ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯಾದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ತಮ್ಮ ಸಚಿವ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ದಿನಗಳ ಹಿಂದೆ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗಿದ್ದ ಜೊಲ್ಲೆ ಇದೀಗ ಜೊತೆಗೂ ಮಾತುಕತೆ ನಡೆಸಿದ್ದಾರೆ. ಬೆಳಗಾವಿ ಉಸ್ತುವಾರಿ ಸಚಿವರೂ ಆಗಿರುವ ರಮೇಶ್ ಜಾರಕಿಹೊಳಿ ಅವರನ್ನು ಭಾನುವಾರ ಭೇಟಿಯಾದ ಶಶಿಕಲಾ ಜೊಲ್ಲೆ ಕೆಲ ಹೊತ್ತು ಮಾತುಕತೆ ನಡೆಸಿದರು. ಸಚಿವ ಸ್ಥಾನ ಕಳೆದುಕೊಳ್ಳುವ ಆತಂಕದ ಹಿನ್ನೆಲೆಯಲ್ಲಿ ಈ ಭೇಟಿ ಹಾಗೂ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ. ಆದರೆ ಜೊಲ್ಲೆ ಇದನ್ನು ನಿರಾಕರಣೆ ಮಾಡಿದ್ದಾರೆ. ಕ್ಷೇತ್ರದ ಅಭಿವೃದ್ದಿ ವಿಚಾರವಾಗಿ ಚರ್ಚೆ ನಡೆಸಲು ಬಂದಿದ್ದೆ ಹೊರತಾಗಿ ಬೇರೆ ಯಾವುದೇ ಉದ್ದೇಶ ಇಲ್ಲ ಎಂದಿದ್ದಾರೆ. ದೆಹಲಿ ಭೇಟಿಯ ಹಿಂದೆಯೂ ಬೇರೆ ಯಾವ ಉದ್ದೇಶವಿಲ್ಲ. ಕ್ಷೇತ್ರದ ಅಭಿವೃದ್ದಿ ವಿಚಾರವಾಗಿಯೇ ದೆಹಲಿಗೆ ತೆರಳಿ ಕೇಂದ್ರದ ನಾಯಕರನ್ನು ಭೇಟಿಯಾಗಿದ್ದೆ. ಇದರ ಹೊರತಾಗಿ ಸಚಿವ ಸ್ಥಾನದ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು. ಒಂದು ವೇಳೆ ಸಂಪುಟ ಪುನಾರಚನೆ ನಡೆದರೆ ಶಶಿಕಲಾ ಜೊಲ್ಲೆಯವರನ್ನು ಸಂಪುಟದಿಂದ ಕೈಬಿಡಲಾಗುತ್ತದೆ ಎಂಬ ಸುದ್ದಿಗಳು ಹರಿದಾಡುತ್ತಿವೆ.
from India & World News in Kannada | VK Polls https://ift.tt/2Ds3UPL