ಬೆಂಗಳೂರು: ಮುಖ್ಯಮಂತ್ರಿ ಅವರಿಗೆ ಕೊರೊನಾ ಪಾಸಿಟಿವ್ ಕಂಡು ಬಂದ ಹಿನ್ನೆಲೆಯಲ್ಲಿ ಸಿಎಂ ಪುತ್ರ ಬಿ.ವೈ ವಿಜಯೇಂದ್ರ ಅವರು ಸ್ವಯಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ. ವಿಜಯೇಂದ್ರ ಬಿಎಸ್ವೈ ಜೊತೆಗೆ ನಿರಂತರವಾಗಿ ಸಂಪರ್ಕದಲ್ಲಿದ್ದರು. ಈ ಹಿನ್ನೆಲೆಯಲ್ಲಿ ಅವರು ಸ್ವಯಂ ನಿರ್ಬಂಧಕ್ಕೆ ಒಳಗಾಗಲು ನಿರ್ಧರಿಸಿದ್ದಾರೆ. ಭಾನುವಾರ ಸಿಎಂ ಬಿಎಸ್ವೈ ಅವರಿಗೆ ಸೋಂಕು ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಎಂಗೆ ಸೋಂಕು ಇದ್ದರೂ ಯಾವುದೇ ಲಕ್ಷಣಗಳು ಅವರಲ್ಲಿ ಕಾಣಿಸಿಕೊಂಡಿಲ್ಲ. ಹೀಗಿದ್ದರೂ ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗಾಗಲೇ ಬಿಎಸ್ವೈ ಅವರು ಕೂಡಾ ಟ್ವೀಟ್ ಮಾಡುವ ಮೂಲಕ ತಮ್ಮ ಜೊತೆಗೆ ಸಂಪರ್ಕ ಹೊಂದಿದ್ದವರು ಕ್ವಾರಂಟೈನ್ ಆಗಲು ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಕುಟುಂಬಸ್ಥರು ಹಾಗೂ ಅವರ ಜೊತೆಗೆ ನೇರ ಸಂಪರ್ಕ ಹೊಂದಿರುವವರೆಲ್ಲಾ ಕ್ವಾರಂಟೈನ್ಗೆ ಒಳಗಾಗಿದ್ದಾರೆ. ಸಿಎಂ ಪುತ್ರ ಬಿ.ವೈ ವಿಜಯೇಂದ್ರ ಅವರು ನಿತ್ಯ ಬಿಎಸ್ವೈ ಜೊತೆಗೆ ಸಂಪರ್ಕದಲ್ಲಿದ್ದರು. ಈ ಕಾರಣಕ್ಕಾಗಿ ವಿಜಯೇಂದ್ರ ಹಾಗೂ ಅವರ ಪತ್ನಿ ಸೇರಿದಂತೆ ಕುಟುಂಬಸ್ಥರು ಮುಂಜಾಗರೂಕತಾ ಕ್ರಮವಾಗಿ ಕ್ವಾರಂಟೈನ್ಗೆ ಒಳಗಾಗಿದ್ದಾರೆ. ಅವರೆಲ್ಲಾ ಕೋವಿಡ್ ತಪಾಸಣೆ ಮಾಡಿಸಿಕೊಂಡರೂ ಫಲಿತಾಂಶ ನೆಗೆಟಿವ್ ಬಂದಿದೆ ಎಂಬ ಮಾಹಿತಿ ಇದೆ.
from India & World News in Kannada | VK Polls https://ift.tt/2BQMJ9V