ಬೆಂಗಳೂರು: ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಸೇರಿದಂತೆ ವಿವಾದಾತ್ಮಕ ಸುಗ್ರೀವಾಜ್ಞೆಗಳನ್ನು ವಿರೋಧಿಸಿ ನಗರದ ಫ್ರೀಡಂ ಪಾರ್ಕ್ನಲ್ಲಿ ನಡೆಯುತ್ತಿರುವ ರೈತ, ಕಾರ್ಮಿಕ ಸಂಘಟನೆಗಳ ಪ್ರತಿಭಟನೆಯ ನಡುವೆ ಇದೀಗ ಕೂಡಾ ಬೀದಿಗಿಳಿಯಲು ಸಜ್ಜಾಗಿದ್ದಾರೆ. ಕೊರೊನಾ ಸೋಂಕಿತರ ಪತ್ತೆ ಹಾಗೂ ವಿವಿಧ ಆರೋಗ್ಯ ಕಾರ್ಯಕ್ರಮಗಳಡಿ ಸುಮಾರು 42 ಸಾವಿರ ಆಶಾ ಕಾರ್ಯಕರ್ತೆಯರು ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ 6 ಸಾವಿರ ಮಾಸಿಕ ವೇತನ ನೀಡಲಾಗುತ್ತಿದ್ದು, ಇದನ್ನು 12,000ಕ್ಕೆ ಏರಿಕೆ ಮಾಡಬೇಕು ಎಂದು ಆಗ್ರಹಿಸಿ ಕೊರೊನಾ ವಾರಿಯರ್ಸ್ಗಳಾದ ಆಶಾ ಕಾರ್ಯಕರ್ತೆಯರು ಹಮ್ಮಿಕೊಂಡಿದ್ದಾರೆ. ಕೊರೊನಾ ಸಂದರ್ಭದಲ್ಲಿ ಕಾರ್ಯನಿರ್ವಹಿಸುವಾಗ ಅಗತ್ಯ ಮೂಲಭೂತ ಸೌಕರ್ಯಗಳನ್ನು ನೀಡಬೇಕು ಎಂಬ ಬೇಡಿಕೆಯನ್ನು ಆಶಾ ಕಾರ್ಯಕರ್ತೆಯರು ಮುಂದಿಟ್ಟಿದ್ದು, ಕೊರೊನಾ ಸಂಕಷ್ಟದ ನಡುವೆಯೂ ತಮ್ಮ ಬೇಡಿಕೆಗಳಿಗೆ ಸ್ಪಂದಿಸದೆ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದೆ ಎಂಬುವುದು ಆಶಾ ಕಾರ್ಯಕರ್ತೆಯರ ಆರೋಪವಾಗಿದೆ. ಹೀಗಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ರಾಜ್ಯಮಟ್ಟದ ಪ್ರತಿಭಟನಾ ಸಭೆ ಇಂದು ನಡೆಯಲಿದೆ. ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ಗಮನ ಸೆಳೆಯಲು ಆಶಾ ಕಾರ್ಯಕರ್ತೆಯರು ಮುಂದಾಗಿದ್ದು, ತಮ್ಮ ಎಲ್ಲಾ ಬೇಡಿಕೆ ಈಡೇರಿಸಲು ಒತ್ತಾಯಿಸಿ ಬುಧವಾರ ಮಧ್ಯಾಹ್ನ 12 ಗಂಟೆಯಿಂದ ಫ್ರೀಡಂ ಪಾರ್ಕ್ನಲ್ಲಿ ನಡೆಯುವ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಸಾಕಷ್ಟು ಕುತೂಹಲ ಮೂಡಿಸಿದೆ.
from India & World News in Kannada | VK Polls https://ift.tt/3hWrKS0