ಅಂಗೀಕಾರವಾಗುತ್ತಾ ಸಿ.ಟಿ ರವಿ ರಾಜೀನಾಮೆ, ಬಿಜೆಪಿ ಹೈಕಮಾಂಡ್‌ ನಿಲುವೇನು?

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ, ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಶನಿವಾರ ಸಿಎಂ ಬಿಎಸ್‌ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರವನ್ನು ನೀಡಿದ್ದಾರೆ. ಆದರೆ ಸಿ.ಟಿ ರವಿ ರಾಜೀನಾಮೆ ಇನ್ನೂ ಅಂಗೀಕಾರಗೊಂಡಿಲ್ಲ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನೇಮಕಗೊಂಡಿರುವ ಹಿನ್ನೆಲೆಯಲ್ಲಿ ಸಿ.ಟಿ ರವಿ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿಯಲ್ಲಿ ಒಬ್ಬ ವ್ಯಕ್ತಿಗೆ ಒಂದು ಸ್ಥಾನ ಹಿನ್ನೆಲೆಯಲ್ಲಿ ಸಿ.ಟಿ ರವಿ ಈ ನಿರ್ಧಾರವನ್ನು ಕೈಗೊಂಡಿದ್ದಾರೆ ಎನ್ನಲಾಗಿದೆ. ಪಕ್ಷ ಸಂಘಟನೆಯ ಹಿನ್ನೆಲೆಯಲ್ಲಿ ಇನ್ನು ಮುಂದೆ ಹೆಚ್ಚಿನ ಸಮಯವನ್ನು ನೀಡಬೇಕಾಗಿರುವುದರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ ಎನ್ನಲಾಗಿದೆ. ಆದರೆ ಸಿ.ಟಿ ರವಿ ರಾಜೀನಾಮೆ ಇನ್ನೂ ಅಧಿಕೃತವಾಗಿ ಅಂಗೀಕಾರಗೊಂಡಿಲ್ಲ. ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿ.ಟಿ ರವಿ ದೆಹಲಿಗೆ ತೆರಳಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂಬ ಮಾಹಿತಿ ಇದೆ. ಇದಾದ ಬಳಿಕ ಮುಂದಿನ ನಿರ್ಧಾರ ಏನು ಎಂಬುವುದು ತಿಳಿದುಬರಲಿದೆ. ಸದ್ಯ ಅಂಗೀಕಾರ ಸಾಧ್ಯತೆ ಕಡಿಮೆ ಸಿ.ಟಿ ರವಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಸದ್ಯ ಇದು ಅಂಗೀಕಾರ ಆಗುವ ಸಾಧ್ಯತೆ ಬಹುತೇಕ ಕಡಿಮೆ ಎನ್ನಲಾಗುತ್ತಿದೆ. ಶೀಘ್ರದಲ್ಲೇ ಸಂಪುಟ ಪುನಾರಚನೆ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಸಚಿವ ಸ್ಥಾನದಲ್ಲಿ ಮುಂದುವರಿಯಯವಂತೆ ಹೈಕಮಾಂಡ್ ಸೂಚನೆ ನೀಡುವ ಸಾಧ್ಯತೆ ಇದೆ ಎನ್ನುತ್ತಿವೆ ಬಿಜೆಪಿ ಮೂಲಗಳು. ಇದೇ ಕಾರಣಕ್ಕಾಗಿ ಸಿ.ಟಿ ರವಿ ರಾಜೀನಾಮೆಯನ್ನು ಸಿಎಂ ಬಿಎಸ್ ಯಡಿಯೂರಪ್ಪ ಕೂಡಾ ಅಂಗೀಕಾರ ಮಾಡಿಲ್ಲ. ಹೈಕಮಾಂಡ್‌ ಸೂಚನೆಗೆ ಬಿಎಸ್‌ವೈ ಕಾಯುತ್ತಿದ್ದು ಬಳಿಕವಷ್ಟೇ ಮುಂದಿನ ಹೆಜ್ಜೆ ಇಡಲು ನಿರ್ಧರಿಸಿದ್ದಾರೆ.


from India & World News in Kannada | VK Polls https://ift.tt/2SoxaLp

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...