‘ಮೋದಿ ನಿರ್ಮಿತ ವಿಪತ್ತು’ಗಳಿಂದ ಭಾರತ ತತ್ತರಿಸುತ್ತಿದೆ..!; ರಾಹುಲ್ ಗಾಂಧಿ

ಹೊಸದಿಲ್ಲಿ: ದೇಶವು ‘ಮೋದಿ ನಿರ್ಮಿತ ವಿಪತ್ತುಗಳಿಂದ ತತ್ತರಿಸಿ ಹೋಗುತ್ತಿದೆ ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ. ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ರಾಹುಲ್ ಗಾಂಧಿ, ಪಾತಾಳಕ್ಕೆ ಇಳಿದಿರುವ ದೇಶದ ಆರ್ಥಿಕ ಸ್ಥಿತಿ, ನಿರಂತರವಾಗಿ ಸಾಂಕ್ರಾಮಿಕ ಕಾಯಿಲೆಯಲ್ಲಿ ಏರಿಕೆ, ಗಡಿಯಲ್ಲಿ ವಿದೇಶಗಳ ಆಕ್ರಮಣ ಇವುಗಳು ಮೋದಿ ನಿರ್ಮಿತ ದುರಂತವಾಗಿದ್ದು ಇದರಿಂದ ಭಾರತ ದೇಶದ ತತ್ತರಿಸಿ ಹೋಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕೊರೊನಾ ಹಿನ್ನೆಲೆ ಲಾಕ್‌ಡೌನ್ ಜಾರಿಗೊಳಿಸಿದ ನಂತರ ಭಾರತದ ಆರ್ಥಿಕ ಸ್ಥಿತಿ ಏಪ್ರಿಲ್-ಜೂನ್‌ ಅವಧಿಯಲ್ಲಿ ಕಂಡುಕೇಳರಿಯದ ರೀತಿಯಲ್ಲಿ ಅತ್ಯಂತ ಕೆಟ್ಟ ಕುಸಿತವನ್ನು ಕಂಡಿದೆ ಎಂದು ಅಧಿಕೃತ ಮಾಹಿತಿಗಳು ಹೊರಬಿದ್ದ ಬಳಿಕ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಹರಿಹಾಯ್ದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಭಾರತವು ‘ನರೇಂದ್ರ ’ನಿಂದ ತತ್ತರಿಸುತ್ತಿದೆ. 1. ಐತಿಹಾಸಿಕ ಜಿಡಿಪಿ ಕುಸಿತ -23.9%, 2.45 ವರ್ಷಗಳಲ್ಲೇ ಅತೀ ಹೆಚ್ಚು ನಿರುದ್ಯೋಗ, 3. 12 ಕೋಟಿ ಮಂದಿಯ ಉದ್ಯೋಗ ನಷ್ಟ, 4. ರಾಜ್ಯಗಳಿಗೆ ಸಲ್ಲಬೇಕಾದ ಜಿಎಸ್‌ಟಿ ಪಾಲನ್ನು ಕೇಂದ್ರ ಸರ್ಕಾರ ನೀಡದೇ ಇರುವುದು. 5. ಪ್ರತಿದಿನ ವಿಶ್ವದಲ್ಲೇ ಅತೀ ಹೆಚ್ಚು ಕೊರೊನಾ ಕೇಸ್‌ಗಳು ಹೆಚ್ಚುತ್ತಿರುವುದು. 6. ಗಡಿಭಾಗದಲ್ಲಿ ವಿದೇಶಗಳಿಂದ ಬಾಹ್ಯ ಆಕ್ರಮಣ’ ಎಂದು ಟ್ವೀಟ್ ಮಾಡಿದ್ದಾರೆ. ದೇಶ ಎದುರಿಸುತ್ತಿರುವ ಒಟ್ಟು ಆರು ಗಂಭೀರ ಸಮಸ್ಯೆಗಳನ್ನು ಉಲ್ಲೇಖಿಸಿರುವ ರಾಹುಲ್ ಗಾಂಧಿ, ಇವುಗಳೆಲ್ಲ ಮೋದಿ ನಿರ್ಮಿತ ವಿಪತ್ತುಗಳು ಎಂದು ಹೇಳಿದ್ದಾರೆ.


from India & World News in Kannada | VK Polls https://ift.tt/3lA8kp8

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...