ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ. ಅಧಿಕಾರದ ಅಹಂನಿಂದ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಗರಂ ಆಗಿದ್ದಾರೆ. ಕೋವಿಡ್ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಮಾಡಿರುವ ಆರೋಪಕ್ಕೆ ಗುರುವಾರ ಪ್ರತಿಕ್ರಿಯೆ ನೀಡಿದ್ದ ಸುಧಾಕರ್ “ಇಷ್ಟು ವರ್ಷದ ರಾಜಕೀಯ ಅನುಭವದಲ್ಲಿ ಪ್ರಸ್ತಾವನೆಗೂ ಮಂಜೂರಾತಿಗೂ ವ್ಯತ್ಯಾಸ ಗೊತ್ತಿಲ್ಲ ಎಂದು ಕಾಣುತ್ತದೆ. ಅವರು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 815 ಕೋಟಿ ರೂ. ವೆಚ್ಚದಲ್ಲಿ ಉಪಕರಣ ಖರೀದಿಯಾಗಿದೆ ಎಂದಿದ್ದಾರೆ. ಆದರೆ ಖರ್ಚು ಕೇವಲ 33 ಕೋಟಿ ರೂ ಅಷ್ಟು. ಪ್ರಸ್ತಾವನೆ ಖರ್ಚಿನ ಲೆಕ್ಕ ಹೇಗೆ ಆಗುತ್ತದೆ?” ಎಂದು ಪ್ರಶ್ನಿಸಿದ್ದರು. ಇದಕ್ಕೆ ಶುಕ್ರವಾರ ಬೆಂಗಳೂರಿಲ್ಲಿ ಮಾತನಾಡಿ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಸುಧಾಕರ್ ಅಧಿಕಾರದ ಅಹಂನಿಂದ ಮಾತನಾಡುತ್ತಿದ್ದಾರೆ. ಪ್ರಸ್ತಾವನೆ, ಅನುಮೋದನೆ, ವೆಚ್ಚ ಏನು ಎಂಬುವುದು ನನಗೆ ಗೊತ್ತಿಲ್ಲಾ? ನನಗೆ ಅವರು ಪಾಠ ಹೇಳುತ್ತಿದ್ದಾರೆ ಎಂದು ಗರಂ ಆದರು. ಸುಧಾಕರ್ ಎಷ್ಟು ವರ್ಷದಿಂದ ಸಚಿವರಾಗಿದ್ದಾರೆ ಎಂದು ಪ್ರಶ್ನಿಸಿದ ಅವರು, ಇದೆಲ್ಲ ಗೊತ್ತಿಲ್ಲದೆ ನಾನು 13 ಬಾರಿ ಬಜೆಟ್ ಮಂಡನೆ ಮಾಡಲು ಸಾಧ್ಯಾನಾ ಎಂದು ತಿರುಗೇಟು ನೀಡಿದರು. ಕೋವಿಡ್ ಉಪಕರಣಗಳ ಖರೀದಿಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆರೋಪಿಸಿದ್ದಾರೆ. ಆದರೆ ಈ ಆರೋಪವನ್ನು ಬಿಎಸ್ವೈ ಸರ್ಕಾರದ ಪಂಚ ಸಚಿವರು ಪತ್ರಿಕಾಗೋಷ್ಠಿ ನಡೆಸಿ ನಿರಾಕರಣೆ ಮಾಡಿದ್ದಾರೆ.
from India & World News in Kannada | VK Polls https://ift.tt/3hqbhFU