ಚುನಾವಣೆ ದೂರವಿದ್ರೂ ಪಕ್ಷ ಸಂಘಟನೆಗೆ ಒತ್ತು ನೀಡಿ, ಪದಾಧಿಕಾರಿಗಳಿಗೆ ಬಿ.ಎಲ್‌ ಸಂತೋಷ್ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಚುನಾವಣೆ ದೂರ ಇದ್ದರೂ ಪಕ್ಷ ಸಂಘಟನೆಗೆ ಒತ್ತು ನೀಡಿ ಎಂದು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ರಾಜ್ಯ ಬಿಜೆಪಿ ಪದಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಭಾನುವಾರ ಪಕ್ಷದ ನೂತನ ಪದಾಧಿಕಾರಿಗಳ ಜೊತೆಗೆ ಸರಣಿ ಸಭೆಗಳನ್ನು ನಡೆಸಿದ ಅವರು ಪಕ್ಷದ ಸಂಘಟನೆಗೆ ಆದ್ಯತೆ ನೀಡುವಂತೆ ಸೂಚನೆ ನೀಡಿದರು. ರಾಜ್ಯದಲ್ಲಿ ಕೇವಲ ಅಧ್ಯಕ್ಷರು ಮಾತ್ರ ಪ್ರವಾಸ ಮಾಡುವುದಲ್ಲ, ಬದಲಾಗಿ ಎಲ್ಲರೂ ಸಕ್ರೀಯವಾಗಿರಬೇಕು ಎಂದು ಸೂಚಿಸಿದ್ದಾರೆ. ಉಪಾಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು ಪಕ್ಷದ ಸಂಘಟನೆಗೆ ಒತ್ತು ನೀಡಬೇಕು. ಸರ್ಕಾರದ ಕಾರ್ಯಕ್ರಮಗಳನ್ನು ತಳಮಟ್ಟದಲ್ಲಿ ಪ್ರಚಾರ ಮಾಡುವ ಕೆಲಸವನ್ನು ಈಗಾಗಲೇ ಆರಂಭಿಸಬೇಕು ಎಂದು ತಿಳಿಸಿದ್ದಾರೆಂದು ತಿಳಿದು ಬಂದಿದೆ. ಬೆಂಗಳೂರು ಗಲಭೆ, ಕಾಂಗ್ರೆಸ್ ವೈಫಲ್ಯ ಮುಂತಾದವುಗಳನ್ನು ಮುಂದಿಟ್ಟು ಪಕ್ಷ ಸಂಘಟನೆ ಮಾಡಬೇಕು. ಕೋವಿಡ್‌ ಸಂದರ್ಭದಲ್ಲಿ ಯಾವ ರೀತಿ ಸಕ್ರಿಯವಾಗಿ ಕೆಲಸ ಮಾಡಬೇಕು ಎಂಬ ಚರ್ಚೆ ನಡೆದಿದೆ ಎನ್ನಲಾಗಿದೆ. ಪಕ್ಷದ ಚಟುವಟಿಕೆಗಳು ಮುಂದೆ ಹೇಗಿರಬೇಕು, ಸಕ್ರೀಯ ಕೆಲಸ ಕಾರ್ಯಕ್ರಮಗಳನ್ನು ಹೇಗೆ ರೂಪಿಸಬೇಕು ಎಂಬ ನಿಟ್ಟಿನಲ್ಲೂ ಪದಾಧಿಕಾರಿಗಳಿಗೆ ಬಿಎಲ್‌ ಸಂತೋಷ್ ಸಲಹೆಗಳನ್ನು ನೀಡಿದ್ದಾರೆ.


from India & World News in Kannada | VK Polls https://ift.tt/32cnPe8

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...