ಹಿಂದಿ ಹೇರಿಕೆ ವಿವಾದ: ದ್ವಿಭಾಷಾ ನೀತಿ ಪರ ಹೋರಾಟಕ್ಕೆ ಸಂಸದ ಪ್ರಜ್ವಲ್ ರೇವಣ್ಣ ಬೆಂಬಲ

ಬೆಂಗಳೂರು: ತ್ರಿಭಾಷಾ ನೀತಿಯ ಮೂಲಕ ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ವಿರೋಧಿಸಿ ರಾಜ್ಯದಲ್ಲಿ ಹೋರಾಟಗಳು ಶುರುವಾಗಿವೆ. ಕೇಂದ್ರ ಸರ್ಕಾರದ ಈ ನಡೆಯ ವಿರುದ್ಧ ನಡೆಯುವ ಹೋರಾಟಕ್ಕೆ ಸಂಸದ ಬೆಂಬಲ ಸೂಚಿಸಿದ್ದಾರೆ. ಸರಣಿ ಟ್ವೀಟ್‌ಗಳ ಮೂಲಕ ಹಿಂದಿ ಹೇರಿಕೆಯನ್ನು ವಿರೋಧಿಸಿರುವ ಪ್ರಜ್ವಲ್‌, ದ್ವಿಭಾಷಾ ನೀತಿಯ ಪರವಾದ ನಾಡಿನ ಯುವಕರ ಹೋರಾಟ ಒಂದು ತಾರ್ಕಿಕ ಅಂತ್ಯ ಕಾಣುವವರೆಗೂ ನಾನು ನಿಮ್ಮ ಜೊತೆ ಸದಾ ಇರುತ್ತೇನೆ. ಮುಂದಿನ ದಿನಗಳಲ್ಲಿ ಈ ವಿಷಯದ ಬಗ್ಗೆ ಲೋಕಸಭೆಯ ಒಳಗೂ, ಹಾಗೂ ಲೋಕಸಭೆಯ ಹೊರಗೂ ಹೋರಾಡುವ ಮೂಲಕ ಕೇಂದ್ರ ಸರ್ಕಾರದ ಗಮನ ಸೆಳೆಯುವುದರೊಂದಿಗೆ ತ್ರಿಭಾಷಾ ನೀತಿಗೆ ಅಂತ್ಯ ಹಾಡಲು ಶ್ರಮಿಸೋಣ ಎಂದಿದ್ದಾರೆ. ಹಿಂದಿ ಹೇರಿಕೆಯ ಕೂಗು ಪ್ರಬಲವಾಗುತ್ತಿರುವ ದಿನಗಳಲ್ಲಿ ದ್ವಿಭಾಷಾ ನೀತಿಯು ಜಾರಿಗೆ ಬರಬೇಕು ಎನ್ನುವ ಕನ್ನಡಿಗರ ಧ್ವನಿ ಇನ್ನಷ್ಟು ಗಟ್ಟಿಯಾಗಬೇಕಿದೆ. 130 ಕೋಟಿ ಭಾರತೀಯರೆಲ್ಲರೂ ಹಿಂದಿ ಕಲಿಯಲೇ ಬೇಕು ಎನ್ನುವುದು ಮೂರ್ಖತನದ ಪರಮಾವಧಿ ಅಲ್ಲದೇ ಮತ್ತೇನು..?? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಪರ್ಕ ಭಾಷೆಯಾಗಿ ಇಂಗ್ಲಿಷ್ ಈಗಾಗಲೇ ಕಾರ್ಯ ನಿರ್ವಹಣೆ ಮಾಡುತ್ತಿರುವಾಗ ಹಿಂದಿಯನ್ನು ಕಡ್ಡಾಯವಾಗಿ ಕಲಿಯಬೇಕು ಎನ್ನುವುದರಲ್ಲಿ ಯಾವುದೇ ಅರ್ಥವಿಲ್ಲ. ಹಿಂದಿಯ ಬದಲಾಗಿ ನಮ್ಮ ರಾಜ್ಯದ ಭಾಷೆಗಳಾದ ತುಳು, ಕೊಡವ ಭಾಷೆಗಳಿಗೆ ಮಾನ್ಯತೆ ಕೊಟ್ಟು ತೃತೀಯ ಭಾಷೆಗಳನ್ನಾಗಿ ಕಲಿಯೋಣ ಎಂದು ಟ್ವೀಟ್ ಮಾಡಿದ್ದಾರೆ. ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲ ರಾಜ್ಯಗಳು ಮತ್ತು ಭಾಷೆಗಳು ಸಮಾನ ಎಂದು ನಾವೆಲ್ಲರೂ ಒಪ್ಪಿಕೊಳ್ಳಲಾಗಿದೆ, ಹೀಗಿದ್ದರೂ ಹಿಂದಿಯನ್ನು ಮಾತ್ರ ವಿಶೇಷವಾಗಿ ಪರಿಗಣಿಸಿ ನಮ್ಮ ಮೇಲೆ ಹೇರುವುದು ದಬ್ಬಾಳಿಕೆಯಲ್ಲವೇ..? ಎಂದು ಅವರು ಪ್ರಶ್ನಿಸಿದ್ದಾರೆ. ತ್ರಿಭಾಷಾ ಸೂತ್ರಕ್ಕೆ ನಿಖಿಲ್ ಕುಮಾರಸ್ವಾಮಿ ವಿರೋಧ ತ್ರಿಭಾಷಾ ಸೂತ್ರಕ್ಕೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕೂಡಾ ವಿರೋಧ ವ್ಯಕ್ತಪಡಿಸಿದ್ದಾರೆ. ಹಲವು ದಶಕಗಳಿಂದ ಕರ್ನಾಟಕದ ಪಠ್ಯಕ್ರಮದಲ್ಲಿ ಹಿಂದಿ ವಿಷಯವನ್ನು ಕಡ್ಡಾಯವಾಗಿ ಕಲಿಯಲೇಬೇಕೆನ್ನುವ ನಿಯಮವಿದೆ. ಒಂದು ವಿಷಯವಾಗಿ ಕಡ್ಡಾಯವಾಗಿ ಹಿಂದಿಯನ್ನು ಕಲಿಯಲೇಬೇಕೆನ್ನುವ ನಿಯಮ ಹಿಂದಿ ಹೇರಿಕೆಯಲ್ಲದೆ ಮತ್ತೇನು ? ಕರ್ನಾಟಕ ಪಠ್ಯದಲ್ಲಿ ಹಿಂದಿ ಸೇರಿಸಿರುವುದು ಹಿಂದಿ ಹೇರಿಕೆಯ ಮಹಾ ಹುನ್ನಾರ ಎಂದು ಟೀಕಿಸಿದ್ದಾರೆ. ಪಠ್ಯಕ್ರಮದಲ್ಲಿ ಹಿಂದಿಯನ್ನು ಕಡ್ಡಾಯಗೊಳಿಸಿರುವುದು ಶಾಲಾ ಮಕ್ಕಳಿಗೆ ಅನಗತ್ಯ ಹೊರೆಯಾಗಿದೆ. ಹಿಂದಿ ಕಲಿಕೆಗೆ ಮೀಸಲಿಡುವ ಸಮಯವನ್ನು ಜೀವನ ಕೌಶಲ್ಯಗಳನ್ನು ಕಲಿಯಲು ಉಪಯೋಗಿಸಿಕೊಳ್ಳಬಹುದು.ಇಂಗ್ಲಿಷ್ ಅನ್ನು ಇಡೀ ಜಗತ್ತು ಸಂಪರ್ಕ ಭಾಷೆಯಾಗಿ ಒಪ್ಪಿರುವಾಗ, ಮತ್ತೊಂದು ಸಂಪರ್ಕ ಭಾಷೆಯಾಗಿ ಹಿಂದಿಯ ಅವಶ್ಯಕತೆಯಿಲ್ಲ ಎಂದಿದ್ದಾರೆ.


from India & World News in Kannada | VK Polls https://ift.tt/32dlCPG

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...