'ಇವರು ತಂಡದಲ್ಲಿ ಸ್ಥಾನ ಪಡೆದಿದ್ದರೆ ಭಾರತ ವಿಶ್ವಕಪ್‌ ಗೆಲ್ಲುತ್ತಿತ್ತು' : ಸಿಎಸ್‌ಕೆ ಆಟಗಾರನ ಪರ ಬ್ಯಾಟ್‌ ಬೀಸಿದ ರೈನಾ!

ಹೊಸದಿಲ್ಲಿ: 2019ರ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಭಾರತಕ್ಕೆ ನಾಲ್ಕನೇ ಕ್ರಮಾಂಕದ ಬ್ಯಾಟ್ಸ್‌ಮನ್ ಸಮಸ್ಯೆ ಎದುರಾಗಿತ್ತು. 2019ಕ್ಕೂ ಮುನ್ನ ಭಾರತ ತಂಡ ಸಾಕಷ್ಟು ಬ್ಯಾಟ್ಸ್‌ಮನ್‌ಗಳನ್ನು ಈ ಸ್ಥಾನಕ್ಕೆ ಪ್ರಯತ್ನ ನಡೆಸಿತ್ತು ಆದರೆ ಯಾವೊಬ್ಬ ಆಟಗಾರ ಈ ಸ್ಥಾನಕ್ಕೆ ನ್ಯಾಯ ದೊರಕಿಸಿಕೊಡಲಿಲ್ಲ. ನಂ.4 ಸ್ಥಾನಕ್ಕೆ ಹೈದರಾಬಾದ್‌ ಬ್ಯಾಟ್ಸ್‌ಮನ್‌ ಅವರಿಗೆ ಅವಕಾಶ ನೀಡಲಾಗಿತ್ತು ಅದರಂತೆ ಅವರು ಭರವಸೆ ಮೂಡಿಸಿದ್ದರು. ಹಲವು ಪಂದ್ಯಗಳಲ್ಲಿ ಅವರು ನಾಲ್ಕನೇ ಕ್ರಮಾಂಕದಲ್ಲಿ ರನ್‌ಗಳನ್ನು ಗಳಿಸಿದ್ದರು. ಜತೆಗೆ ಏಕದಿನ ವಿಶ್ವಕಪ್‌ ಟೂರ್ನಿಗೂ ಅವರನ್ನು ತಯಾರಿ ಮಾಡಲಾಗಿತ್ತು. ಆದರೆ ರಾಷ್ಟ್ರೀಯ ತಂಡದ ಆಯ್ಕೆ ಸಮಿತಿಯು ಅಂಬಾಟಿ ರಾಯುಡು ಬದಲು ತಮಿಳುನಾಡಿನ ವಿಜಯ್‌ ಶಂಕರ್‌ ಅವರನ್ನು ವಿಶ್ವಕಪ್‌ ಟೂರ್ನಿಗೆ ಆಯ್ಕೆ ಮಾಡಿದರು. ಈ ನಿರ್ಧಾರ ಎಲ್ಲರಿಗೂ ಅಚ್ಚರಿ ತಂದಿತ್ತು. ಅಂಬಾಟಿ ರಾಯುಡು ಅವರನ್ನು ತಂಡದಿಂದ ಕೈಬಿಟ್ಟಿದ್ದಕ್ಕೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿತ್ತು. ಇದರಿಂದ ತೀವ್ರ ಅಸಮಾಧಾನಗೊಂಡಿದ್ದ ರಾಯುಡು '3ಡಿ' ಕನ್ನಡಿಯಲ್ಲಿ ಟೂರ್ನಿಯನ್ನು ವೀಕ್ಷಿಸುತ್ತೇನೆಂದು ಟ್ವೀಟ್‌ ಮಾಡಿದ್ದರು. ಇದು ಸೋಶಿಯಲ್‌ ಮೀಡಿಯಾದಲ್ಲಿ ಸಾಕಷ್ಟು ವೈರಲ್‌ ಆಗಿತ್ತು. ನಾಲ್ಕನೇ ಕ್ರಮಾಂಕದ ಸಮಸ್ಯೆಯಿಂದ ಸೆಮಿಫೈನಲ್‌ ಹಣಾಹಣಿಯಲ್ಲಿ ನ್ಯೂಜಿಲೆಂಡ್‌ ವಿರುದ್ಧ ಸೋತು ಟೂರ್ನಿಯಿಂದ ಹೊರ ನಡೆದಿತ್ತು. ಇತ್ತೀಚೆಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದ , ಭಾರತ ತಂಡದ ನಾಲ್ಕನೇ ಕ್ರಮಾಂಕಕ್ಕೆ ಅಂಬಾಟಿ ರಾಯುಡು ಸೂಕ್ತ ಎಂದಿದ್ದಾರೆ. ಒಂದು ವೇಳೆ ರಾಯುಡು 2019ರ ವಿಶ್ವಕಪ್‌ ತಂಡದಲ್ಲಿ ಸ್ಥಾನ ಪಡೆದಿದ್ದರೆ, ಟೀಮ್‌ ಇಂಡಿಯಾ ವಿಶ್ವಕಪ್‌ ಗೆಲ್ಲುತ್ತಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. "ಅಂಬಾಟಿ ರಾಯುಡು ಅವರನ್ನು ಭಾರತ ತಂಡದ ನಾಲ್ಕನೇ ಕ್ರಮಾಂಕಕ್ಕೆ ಆಡಿಸಬೇಕು ಏಕೆಂದರೆ ಅವರು ಒಂದು ಅಥವಾ ಒಂದೂವರೆ ವರ್ಷದಿಂದ ಸಾಕಷ್ಟು ಕಠಿಣ ಪರಿಶ್ರಮ ಪಟ್ಟಿದ್ದರು. ಅದರಂತೆ ನಾಲ್ಕನೇ ಕ್ರಮಾಂಕಕ್ಕೆ ಅವರು ಅದ್ಭುತ ತಯಾರಿ ನಡೆಸಿದ್ದರು ಆದರೆ ಅವರನ್ನು ತಂಡಕ್ಕೆ ಆಯ್ಕೆ ಮಾಡಲಿಲ್ಲ. 2018ರ ಪ್ರವಾಸವನ್ನು ನಾನು ಸರಿಯಾಗಿ ಆಹ್ಲಾದಿಸಲಿಲ್ಲ ಏಕೆಂದರೆ ರಾಯುಡು ಫಿಟ್ನೆಸ್‌ ಅನುತೀರ್ಣರಾಗಿದ್ದರು," ಎಂದು ಸುರೇಶ್‌ ರೈನಾ ಕ್ರಿಕ್‌ಬಜ್‌ಗೆ ತಿಳಿಸಿದ್ದಾರೆ. "ಅಂಬಾಟಿ ರಾಯುಡು ನಾಲ್ಕನೇ ಕ್ರಮಾಂಕಕ್ಕೆ ಅತ್ಯುತ್ತಮ ಆಯ್ಕೆ. ವಿಶ್ವಕಪ್‌ ಟೂರ್ನಿಗೆ ತಂಡದಲ್ಲಿ ಅವರು ಸ್ಥಾನ ಪಡೆದಿದ್ದರೆ ಖಂಡಿತಾ ಭಾರತ ಜಯ ಸಾಧಿಸುತ್ತಿತ್ತು. ರಾಯುಡು ನಾಲ್ಕನೇ ಕ್ರಮಾಂಕಕ್ಕೆ ಅತ್ಯುತ್ತಮ ಆಯ್ಕೆ, ಅದೇ ರೀತಿಯಲ್ಲೇ ಅವರು ಚೆನ್ನೈ ಸೂಪರ್‌ ಕಿಂಗ್ಸ್ ತಂಡದಲ್ಲಿ ಆಡುತ್ತಾರೆ ಹಾಗೂ ಚೆನ್ನೈ ಕ್ಯಾಂಪ್‌ನಲ್ಲಿ ಅವರು ಅತ್ಯುತ್ತಮ ಬ್ಯಾಟಿಂಗ್‌ ಮಾಡಿದ್ದರು," ಎಂದು ಸುರೇಶ್‌ ರೈನಾ ಸಹ ಆಟಗಾರ ಅಂಬಾಟಿ ರಾಯುಡು ಪರ ಬ್ಯಾಟ್‌ ಬೀಸಿದ್ದಾರೆ. ವಿಜಯ್‌ ಶಂಕರ್‌ ಹಾಗೂ ರಿಷಭ್‌ ಪಂತ್‌ ವಿಶ್ವಕಪ್‌ ಟೂರ್ನಿಗೆ ಮಧ್ಯಮ ಕ್ರಮಾಂಕದಲ್ಲಿ ಆಡಿಸಲು ಆಯ್ಕೆ ಮಾಡಲಾಗಿತ್ತು ಆದರೆ ಅವರು ಹೇಳಿಕೊಳ್ಳುವಂಥ ಪ್ರದರ್ಶನ ತೋರಿರಲಿಲ್ಲ. ಈ ಕಾರಣದಿಂದಲೇ ಭಾರತ ತಂಡದ ನಾಲ್ಕನೇ ಕ್ರಮಾಂಕ ತುಂಬಾ ದುರ್ಬಲವಾಗಿತ್ತು.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/3aYI2Ix

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...