ಬೆಂಗಳೂರು: ಹಾಗೂ ಮಸೂದೆಗಳು ಶುಕ್ರವಾರ ವಿಧಾನಸಭೆಯಲ್ಲಿ ಅಂಗೀಕಾರಗೊಳ್ಳುವ ಸಾಧ್ಯತೆ ಇದೆ. ಈ ಎರಡು ವಿವಾದಾತ್ಮಕ ಮಸೂದೆಗಳನ್ನು ವಿರೋಧಿಸಿ ರಾಜ್ಯಾದ್ಯಂತ ರೈತ, ದಲಿತ,ಕಾರ್ಮಿಕ ಸಂಘಟನೆಗಳು ಶುಕ್ರವಾರ ಪ್ರತಿಭಟನೆ ನಡೆಸಲಿವೆ. ಯಾವುದೇ ಕಾರಣಕ್ಕೂ ಸುಗ್ರೀವಾಜ್ಞೆಗಳನ್ನು ಅಂಗೀಕರಿಸದಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆಯನ್ನು ರೈತ ಸಂಘಟನೆಗಳು ಹಮ್ಮಿಕೊಂಡಿವೆ. ರೈತ ದಲಿತ ಕಾರ್ಮಿಕ ಐಕ್ಯ ಹೋರಾಟ ಸಮಿತಿ ಯಾವುದೇ ಕಾರಣಕ್ಕೂ ಈ ಸುಗ್ರಿವಾಜ್ಞೆ ಗಳನ್ನು ಅಂಗೀಕರಿಸದಂತೆ ಒತ್ತಾಯಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಸ್ಥಳದಲ್ಲಿ ಬೆಳಗ್ಗೆ 10-30 ಗಂಟೆಗೆ ರಸ್ತೆ ತಡೆ ನಡೆಸಲಿದೆ. ಅಲ್ಲದೆ, ರಾಜ್ಯಾದ್ಯಂತ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ಬಂಧನಕ್ಕೆ ಒಳಗಾಗಲು ಐಕ್ಯ ಹೋರಾಟದ ಸಂಘಟನೆಗಳು ಕರೆ ನೀಡಿವೆ. ಜೊತೆಗೆ ಸೆ. 28 ರಂದು ಕರ್ನಾಟಕ ಬಂದ್ ನಡೆಸಲು ಸಂಘಟನೆಗಳು ತೀರ್ಮಾನಿಸಿವೆ. ಸದನದಲ್ಲಿ ಗದ್ದಲ ಸಾಧ್ಯತೆ ವಿರೋಧದ ನಡುವೆಯೂ ಈ ಎರಡು ಸುಗ್ರೀವಾಜ್ಞೆಗಳಿಗೆ ಅಂಗೀಕಾರ ಪಡೆಯಲು ಸರ್ಕಾರ ಮುಂದಾಗಿರುವ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಶುಕ್ರವಾರ ಗದ್ದಲ ಉಂಟಾಗಲಿದೆ. ಕಾಂಗ್ರೆಸ್ ಈಗಾಗಲೇ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಿದೆ. ಈ ಕುರಿತಾದ ಪ್ರಸ್ತಾವನೆಯಲ್ಲಿ ಚರ್ಚೆ ನಡೆಸಲು ಸ್ಪೀಕರ್ ಅನುಮತಿ ನೀಡಿದರೆ ಆಡಳಿತ ಪಕ್ಷದ ವಿರುದ್ಧ ಮುಗಿಬೀಳಲು ಕಾಂಗ್ರೆಸ್ ಸಜ್ಜಾಗಿದೆ. ಅಲ್ಲದೆ ಭೂಸುಧಾರಣಾ ಕಾಯ್ದೆ ತಿದ್ದುಪಡಿ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ಮಸೂದೆಗಳ ಅಂಗೀಕಾರಕ್ಕೆ ದೊಡ್ಡ ಮಟ್ಟದಲ್ಲಿ ವಿರೋಧ ವ್ಯಕ್ತಪಡಿಸಲು ಕಾಂಗ್ರೆಸ್ ಹಾಗೂ ಜೆಡಿಎಸ್ ಮುಂದಾಗಿದೆ. ಪರಿಣಾಮ ಸದನದಲ್ಲಿ ಶುಕ್ರವಾರ ಕೋಲಾಹಲ ಉಂಟಾಗಲಿದೆ.
from India & World News in Kannada | VK Polls https://ift.tt/330tqWB