ಅತ್ತ ಹುತಾತ್ಮ ಯೋಧನಿಗೆ ಅಂತಿಮ ನಮನ, ಇತ್ತ ಇಬ್ಬರು ಲಷ್ಕರೆ ಉಗ್ರರನ್ನು ಹೊಡೆದುರುಳಿಸಿದ ಸೇನೆ!

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಕೆಲವು ದಿನಗಳಿಂದ ಗುಂಡಿನ ಸದ್ದು ಕೇಳಿ ಬರುತ್ತಿದೆ. ಇದೀಗ ಲಷ್ಕರೆ ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಯೋಧರು ಹೊಡೆದುರುಳಿಸಿದ್ದಾರೆ. ಇಲ್ಲಿನ ಜಿಲ್ಲೆಯ ಸಿರ್ಹಾಮಾ ಎಂಬಲ್ಲಿ ಅಡಗಿ ಕುಳಿತಿರುವ ಮಾಹಿತಿ ಹಿನ್ನೆಲೆ ಗುರುವಾರ ಪೊಲೀಸರು ಹಾಗೂ ಯೋಧರು ಸ್ಥಳಕ್ಕೆ ಡೌಡಾಯಿಸಿದ್ದರು. ಇದೀಗ ಶುಕ್ರವಾರ ಈ ಕಾರ್ಯಾಚರಣೆ ಮುಂದುವರಿದಿದ್ದು ಇಬ್ಬರು ಲಷ್ಕರೆ ಉಗ್ರರನ್ನು ಭಾರತೀಯ ಭದ್ರತಾ ಪಡೆ ಹೊಡೆದುರುಳಿಸಿದೆ. ಇನ್ನು ಇದಕ್ಕೂ ಮುನ್ನ ಉಗ್ರರು ಹಾಗೂ ಸೇನೆ ನಡುವೆ ಭಾರೀ ಪ್ರಮಾಣದ ಗುಂಡಿನ ಚಕಮಕಿ ನಡೆದಿದೆ. ಇನ್ನು ಸಾವನಪ್ಪಿದ ಉಗ್ರರಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರದೇಶದಲ್ಲಿ ಇನ್ನಷ್ಟು ಉಗ್ರರು ಅಡಗಿರುವ ಮಾಹಿತಿ ಇದ್ದು, ಹುಡುಕಾಟ ಮುಂದುವರಿಸಿದ್ದಾರೆ. ಹುತಾತ್ಮ ಯೋಧನಿಗೆ ಅಂತಿಮ ನಮನ! ಗುರುವಾರ ಬುಡ್ಗಾಮ್‌ ಜಿಲ್ಲೆಯಲ್ಲಿ ಉಗ್ರರು ಸಿಆರ್‌ಪಿಎಫ್‌ ಯೋಧನ ಮೇಲೆ ಗುಂಡು ಹಾರಿಸಿದ್ದರು ಘಟನೆಯಲ್ಲಿ ತೀವ್ರಗೊಂಡಿದ್ದ ವೀರ ಯೋಧ ಹುತಾತ್ಮರಾಗಿದ್ದರು. ಇದೀಗ ನಿಧನರಾದ ಯೋಧನಿಗೆ ಅಂತಿಮ ನಮನ ಸಲ್ಲಿಸಲಾಗಿದೆ. ಮಹಾರಾಷ್ಟ್ರದ ನಾಗ್ಪುರ ಮೂಲದ ಸಿಆರ್‌ಪಿಎಫ್‌ ಎಎಸ್‌ಐ ನರೇಶ್‌ ಉಮ್ರಾವ್‌ ಬಡೋಲೆ ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಿತು.


from India & World News in Kannada | VK Polls https://ift.tt/3091w8T

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...