ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣ: ವೈದ್ಯಾಧಿಕಾರಿಗಳ ಜೊತೆ ಮುಂದಿನ ವಾರ ಸಭೆ, ಶ್ರೀರಾಮುಲು

ಬೆಂಗಳೂರು: ನಂಜನಗೂಡು ತಾಲೂಕು ವೈದ್ಯಾಧಿಕಾರಿ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ವೈದ್ಯಾಧಿಕಾರಿಗಳ ಜೊತೆಗೆ ಮುಂದಿನ ವಾರದಲ್ಲಿ ಸಭೆ ನಡೆಸುವುದಾಗಿ ಆರೋಗ್ಯ ಸಚಿವ ತಿಳಿಸಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿದ ಅವರು, ಇಲಾಖೆಯ ವೈದ್ಯಾಧಿಕಾರಿಗಳ ಸಮಸ್ಯೆಗಳ ಬಗ್ಗೆ ಮುಂದಿನ ವಾರ ಸಭೆ ಕರೆದು ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ನಂಜನಗೂಡು ಪ್ರಕರಣದ ಬಗ್ಗೆ ಸೂಕ್ತ ತನಿಖೆಗೆ ಹಾಗೂ ಕೆಲವು ಬೇಡಿಕೆಗಳೊಂದಿಗೆ ಪ್ರತಿಭಟನೆಗೆ ಮುಂದಾಗಿದ್ದ ವೈದ್ಯಾಧಿಕಾರಿಗಳು, ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂಬ ನನ್ನ ಭರವಸೆಗೆ ಬೆಲೆ ಕೊಟ್ಟು ಪ್ರತಿಭಟನೆಯನ್ನು ಹಿಂದಕ್ಕೆ ಪಡೆದಿದ್ದಾರೆ ಕೋವಿಡ್ ವ್ಯಾಪಿಸಿರುವ ಸನ್ನಿವೇಶದಲ್ಲಿ ಜನರ ಆರೈಕೆಗೆ ನಿಮ್ಮೆಲ್ಲರ ಸೇವೆ ಅತ್ಯಗತ್ಯ. ಈ ಜವಾಬ್ದಾರಿ ಅರಿತು, ಸಾರ್ವಜನಿಕ ಹಿತದೃಷ್ಟಿಯಿಂದ ಮುಷ್ಕರ ನಡೆಸುವ ನಿರ್ಧಾರ ಹಿಂಪಡೆದಿರುವ ಎಲ್ಲ ಆರೋಗ್ಯಾಧಿಕಾರಿಗಳಿಗೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ. ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆಗೆ ಸಿಇಒ ಕಾರಣ ಎಂದು ಆರೋಪಿಸಿ ವೈದ್ಯರು ಕಳೆದ ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರು. ಇದೀಗ ಸಾರ್ವಜನಿಕ ಹಿತದೃಷ್ಟಿಯಿಂದ ಪ್ರತಿಭಟನೆ ಕೈಬಿಡಲು ನಿರ್ಧರಿಸಿದ್ದಾರೆ.


from India & World News in Kannada | VK Polls https://ift.tt/2ElQO7c

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...