ಬೆಂಗಳೂರು: ಕೋವಿಡ್ ಕಾರಣದಿಂದಾಗಿ ಜಿಲ್ಲಾ ಪ್ರವಾಸಗಳನ್ನು ಮೊಟಕುಗೊಳಿಸಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಬಹುದಿನಗಳ ಬಳಿಕ ಇದೀಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಶುಕ್ರವಾರ ಬಿಎಸ್ವೈ ಮೈಸೂರು, ಮಂಡ್ಯ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಕೆಆರ್ಎಸ್ನಲ್ಲಿ ಕಾವೇರಿ ಮಾತೆಗೆ ಪೂಜೆ ಹಾಗೂ ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಲಿದ್ದಾರೆ. ಬಳಿಕ ಕಾವೇರಿ ನೀರಾವರಿ ನಿಗಮದ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಲಿದ್ದಾರೆ. ಕೋವಿಡ್ ಇರುವ ಕಾರಣದಿಂದಾಗಿ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಕಡಿಮೆ ಸಂಖ್ಯೆಯಲ್ಲಿ ಜನರು ಇರುವಂತೆ ನೋಡಿಕೊಳ್ಳಲು ಸೂಚನೆ ನೀಡಲಾಗಿದೆ. ಕೋವಿಡ್ ಕಾರಣಕ್ಕಾಗಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಸಾಕಷ್ಟು ಮುನ್ನೆಚ್ಚರಿಕೆಗಳನ್ನು ಕೈಗೊಳ್ಳುತ್ತಿದ್ದರು. ಹೀಗಿದ್ದರೂ ಅವರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಮಣಿಪಾಲ ಆಸ್ಪತ್ರೆಯಲ್ಲಿ ಒಂಬತ್ತು ದಿನಗಳ ಕಾಲ ಚಿಕಿತ್ಸೆ ಪಡೆದ ಅವರು ಇದೀಗ ಸಂಪೂರ್ಣ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಕೋವಿಡ್ ಸೋಂಕು ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದೆ. ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಕೈಮೀರಿ ಹರಡುತ್ತಿದೆ. ಈ ನಿಟ್ಟಿನಲ್ಲಿ ಸಾಕಷ್ಟು ಎಚ್ಚರಿಕೆಯನ್ನು ವಹಿಸುವಂತೆ ಸರ್ಕಾರ ಸೂಚಿಸಿದೆ.
from India & World News in Kannada | VK Polls https://ift.tt/3l3R0sr