ಬೆಂಗಳೂರು: ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ವೈದ್ಯರು ಪ್ರತಿಭಟನೆಯನ್ನು ವಾಪಸ್ ಪಡೆದುಕೊಂಡಿದ್ದಾರೆ. ವೈದ್ಯರ ಈ ನಡೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಧನ್ಯವಾದ ಸಲ್ಲಿಸಿದ್ದಾರೆ. ನಂಜನಗೂಡು ವೈದ್ಯಾಧಿಕಾರಿ ಡಾ. ನಾಗೇಂದ್ರ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಆತ್ಮಹತ್ಯೆಗೆ ಸಿಇಒ ಅವರ ಒತ್ತಡವೇ ಕಾರಣ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಈ ನಿಟ್ಟಿನಲ್ಲಿ ಸಿಇಒ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದರು. ವೈದ್ಯರ ಪ್ರತಿಭಟನೆಯಿಂದ ಮೈಸೂರು ಜಿಲ್ಲೆಯಲ್ಲಿ ಕೋವಿಡ್ ಡಾಟಾ ಕಳೆದೆರಡು ದಿನಗಳಿಂದ ಅಪ್ಡೇಟ್ ಆಗಿಲ್ಲ. ಅಲ್ಲದೆ ಕೋವಿಡ್ ಸೋಂಕಿತರಿಗೆ ಚಿಕಿತ್ಸೆಯನ್ನು ಸಿಗುತ್ತಿರಲಿಲ್ಲ. ಈ ನಿಟ್ಟಿನಲ್ಲಿ ವೈದ್ಯರ ಮನವೋಲಿಕೆಗೆ ಸಾಕಷ್ಟು ಪ್ರಯತ್ನ ನಡೆಸಲಾಗಿತ್ತು. ಈ ನಡುವೆ ಭಾನುವಾರ ಬೆಂಗಳೂರು ಹಾಗೂ ಮೈಸೂರಿನಲ್ಲಿ ನಡೆದ ರಾಜ್ಯ ವೈದ್ಯಕೀಯ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಪ್ರತಿಭಟನೆಯನ್ನು ವಾಪಸ್ ಪಡೆಯಲು ನಿರ್ಧರಿಸಲಾಗಿದೆ. ವೈದ್ಯರ ಈ ನಿರ್ಧಾರಕ್ಕೆ ಸಚಿವ ಡಾ. ಸುಧಾಕರ್ ಧನ್ಯವಾದ ಸಲ್ಲಿಸಿದ್ದಾರೆ. ಕೋವಿಡ್ ಸಂದರ್ಭದಲ್ಲಿ ವೈದ್ಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರಕ್ಕೆ ಅರಿವಿದೆ. ಸನ್ಮಾನ್ಯ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ವೈದ್ಯರ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿರುವ ಹಿನ್ನೆಯಲ್ಲಿ, ಕರೆ ನೀಡಲಾಗಿದ್ದ ಮುಷ್ಕರ ವಾಪಸ್ ಪಡೆದಿರುವ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘಕ್ಕೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.
from India & World News in Kannada | VK Polls https://ift.tt/3l9lXeF