ಮನ್ನಾ ಮಾಡದೆ ಉದ್ದೇಶಪೂರ್ವಕವಾಗಿ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿದ್ದ ರೈತ ಮೋಹನ್, ಈ ಬಗ್ಗೆ ಕಾನೂನು ಹೋರಾಟ ಮಾಡಿದ್ರು ನ್ಯಾಯ ಸಿಗಲಿಲ್ಲವಂತೆ. ಇದರಿಂದ ಆಕ್ರೋಶಿತನಾದ ಮೋಹನ್, ತನ್ನ ಸಾವಿಗೆ ಪ್ರಾಥಮಿಕ ಸಂಘದ ಇಒ,ಆಡಳಿತ ಮಂಡಳಿ, ಕೊಪ್ಪ ಡಿಸಿಸಿ ಬ್ಯಾಕ್ ಮೇಲ್ವಿಚಾರಕರು ಹಾಗೂ ಡಿ.ಆರ್ ಕಾರಣರೆಂದು ಪತ್ರ ಬರೆದು ಮೊಬೈಲ್ ಟವರ್ ಮೇಲೆ ಏರಿ ಆತ್ಮಹತ್ಯೆಯ ಬೆದರಿಕೆ ಹಾಕಿದ್ದಾನೆ. ಇನ್ನು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ರೈತನ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ. ಆದರೆ ಅದಕ್ಕೆ ಜಗ್ಗದೆ ಮೇಲೆಯೇ ಕೂತುಬಿಟ್ಟಿದ್ದಾನೆ.
from India & World News in Kannada | VK Polls https://ift.tt/30veqgW