
ಮೈಸೂರು: ದಸರಾಗೆ ಕಲಶಪ್ರಾಯವಾದ ಜಂಬೂಸವಾರಿ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಇನ್ನೇನು ಕೆಲವೇ ಗಂಟೆಗಳಲ್ಲಿ ಐತಿಹಾಸಿಕ ಜಂಬೂಸವಾರಿ ನಡೆಯಲಿದೆ. ಕೊರೊನಾ ಕಾರಣದಿಂದಾಗಿ ಈ ಬಾರಿ ಸರಳ ದಸರಾ ಆಚರಣೆ ಹಿನ್ನೆಲೆಯಲ್ಲಿ ಅರಮನೆ ಆವರಣದೊಳಗೆ ಜಂಬೂಸವಾರಿ ಮೆರವಣಿಗೆ ನಡೆಯಲಿದೆ. ಈ ಬಾರಿ ಕಾರ್ಯಕ್ರಮದಲ್ಲಿ ಕೇವಲ 300 ಮಂದಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ. ಕ್ಯಾಪ್ಟನ್ ಅಭಿಮನ್ಯು 750 ಕೆ.ಜಿ. ತೂಕದ ಚಿನ್ನದ ಅಂಬಾರಿ ಹೊರಲಿದ್ದು, ಜಂಬೂಸವಾರಿಯಲ್ಲಿ 4 ಕಲಾತಂಡ, ಅಶ್ವಾರೋಹಿ ದಳದ 2 ತುಕಡಿ, 1 ಸ್ತಬ್ದ ಚಿತ್ರ, ಕರ್ನಾಟಕ ಪೊಲೀಸ್ ವಾದನದ ಆನೆಗಾಡಿ ಸಾಗಲಿವೆ. ಈ ನಡುವೆ ಅಂಬಾ ವಿಲಾಸ ಅರಮನೆಗೆ ಬಿಗಿ ಪೊಲೀಸ್ ಭದ್ರತೆ ಸಹ ನೀಡಲಾಗಿದೆ. ಅರಮನೆಯಂಗಳದಲ್ಲಿ ಸಿಬ್ಬಂದಿ ನಿಯೋಜನೆಯಾಗಿದೆ. ಅರಮನೆಯ ಆರು ದ್ವಾರಗಳಿಗೆ ಹೆಚ್ಚು ಸಿಬ್ಬಂದಿ ನಿಯೋಜನೆಯಾಗಿದೆ. ಕೆ.ಆರ್,ಎನ್.ಆರ್, ಉದಯಗಿರಿ, ದೇವರಾಜ, ವಿದ್ಯಾರಣ್ಯಪುರಂ ಸೇರಿದಂತೆ ವಿವಿಧ ಠಾಣೆಯ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಮಹಿಳಾ ಸಿಬ್ಬಂದಿಗಳನ್ನೊಳಗೊಂಡಂತೆ ಜಂಬೂ ಸವಾರಿಗಾಗಿ 300ಕ್ಕೂ ಹೆಚ್ಚು ಪೊಲೀಸರ ಭದ್ರತೆಗಾಗಿ ನಿಯೋಜಿಸಲಾಗಿದೆ. ಈ ನಡುಗೆ ಮೈಸೂರು ಅರಮನೆಯ ಸುತ್ತ 144 ಸೆಕ್ಷನ್ ಸಹ ಜಾರಿ ಮಾಡಲಾಗಿದೆ. ಅರಮನೆಯ ಸುತ್ತಲಿನ ಕನಿಷ್ಠ 200 ಮೀಟರ್ ದೂರದಲ್ಲಿಯೂ ಸಹ ಯಾರು ನಿಲ್ಲುವಂತಿಲ್ಲ ಹಾಗೂ ಕಟ್ಟಡಗಳನ್ನ ಹತ್ತಿ ದಸರಾ ವೀಕ್ಷಿಸುವಂತಿಲ್ಲ ಎಂದು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.
from India & World News in Kannada | VK Polls https://ift.tt/3kv0I6u