ಅಯೋಧ್ಯೆ ಭೂಮಿ ಪೂಜೆಯಲ್ಲಿ ನಾನು ಭಾಗವಹಿಸುವುದಿಲ್ಲ..! : ಬಿಜೆಪಿ ನಾಯಕಿ ಉಮಾ ಭಾರತಿ

ಹೊಸದಿಲ್ಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಇನ್ನೇನು ಒಂದು ದಿನ ಅಷ್ಟೇ ಬಾಕಿ ಇದ್ದು, ಆಗಸ್ಟ್‌ ಐದನೇ ತಾರೀಕಿಗೆ ಶ್ರೀರಾಮನ ಮಂದಿರಕ್ಕೆ ಭೂಮಿ ಪೂಜೆ ನಡೆಯಲಿದೆ. ಆದರೆ ಕೊನೇ ಕ್ಷಣದಲ್ಲಿ ಬಿಜೆಪಿ ನಾಯಕಿ, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಅವರು ತಾನು ಅಯೋಧ್ಯೆಯಲ್ಲಿ ನಡೆಯುವ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಉಮಾಭಾರತಿ ಅವರಿಗೆ ಆಹ್ವಾನವಿದ್ದು, ಸೇರಿದಂತೆ ಅನೇಕ ಗಣ್ಯರು ಭಾಗವಹಿಸುವಂತಹ ಕಾರ್ಯಕ್ರಮದಿಂದಲೇ ಉಮಾಭಾರತಿ ಅವರು ದೂರ ಉಳಿಯುತ್ತಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಹೋರಾಟ ನಡೆಸಿದವರಲ್ಲಿ ಉಮಾಭಾರತಿ ಕೂಡ ಪ್ರಮುಖರು. ಉಮಾಭಾರತಿ ಅವರು ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮದಿಂದ ದೂರ ಉಳಿಯಲು ವೈರಸ್ ಕಾರಣ ಎನ್ನಲಾಗಿದ್ದು, ಈ ಬಗ್ಗೆ ಮಾಹಿತಿ ನೀಡಿರುವ ಉಮಾ ಭಾರತಿ, ನಾನು ಇಂದು ಭೋಪಾಲ್‌ನಿಂದ ರೈಲಿನಲ್ಲಿ ಹೊರಟು ಅಯೋಧ್ಯೆಗೆ ಬರಬೇಕಾಗುತ್ತದೆ. ಕಾರ್ಯಕ್ರಮದಲ್ಲಿ ಭಾಗಿಯಾದರೆ ನನಗೂ ಸೋಂಕು ಹರಡುವ ಭೀತಿಯಿದೆ. ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಕಾರ್ಯಕ್ರಮದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಬಾರದು. ಹೀಗಾಗಿ ನಾನು ದೂರ ಉಳಿಯುತ್ತೇನೆ. ಪ್ರಧಾನಿ ಮೋದಿಯವರು ಕಾರ್ಯಕ್ರಮ ಮುಗಿಸಿಕೊಂಡು ದೆಹಲಿಗೆ ಹೊರಟ ಬಳಿಕ ನಾನು ಅಯೋಧ್ಯೆಗೆ ತೆರಳುತ್ತೇನೆ. ಭೂಮಿ ಪೂಜೆ ವೇಳೆ ಸರಯೂ ನದಿ ತಟದಲ್ಲಿ ವಿಹರಿಸುತ್ತೇನೆ. ನಂತರ ರಾಮ್‌ಲಲ್ಲಾನ ದರ್ಶನ ಪಡೆಯುತ್ತೇನೆ ಎಂದು ತಿಳಿಸಿದ್ದಾರೆ. ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿಯಿಂದ ಹಿಡಿದು ಅನೇಕ ರಾಜಕೀಯ ಗಣ್ಯರು ಭಾಗಿಯಾಗಲಿದ್ದು, ಸಾವಿರಾರು ಕಾರ್ಯಕರ್ತರು ಕೂಡ ಭಾಗವಹಿಸುವ ನಿರೀಕ್ಷೆ ಇದೆ. ಹೀಗಾಗಿ ಕಾರ್ಯಕ್ರಮ ನಡೆಯುವ ಜಾಗದಲ್ಲಿ ಜನ ಜಂಗುಲಿ ಉಂಟಾದ ಕೊರೊನಾ ಹರಡುವ ಭೀತಿ ಇರುವುದರಿಂದ ಉಮಾ ಭಾರತಿ ಭಾಗಿಯಾಗದಿರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ವಿಶೇಷ ಅಂದರೆ ಹಿರಿಯ ಬಿಜೆಪಿ ನಾಯಕರಾದ ಎಲ್‌ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಕೂಡ ಆಗಸ್ಟ್‌ ಐದರಂದು ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿಲ್ಲ. ಆದರೆ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮ ವೀಕ್ಷಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.


from India & World News in Kannada | VK Polls https://ift.tt/2DpH3nQ

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...