ಕರ್ನಾಟಕ ಸೇರಿ ಏಳು ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಇಂದು ಪ್ರಧಾನಿ ಮೋದಿ ಸಭೆ

ಹೊಸದಿಲ್ಲಿ: ಕೊರೊನಾ ಸಾಂಕ್ರಾಮಿಕ ರೋಗ ಭಾರತಕ್ಕೆ ಅಪ್ಪಳಿಸಿದ ನಂತರ ಇಡೀ ದೇಶದ ಚಿತ್ರಣವೇ ಬದಲಾಗಿದೆ. ಲಾಕ್‌ಡೌನ್‌ ಜಾರಿ ನಂತರ ಎದುರಾದ ಆರ್ಥಿಕ ಸಂಕಷ್ಟಗಳಲ್ಲಿ ಭಾರತ ನಲುಗುತ್ತಿದೆ. ಈ ಮಧ್ಯೆ ಕೊರೊನಾ ರೋಗ ಇನ್ನೂ ತನ್ನ ಅಟ್ಟಹಾಸವನ್ನು ದೇಶದಲ್ಲಿ ನಿಲ್ಲಿಸಿಲ್ಲ. ಕೊರೊನಾ ಹರಡುವಿಕೆಯಲ್ಲಿ ಭಾರತ ವಿಶ್ವದಲ್ಲೇ ಎರಡನೇ ಸ್ಥಾನದಲ್ಲಿದೆ. ಈ ಮಧ್ಯೆ ಕೊರೊನಾ ಸಾಂಕ್ರಾಮಿಕ ರೋಗದ ಪರಿಸ್ಥಿತಿ ಮತ್ತು ರಾಜ್ಯಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಏಳು ರಾಜ್ಯಗಳ ಮತ್ತು ಆರೋಗ್ಯ ಸಚಿವರ ಜೊತೆ ವಿಡಿಯೋ ಕಾನ್ಫರೆನ್ಸ್‌ ನಡೆಸಲಿದ್ದಾರೆ. ದೇಶದಲ್ಲಿ ಕೆಲವು ರಾಜ್ಯಗಳಲ್ಲಿ ವೇಗವಾಗಿ ಕೊರೊನಾ ಸೋಂಕು ಹರಡುತ್ತಿದ್ದು, ಅಲ್ಲದೇ ಸಾವುಗಳ ಸಂಖ್ಯೆ ಮತ್ತು ರೋಗಿಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಕೊರೊನಾ ರೋಗವನ್ನು ತಡೆಗಟ್ಟುವ ನಿಟ್ಟಿನ್ಲಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಚರ್ಚಿಸಲು ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಅತೀ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗುತ್ತಿರುವ ರಾಜ್ಯಗಳಾದ ಮಹಾರಾಷ್ಟ್ರ, ಕರ್ನಾಟಕ, ಆಂಧ್ರಪ್ರದೇಶ, ಉತ್ತರಪ್ರದೇಶ, ತಮಿಳುನಾಡು, ಪಂಜಾಬ್ ಮತ್ತು ದೆಹಲಿ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಆರೋಗ್ಯ ಸಚಿವರ ಜೊತೆ ಮೋದಿ ಚರ್ಚೆ ನಡೆಸಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳು ಮತ್ತು ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸೂಚನೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.


from India & World News in Kannada | VK Polls https://ift.tt/2RSwb62

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...