ಬಿಎಸ್‌ವೈಗೆ ಕೊರೊನಾ: ಆತಂಕದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ!

ಬೆಂಗಳೂರು: ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕಳೆದ ಒಂದು ವಾರದಲ್ಲಿ ಬಿಎಸ್‌ವೈ ರಾಜ್ಯದ ಕೆಲವು ಪ್ರಮುಖ ವ್ಯಕ್ತಿಗಳನ್ನು ಭೇಟಿಯಾಗಿದ್ದಾರೆ. ಅದರಲ್ಲೂ ಶುಕ್ರವಾರ ರಾಜ್ಯಪಾಲ ವಜೂಭಾಯಿ ವಾಲಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಇದೀಗ ರಾಜ್ಯಪಾಲರಿಗೂ ಆತಂಕ ಶುರುವಾಗಿದ್ದು ತಪಾಸಣೆಗೆ ಒಳಗಾಗುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಶುಕ್ರವಾರ ಬೆಳಗ್ಗೆ 11.15 ಕ್ಕೆ ರಾಜ್ಯಪಾಲ ವಜೂಭಾಯಿ ವಾಲಾ ಅವರನ್ನು ಬಿಎಸ್‌ವೈ ದಿಢೀರ್‌ ಆಗಿ ಭೇಟಿಯಾಗಿದ್ದರು. ಈ ಭೇಟಿ ಸಿಎಂ ಅವರ ಅಧಿಕೃತ ಕಾರ್ಯಕ್ರಮಗಳಲ್ಲಿ ಇರಲಿಲ್ಲ. ಬಿಎಸ್‌ವೈ ಭೇಟಿ ಸಾಕಷ್ಟು ಕುತೂಹಲಕ್ಕೂ ಕಾರಣವಾಗಿತ್ತು. ಬಳಿಕ ಸಿಎಂ ಕಚೇರಿಯಿಂದ ಈ ಕುರಿತಾಗಿ ಅಧಿಕೃತ ಹೇಳಿಕೆ ಪ್ರಕಟಗೊಂಡಿದ್ದು ಪ್ರಸಕ್ತ ವಿದ್ಯಮಾನಗಳ ಕುರಿತಾಗಿ ಚರ್ಚೆ ಹಾಗೂ ಕೋವಿಡ್‌ ನಿರ್ವಹಣೆ ಕುರಿತಾಗಿ ರಾಜ್ಯಪಾಲರಿಗೆ ಮಾಹಿತಿ ಕೊಡುವ ನಿಟ್ಟಿನಲ್ಲಿ ಭೇಟಿ ಮಾಡಲಾಗಿದೆ ಎಂದು ತಿಳಿಸಲಾಗಿತ್ತು. ಸಿಎಂ ಬಿಎಸ್‌ವೈ ಜೊತೆಗೆ ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಕೂಡಾ ಉಪಸ್ಥಿತರಿದ್ದರು. ಆದರೆ ಇದೀಗ ಯಡಿಯೂರಪ್ಪ ಅವರಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರಿಗೂ ಆತಂಕ ಎದುರಾಗಿದೆ. ಭೇಟಿ ಸಂದರ್ಭದಲ್ಲಿ ವೈಯಕ್ತಿಕ ಅಂತರ ಕಾಯ್ದುಕೊಂಡರೂ ಮುಂಜಾಗರೂಕತಾ ಕ್ರಮವಾಗಿ ಕೋವಿಡ್‌ ತಪಾಸಣೆಗೆ ರಾಜ್ಯಪಾಲರು ಒಳಗಾಗುವ ಸಾಧ್ಯತೆ ಇದೆ ಅಲ್ಲದೆ ಹೋಂ ಕ್ವಾರಂಟೈನ್‌ಗೆ ಒಳಗಾಗುವ ಸಾಧ್ಯತೆಯೂ ಇದೆ ಎಂಬ ಮಾಹಿತಿಯೂ ಲಭ್ಯವಾಗಿದೆ.


from India & World News in Kannada | VK Polls https://ift.tt/33rjGoG

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...