ಆಂಧ್ರಪ್ರದೇಶದ ಶಿಪ್‌ಯಾರ್ಡ್‌ನಲ್ಲಿ ಕ್ರೇನ್‌ ಕುಸಿದು ಬಿದ್ದು 10 ಮಂದಿ ಸಾವು..!

ವಿಶಾಖಪಟ್ಟಣಂ: ಕ್ರೇನ್ ಕುಸಿದು ಬಿದ್ದ ಪರಿಣಾಮ ಹತ್ತು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದಿದೆ. ವಿಶಾಖಪಟ್ಟಣಂನ ಹಿಂದೂಸ್ತಾನ್ ಶಿಪ್‌ಯಾರ್ಡ್‌ನಲ್ಲಿ ಈ ಘಟನೆ ನಡೆದಿದ್ದು, ಕಾಮಗಾರಿ ನಡೆಯುತ್ತಿದ್ದ ವೇಳೆ ಏಕಾಏಕಿ ಕ್ರೇನ್ ಕಾರ್ಮಿಕರ ಮೇಲೆ ಬಿದ್ದಿದೆ. ಘಟನೆ ವೇಳೆ ಸ್ಥಳದಲ್ಲೇ ಐದು ಮಂದಿ ಸಾವನ್ನಪ್ಪಿದ್ದರೆ, ಉಳಿದ ಐದು ಮಂದಿಯನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಅಸುನೀಗಿದ್ದಾರೆ. ಇನ್ನೂ ಅನೇಕ ಮಂದಿ ಕಾರ್ಮಿಕರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ ಎಂದು ತಿಳಿದುಬಂದಿದೆ. ಘಟನೆ ತಿಳಿದ ಬೆನ್ನಲ್ಲೇ ಸಾವನ್ನಪ್ಪಿದ ಕಾರ್ಮಿಕರ ಸಂಬಂಧಿಕರು ಘಟನಾ ಸ್ಥಳಕ್ಕೆ ಆಗಮಿಸಿದ್ದು, ಆದರೆ ಅವರನ್ನು ಒಳಗೆ ಬಿಟ್ಟಿಲ್ಲ. ಹೀಗಾಗಿ ಕಂಪನಿಯ ಗೇಟ್‌ ಹೊರಗೆ ವಾಗ್ವಾದ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ. ಇನ್ನೊಂದೆಡೆ ಕ್ರೇನ್ ಅಡಿಯಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯವನ್ನು ಅಧಿಕಾರಿಗಳು ಮಾಡುತ್ತಿದ್ಧಾರೆ. ಪ್ರತಿದಿನದಂತೆ ಇಂದು ಕೂಡ ಶಿಪ್‌ಯಾರ್ಡ್‌ನಲ್ಲಿ ಲೋಡ್‌ ಅನ್‌ಲೋಡ್‌ ಪ್ರಕ್ರಿಯೆ ನಡೆಯುತ್ತಿದ್ದಾಗ ಇದ್ದಕ್ಕಿದ್ದ ಹಾಗೆ ಕ್ರೇನ್ ಕುಸಿದು ಬಿದ್ದಿದೆ. ಸದ್ಯ ಬಿದ್ದು ನಜ್ಜುಗುಜ್ಜಾಗಿರುವ ಕ್ರೇನ್‌ನ ಅವಶೇಷಗಳ ತೆರವು ಕಾರ್ಯಾಚರಣೆ ಮಾಡುತ್ತಿದ್ದು, ಈ ದುರಂತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವುದಾಗಿ ಸ್ಥಳೀಯ ಡಿಸಿಪಿ ಸುರೇಶ್ ಬಾಬು ತಿಳಿಸಿದ್ದಾರೆ. ಕೆಲ ವಾರಗಳ ಹಿಂದಷ್ಟೇ ವಿಶಾಖಪಟ್ಟಣಂನಲ್ಲಿ ಎಲ್‌ಜಿ ಪಾಲಿಮರ್‌ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ ಮತ್ತು ಗ್ಯಾಸ್ ಟ್ಯಾಂಕರ್ ಸ್ಫೋಟ ಪ್ರಕರಣದಲ್ಲಿ ಹಲವರು ಅಸುನೀಗಿದ್ದರು. ಆ ಘಟನೆ ಮರೆಮಾಸುವ ಮುನ್ನವೇ ಮತ್ತೆ ಅಂತಹದೇ ದುರ್ಘಟನೆಗೆ ಹತ್ತು ಮಂದಿ ಅಮಾಯಕರು ಬಲಿಯಾಗಿದ್ದಾರೆ.


from India & World News in Kannada | VK Polls https://ift.tt/3i1ct2H

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...