ಆಂಧ್ರಪ್ರದೇಶ: ಕಾರ್ಖಾನೆಯಲ್ಲಿ ಅಮೋನಿಯಂ ಗ್ಯಾಸ್‌ ಸೋರಿಕೆ, ಸ್ಥಳದಲ್ಲೇ ಕುಸಿದು ಬಿದ್ದ ಕಾರ್ಮಿಕರು!

ಚಿತ್ತೋರ್‌: ಆಂಧ್ರಪ್ರದೇಶದ ಕಾರ್ಖಾನೆಗಳಲ್ಲಿ ಗ್ಯಾಸ್‌ ಸೋರಿಕೆ ಅವಘಡಗಳು ಪದೇ ಪದೇ‌ ಸಂಭವಿಸುತ್ತಲೆ ಇದೆ. ಇದೀಗ ಆಂಧ್ರಪ್ರದೇಶದ ಚಿತ್ತೋರ್‌ನ ಖಾಸಗಿ ಹಾಲು ಸಂಸ್ಕರಣಾ ಕಾರ್ಖಾನೆಯಲ್ಲಿ ಅಮೋನಿಯಂ ಗ್ಯಾಸ್‌ ಸೋರಿಕೆಯಿಂದ 14 ಮಂದಿ ಕಾರ್ಮಿಕರು ಅಸ್ಚಸ್ಥರಾದ ಘಟನೆ ನಡೆದಿದೆ. ಫ್ಯಾಕ್ಟರಿಯಲ್ಲಿದ್ದ ಸಿಲಿಂಡರ್‌ನಲ್ಲಿ ಅಮೋನಿಯಂ ಗ್ಯಾಸ್‌ ತುಂಬಿಡಲಾಗಿತ್ತು ಏಕಾಏಕಿ ಸೋರಿಕೆಯಿಂದಾಗಿ ಗುರುವಾರ ರಾತ್ರಿ ಈ ಅವಘಡ ಸಂಭವಿಸಿದೆ. ರಾತ್ರಿ ಹೊತ್ತು ಇಪ್ಪತ್ತಕ್ಕೂ ಅಧಿಕ ಮಂದಿ ಕೆಲಸ ಮಾಡುತ್ತಿದ್ದರು ಗ್ಯಾಸ್‌ ಸೋರಿಕೆಯಿಂದಾಗಿ ಕೆಲ ಕಾರ್ಮಿಕರು ಸ್ಥಳದಲ್ಲೇ ಕುಸಿದು ಬಿದ್ದರೆ ಇನ್ನು ಕೆಲವರು ಉಸಿರುಗಟ್ಟುವ ಸಮಸ್ಯೆ ಹಾಗೂ ವಾಂತಿ ಮಾಡಿಕೊಂಡಿದ್ದಾರೆ. ಕೂಡಲೇ ಅಸ್ವಸ್ಥಗೊಂಡ 14 ಮಂದಿ ಕಾರ್ಮಿಕರನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಇನ್ನು ಈ ಪೈಕಿ ಗಂಭೀರ ಉಸಿರಾಟದ ತೊಂದರೆ ಇದ್ದ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಆಸ್ಪತ್ರೆಗೆ ಜಿಲ್ಲಾಧಿಕಾರಿ ಭರತ್‌ ಗುಪ್ತಾ ಭೇಟಿ ನೀಡಿದ್ದು, ಕಾರ್ಮಿಕರ ಆರೋಗ್ಯದ ಬಗ್ಗೆ ವೈದ್ಯರ ಬಳಿ ವಿಚಾರಿಸಿ ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ, ಸದ್ಯ ಎಲ್ಲರು ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ತಿರುಪತಿಗೆ ಕಳುಹಿಸಿಕೊಡಲಾಗುವುದು ಎಂದು ತಿಳಿಸಿದ್ದಾರೆ. ಅಲ್ಲದೆ ಘಟನೆ ಬಗ್ಗೆ ತನಿಖೆಗೆ ಸೂಚನೆ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇತ್ತೀಚೆಗೆ ಮಧ್ಯಪ್ರಾಚ್ಯದ ಲೆಬನಾನ್‌ ದೇಶದಲ್ಲಿ ಅಮೋನಿಯಂ ನೈಟ್ರೇಟ್‌ನಿಂದ ಬೃಹತ್‌ ಸ್ಪೋಟ ಸಂಭವಿಸಿ ನೂರಕ್ಕೂ ಹೆಚ್ಚು ಮಂದಿ ಸಾವನಪ್ಪಿದ್ದರು. ಹೀಗಾಗಿ ಈ ಘಟನೆಯಿಂದ ಎಚ್ಚೆತ್ತು, ತಮಿಳುನಾಡಿನ ಚೆನ್ನೈನಲ್ಲಿದ್ದ ಅಮೋನಿಯಂ ನೈಟ್ರೇಟ್‌ ಗ್ಯಾಸನ್ನ ನಿರ್ಜನ ಪ್ರದೇಶಕ್ಕೆ ಸ್ಥಳಾಂತರಿಸಲಾಗಿತ್ತು.


from India & World News in Kannada | VK Polls https://ift.tt/3l6oxSI

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...