ಬೆಂಗಳೂರು: ಕೊರೊನಾ ಸಾಂಕ್ರಾಮಿಕ ರೋಗ ಹಿನ್ನೆಲೆ ಈ ವರ್ಷ ಶಾಲಾ ಮಕ್ಕಳಿಗೆ ತರಗತಿಗಳನ್ನು ಆನ್ಲೈನ್ ಮೂಲಕ ಮಾಡಲಾಗ್ತಿದೆ. ರಾಜ್ಯದ ಅನೇಕ ಕಡೆ ಸಾವಿರಾರು ಮಕ್ಕಳಿಗೆ ಸ್ಮಾರ್ಟ್ಫೋನ್ಗಳಿಲ್ಲದೆ ತರಗತಿಗಳಿಗೆ ಹಾಜರಾಗಲು ಆಗ್ತಿಲ್ಲ. ರಾಜ್ಯದ ಅನೇಕ ಕಡೆ ಮಕ್ಕಳು ನೆಟ್ವರ್ಕ್ ಸಿಗದೆ ಬೆಟ್ಟ ಗುಡ್ಡ ಸೇರಿದಂತೆ ಎತ್ತರದ ಪ್ರದೇಶಗಳಿಗೆ ಹೋಗಿ ತರಗತಿಗಳನ್ನು ಕೇಳುವಂತಾಗಿದೆ. ಈ ಮಧ್ಯೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಕಿಡಿಕಾರಿದ್ದಾರೆ. ಈ ಕುರಿತು ತಮ್ಮ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು, 27% ವಿದ್ಯಾರ್ಥಿಗಳ ಬಳಿ ಲ್ಯಾಪ್ಟಾಪ್ ಇಲ್ಲ. ಆನ್ಲೈನ್ ಶಿಕ್ಷಣ ಎಂದು ಕೊಚ್ಚಿಕೊಳ್ತೀರಿ. ಹೀಗಿದ್ದರೂ ನಾನು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ನೀಡುವ ಯೋಜನೆ ರದ್ದು ಮಾಡ್ತೀರಿ. ನಿಮಗೆ ಕೊಟ್ಟು ಗೊತ್ತಿಲ್ಲ, ಕಿತ್ತುಕೊಳ್ಳೊದಷ್ಟೇ ಗೊತ್ತು. ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲ ಸಮಯಗಳಿಂದ ರಾಜ್ಯ ಸರ್ಕಾರದ ನಡೆಗಳ ವಿರುದ್ಧ ಕಿಡಿಕಾರುತ್ತಲೇ ಬಂದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೊರೊನಾ ನಿರ್ವಹಣೆ, ಬೆಂಗಳೂರು ಗಲಭೆ ಸೇರಿದಂತೆ ಅನೇಕ ಘಟನೆಗಳ ಬಗ್ಗೆ ರಾಜ್ಯ ಸರ್ಕಾರದ ನಿಲುವುಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಆನ್ಲೈನ್ ಶಿಕ್ಷಣದ ಕುರಿತಾಗಿ ಸರ್ಕಾರ ಸೂಕ್ತವಾಗಿ ಸ್ಪಂದಿಸದೇ ಇರುವುದನ್ನು ಖಂಡಿಸಿದ್ದಾರೆ.
from India & World News in Kannada | VK Polls https://ift.tt/34i38jC