ಬೆಂಗಳೂರು: ಪಾಸಿಟಿವ್ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರು ಸೋಮವಾರ ತಿಳಿಸಿದ್ದಾರೆ. ಸಿಎಂ ಅವರ ಆರೋಗ್ಯ ಕುರಿತು ಅವರಿಗೆ ಚಿಕಿತ್ಸೆ ನೀಡುವ ಮಣಿಪಾಲ್ ಆಸ್ಪತ್ರೆಯ ವೈದ್ಯರು ಹೇಳಿಕೆ ಬಿಡುಗಡೆಗೊಳಿಸಿದ್ದು, ಯಡಿಯೂರಪ್ಪ ಆವರು ಚಿಕಿತ್ಸೆಗೆ ಸ್ಪಂದನೆ ನೀಡುತ್ತಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ. ನಮ್ಮ ತಂಡ ಬಹಳ ಹತ್ತಿರದಿಂದ ಸೂಕ್ಷ್ಮವಾಗಿ ಅವರ ಆರೋಗ್ಯದ ಮೇಲೆ ನಿಗಾ ವಹಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ. ಆದಿತ್ಯವಾರ ರಾತ್ರಿ ಯಡಿಯೂಪ್ಪ ಅವರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡ ಪರಿಣಾಮ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದ ಬಿಎಸ್ವೈ ಅವರನ್ನು ವೈದ್ಯರು ವಿಶೇಷ ಕಾಳಜಿ ವಹಿಸಿ ನೋಡಿಕೊಳ್ಳುತ್ತಿದ್ದಾರೆ. ಕೊರೊನಾ ವೈರಸ್ ಪಾಸಿಟಿವ್ ದೃಢಗೊಳ್ಳುತ್ತಿದ್ದಂತೆ ಜನರಲ್ಲಿ ಮನವಿ ಮಾಡಿದ್ದ ಸಿಎಂ ಬಿಎಸ್ವೈ, ತನ್ನ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಕ್ವಾರೆಂಟೈನ್ಗೆ ಒಳಗಾಗುವಂತೆ ಸೂಚಿಸಿದ್ದರು. ಮುಖ್ಯಮಂತ್ರಿಗೆ ಕೊರೊನಾ ಕಾಣಿಸಿಕೊಂಡ ಹಿನ್ನೆಲೆ ರಾಜಕೀಯ ನಾಯಕರಲ್ಲೂ ಆತಂಕ ಎದುರಾಗಿದ್ದು, ಬಿಎಸ್ವೈ ಅವರು ಶೀಘ್ರ ಗುಣಮುಖರಾಗುವಂತೆ ಅನೇಕ ರಾಜಕೀಯ ನಾಯಕರು ಹಾರೈಸಿದ್ದಾರೆ.
from India & World News in Kannada | VK Polls https://ift.tt/30mVMJp