ಸಿಎಂ ಬಿಎಸ್‌ವೈ ಶೀಘ್ರ ಚೇತರಿಸಿಕೊಳ್ಳುವಂತೆ ಸಿದ್ದರಾಮಯ್ಯ, ಹೆಚ್‌ಡಿಡಿ ಸೇರಿ ಅನೇಕರ ಹಾರೈಕೆ

ಬೆಂಗಳೂರು: ಸಿಎಂ ಬಿಎಸ್‌ ಯಡಿಯೂರಪ್ಪ ಅವರಿಗೆ ಪಾಸಿಟಿವ್ ಕಾಣಿಸಿಕೊಂಡಿರೋದು ರಾಜ್ಯ ರಾಜಕೀಯ ನಾಯಕರಿಗೆ ಆತಂಕವನ್ನುಂಟು ಮಾಡಿದೆ. ಕೊರೊನಾ ಸೋಂಕು ದೃಢಗೊಳ್ಳುತ್ತಿದ್ದಂತೆ ಸಿಎಂ ಬಿಎಸ್‌ವೈ ಅವರು ವೈದ್ಯರ ಸಲಹೆಯಂತೆ ಬೆಂಗಳೂರಿನ ಹಳೇ ಏರ್‌ಪೋರ್ಟ್‌ ರಸ್ತೆಯ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ನಿನ್ನೆ ರಾತ್ರಿಯೇ ಟ್ವೀಟ್ ಮಾಡಿದ ಸಿಎಂ ಬಿಎಸ್‌ವೈ ನನ್ನ ಜೊತೆ ಕಳೆದ ಕೆಲವು ದಿನಗಳಿಂದ ಸಂಪರ್ಕದಲ್ಲಿದ್ದವರು ಕ್ವಾರೆಂಟೈನ್‌ಗೆ ಒಳಗಾಗಿ ಮುಂಜಾಗ್ರತೆ ವಹಿಸಿ ಎಂದು ಕೋರಿದ್ದರು. ರಾಜ್ಯದ ಮುಖ್ಯಮಂತ್ರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಳ್ಳುತ್ತಿದ್ದಂತೆ ಬಿಎಸ್‌ವೈ ಶೀಘ್ರ ಗುಣಮುಖರಾಗುವಂತೆ ಗಣ್ಯಾತಿಗಣ್ಯರು ಹಾರೈಸಿದ್ದು, ಇದೀಗ ವಿರೋಧ ಪಕ್ಷದ ನಾಯಕ ಅವರು ಕೂಡ ಯಡಿಯೂರಪ್ಪ ಅವರು ಶೀಘ್ರ ಗುಣಮುಖರಾಗಲಿ ಎಂದು ಶುಭ ಹಾರೈಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರು ಶೀಘ್ರ ಕೊರೊನಾ ಸೋಂಕಿನ ಬಾಧೆಯಿಂದ ಮುಕ್ತರಾಗಿ ರಾಜ್ಯದ ಜನತೆಯ ಆರೋಗ್ಯ ರಕ್ಷಣೆಯೂ ಸೇರಿದಂತೆ ಆಡಳಿತಾತ್ಮಕ ಕಾರ್ಯದಲ್ಲಿ‌‌ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ. ಜೆಡಿಎಸ್ ವರಿಷ್ಠ ಹೆಚ್‌.ಡಿ ದೇವೇಗೌಡ ಕೂಡ ಸಿಎಂ ಬಿಎಸ್‌ವೈ ಗುಣಮುಖರಾಗುವಂತೆ ಹಾರೈಸಿದ್ದು, ‘ಮುಖ್ಯಮಂತ್ರಿಗಳಿಗೆ ಕೊರೊನಾ ಪಾಸಿಟಿವ್ ಬಂದಿರುವುದನ್ನು ಗಮನಿಸಿದ್ದೇನೆ. ಅವರು ಶೀಘ್ರ ಗುಣಮುಖರಾಗಲಿ. ಜನರ ಸಂಕಷ್ಟಕ್ಕೆ ಸ್ಪಂದಿಸುವಂತಾಗಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಕೂಡ ಬಿಎಸ್‌ವೈ ಅವರಿಗೆ ಹಾರೈಸಿದ್ದು, ಹುಟ್ಟು ಹೋರಾಟಗಾರರು, ಜನನಾಯಕರು, ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಶ್ರೀ ಬಿಎಸ್‌ ಯಡಿಯೂರಪ್ಪನವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಆದಷ್ಟು ಬೇಗನೆ ಅವರು ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯದ ಜನತೆಯ ಹಾರೈಕೆ, ಪ್ರಾರ್ಥನೆಗಳು ನಿಮ್ಮೊಂದಿಗಿದೆ. ಶೀಘ್ರದಲ್ಲಿ ಚೇತರಿಸಿಕೊಂಡು ಮತ್ತೆ ಎಂದಿನಂತೆ ಕರ್ತವ್ಯದಲ್ಲಿ ತೊಡಗಿಕೊಳ್ಳಲಿದ್ದೀರಿ. ಎಂದು ಆತ್ಮವಿಶ್ವಾಸ ತುಂಬಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಟ್ವೀಟ್ ಮಾಡಿ, ಯಡಿಯೂರಪ್ಪನವರೇ, ನೀವು ದಣಿವರಿಯದ ಹೋರಾಟಗಾರ ನಿಮ್ಮ ಶೀಘ್ರ ಚೇತರಿಕೆಗೆ ನಮ್ಮ ಪ್ರಾರ್ಥನೆ ಇದೆ ಎಂದಿದ್ದಾರೆ. ಕಾಂಗ್ರೆಸ್‌ ಮುಖಂಡ ಈಶ್ವರ್ ಖಂಡ್ರೆ ಟ್ವೀಟ್ ಮಾಡಿ, ಮಾನ್ಯ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ತಗುಲಿರುವ ವಿಷಯ ತಿಳಿದು ಬೇಸರವಾಗಿದೆ. ಮುಖ್ಯಮಂತ್ರಿಗಳು ಶೀಘ್ರದಲ್ಲೇ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.


from India & World News in Kannada | VK Polls https://ift.tt/2PgNkET

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...