ಬಿಎಸ್‌ವೈಗೆ ಕೋವಿಡ್‌ : ಕಳೆದ ಒಂದು ವಾರದ ಸಿಎಂ ಟ್ರಾವೆಲ್ ಹಿಸ್ಟರಿ ವಿವರ ಹೀಗಿದೆ

ಬೆಂಗಳೂರು: ಮುಖ್ಯಮಂತ್ರಿ ಅವರಿಗೆ ಕೋವಿಡ್‌ 19 ಇರುವುದು ದೃಢಪಟ್ಟಿದೆ. ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಿಎಸ್‌ವೈ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕಳೆದ ಒಂದು ವಾರದಲ್ಲಿ ಬಿಎಎಸ್‌ವೈ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಅವರು ಭಾಗಿಯಾಗಿರುವ ಕಾರ್ಯಕ್ರಮಗಳ ಹಾಗೂ ಟ್ರಾವೆಲ್‌ ಹಿಸ್ಟರಿಯ ವಿವರ ಇಲ್ಲಿದೆ. ಜುಲೈ 27, ಸೋಮವಾರ: ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ವಾರ್ತಾ ಇಲಾಖೆಯ ವತಿಯಿಂದ ಆಯೋಜಿಸಿರುವ ಸಮಸ್ಯೆ - ಸವಾಲುಗಳ ಒಂದು ವರ್ಷ: ಪರಿಹಾರದ ಸ್ಪರ್ಶ ಸಾಧನಾ ಸಮಾವೇಶಲ್ಲಿ ಸಿಎಂ ಬಿಎಸ್‌ ಯಡಿಯೂರಪ್ಪ ಭಾಗಿ. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್, ಸಚಿವ ಆರ್‌. ಅಶೋಕ್‌ ಉಪಸ್ಥಿತಿ. ಜುಲೈ 28, ಮಂಗಳವಾರ: ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಆತ್ಮ ನಿರ್ಬರ್ ನಿಧಿ ಮೂಲಕ‌ ಬೀದಿ ಬದಿ ವ್ಯಾಪಾರಿಗಳಿಗೆ ಯಾವ ರೀತಿ ಉತ್ತೇಜನ ನೀಡಬಹುದು ಅನ್ನುವದರ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಜೊತೆಗೆ ಸಂವಾದ ಕಾರ್ಯಕ್ರಮ.ಕಾರ್ಯಕ್ರಮದಲ್ಲಿ ಪ್ರಮುಖ ಸಚಿವರು ಭಾಗಿ. ಜುಲೈ 28, ಮಂಗಳವಾರ: ಜೆ.ಎಸ್.ಎಸ್. ಮಹಾವಿದ್ಯಾಪೀಠ , ಮೈಸೂರು ವತಿಯಿಂದ ಆಯೋಜಿಸಿದ್ದ ಶಿವಪದ ರತ್ನಕೋಶ ಗ್ರಂಥವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆನ್ ಲೈನ್ ಮೂಲಕ ಲೋಕಾರ್ಪಣೆ ಮಾಡಿದ್ದರು. ಕಾರ್ಯಕ್ರಮದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಿಟಿ ರವಿ, ಡಿಸಿಎಂ ಗೋವಿಂದ ಕಾರಜೋಳ ಇದ್ದರು. ಜುಲೈ 28, ಮಂಗಳವಾರ: ಮೈಕ್ರೋಸಾಫ್ಟ್ ಕಂಪನಿಯ ವತಿಯಿಂದ ಮೂರು ಆರ್.ಟಿ. ಪಿ.ಸಿ.ಆರ್. ಟಿ ಪರೀಕ್ಷಾ ಯಂತ್ರಗಳನ್ನು ಕೊಡುಗೆ ಕಾರ್ಯಕ್ರಮದಲ್ಲಿ ಸಿಎಂ ಭಾಗಿ. ಜುಲೈ 29, ಬುಧವಾರ: ಮೆ. ಲ್ಯಾಬ್ ಜೋನ್ ಎಲೆಕ್ಟ್ರಾನಿಕ್ ಸಿಟಿ ಪ್ರೈ ಲಿ.‌ಇವರಿಂದ ಅಭಿವೃದ್ಧಿ ಪಡಿಸಿರುವ ಬೆಂಗಳೂರು ಲೈಪ್ ಸೈನ್ಸಸ್ ಪಾರ್ಕ್ ಭೂಮಿ ಪೂಜೆಯಲ್ಲಿ ಬಿಎಸ್‌ವೈ ಭಾಗಿ. ಜುಲೈ 30, ಗುರುವಾರ: ಮೀನುಗಾರಿಕೆ ಇಲಾಖೆ ವತಿಯಿಂದ ಆಯೋಜಿಸಿರುವ ಮೀನು ಕೃಷಿಕರ ದಿನಾಚರಣೆ ಹಾಗೂ ಮೀನುಗಾರಿಕೆ ಇಲಾಖೆಯ 2013-14 ರಿಂದ 2018-19 ರವರೆಗಿನ ಮಾಹಿತಿನ್ನೊಳಗೊಂಡ ಅಂಕಿ ಅಂಶಗಳ ಸಂಚಿಕೆಯನ್ನು‌ ಬಿಎಸ್‌ವೈ ಬಿಡುಗಡೆ‌ ಮಾಡಿದ್ದರು.ಕಾರ್ಯಕ್ರಮದಲ್ಲಿ ಸಚಿವ ಆರ್‌. ಅಶೋಕ್‌ ಮತ್ತಿತರರು ಭಾಗಿ. ಜುಲೈ 30 ಗುರುವಾರ: ಶಿವಾಜಿನಗರದಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ ವತಿಯಿಂದ ಆಯೋಜಿಸಿರುವ ಬೆಂಗಳೂರು ಮೆಟ್ರೋ ಹಂತ-2 ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಿಂದ ಮತ್ತು ಶಿವಾಜಿನಗರ ಮೆಟ್ರೋ ನಿಲ್ದಾಣಗಳ ನಡುವೆ ಸುರಂಗ ಮಾರ್ಗಕ್ಕೆ ಮುಖ್ಯಮಂತ್ರಿ ‌ಬಿ.ಎಸ್. ಯಡಿಯೂರಪ್ಪ ಅವರು ಚಾಲನೆ ನೀಡಿದ್ದರು. ಜುಲೈ 31 ಶುಕ್ರವಾರ : ರಾಷ್ಟ್ರೀಯ ಶಿಕ್ಷಣ ನೀತಿ ಕರಡು ಸಮಿತಿಯ (NEP) ಅಧ್ಯಕ್ಷರಾದ ಹಿರಿಯ ವಿಜ್ಞಾನಿ ಕಸ್ತೂರಿ ರಂಗನ್ ಅವರನ್ನು ಬಿಎಸ್‌ವೈ ಭೇಟಿಯಾಗಿ‌ ಅವರಿಗೆ ಅಭಿನಂದನೆ ಸಲ್ಲಿಸಿದ್ದರು. ಜುಲೈ 31 ಶುಕ್ರವಾರ: ರಾಜ್ಯಪಾಲ ವಜುಭಾಯಿ ವಾಲ ಭೇಟಿ ಮಾತುಕತೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ ಉಪಸ್ಥಿತಿ. ಶನಿವಾರ ಅಗಸ್ಟ್‌ 1 ರಂದು ಬಕ್ರೀದ್‌ ಕಾರಣಕ್ಕಾಗಿ ರಜಾ ದಿನವಿತ್ತು. ಈ ದಿನದಂದು ಸಿಎಂ ಅಧಿಕೃತ ಕಾರ್ಯಕ್ರಮಗಳು ಯಾವುದೂ ಇರಲಿಲ್ಲ. ಭಾನುವಾರ ರಾತ್ರಿ ಕೋವಿಡ್‌ ಇರುವುದು ದೃಢಪಟ್ಟಿದೆ. ಬಳಿಕ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು.


from India & World News in Kannada | VK Polls https://ift.tt/33liP96

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...