ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ಸದನ ಹಾಗೂ ಜನರ ವಿಶ್ವಾಸ ಕಳೆದುಕೊಂಡಿದೆ. ಈ ನಿಟ್ಟಿನಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಕಾಂಗ್ರೆಸ್ ನಿರ್ಧರಿಸಿದೆ ಎಂದು ವಿರೋಧ ಪಕ್ಷದ ನಾಯಕ ಹೇಳಿದರು. ಗುರುವಾರ ವಿಧಾನಸಭೆಯ ಅಧಿವೇಶನದಲ್ಲಿ ಮಾತನಾಡಿದರು. ರಾಜ್ಯ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ನಿರ್ಧಾರಿಸಲಾಗಿದೆ ಎಂದು ಹೇಳಿದರು. ಈ ಸರ್ಕಾರ ಎಲ್ಲ ಕ್ಷೇತ್ರದಲ್ಲಿ ವಿಫಲವಾಗಿದೆ. ಬಿಎಸ್ವೈ ನೇತೃತ್ವದ ಸರಕಾರದಲ್ಲಿ ಜನರು ವಿಶ್ವಾಸ ಕಳೆದುಕೊಂಡಿದ್ದಾರೆ. ಸರ್ಕಾರದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿ ನಡೆಯುತ್ತಿದೆ. ವರ್ಗಾವಣೆ, ಅನುದಾನ ವಿಚಾರದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದರು. ಅಭಿವೃದ್ಧಿ ಕೆಲಸ ಕುಂಠಿತವಾಗಿದೆ. ಹಣಕಾಸು ಪರಿಸ್ಥಿತಿ ಅಧೋಗತಿಯಲ್ಲಿದೆ. ಸರಕಾರ ಜನ ವಿರೋಧಿ ಕಾನೂನುಗಳನ್ನು ಜಾರಿಗೊಳಿಸುತ್ತಿದೆ. ಈ ಸರಕಾರವೇ ಜನ ವಿರೋಧಿಯಾಗಿದೆ. ಅಭಿವೃದ್ಧಿ ಕುಂಠಿತವಾಗುತ್ತಿದೆ. ರಾಜ್ಯವು ಸಾಲಗಾರ ರಾಜ್ಯವಾಗುತ್ತಿದೆ. ಈಗಾಗಲೇ ಒಂದು ಲಕ್ಷದ ಒಂದು ಸಾವಿರ ಕೋಟಿ ಸಾಲ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
from India & World News in Kannada | VK Polls https://ift.tt/3mKl2lL