ರೋಹಿತ್‌, ಡಿ ಕಾಕ್‌ ಅಲ್ಲ.! ಪಂದ್ಯದ ದಿಕ್ಕನ್ನು ಬದಲಾಯಿಸುವ ತಾಕತ್ತು ಈ ಇಬ್ಬರಲ್ಲಿದೆ: ರಾಹುಲ್‌ ಚಹರ್‌

ಅಬುಧಾಬಿ: ಕಿಂಗ್ಸ್ ಇಲೆವೆನ್‌ ಪಂಜಾಬ್‌ ವಿರುದ್ಧದ ಪಂದ್ಯದಲ್ಲಿ ಎರಡು ವಿಕೆಟ್‌ಗಳನ್ನು ಪಡೆದು ಮುಂಬೈ ಇಂಡಿಯನ್ಸ್ ಗೆಲುವಿಗೆ ನೆರವಾದ , ಇಲ್ಲಿನ ವಿಕೆಟ್‌ ಸ್ಪಿನ್ನರ್‌ಗಳಿಗೆ ಸಹಾಯಕವಾಗಿತ್ತು ಎಂಬ ಅಂಶವನ್ನು ಬಹಿರಂಗಪಡಿಸಿದ್ದಾರೆ. ಗುರುವಾರ ರಾತ್ರಿ ನಡೆದ ಕಿಂಗ್ಸ್ ಇಲೆವೆನ್‌ ಪಂಜಾಬ್‌ ವಿರುದ್ಧದ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್‌ ಮಾಡಿದ ರಾಹುಲ್‌ ಚಹರ್‌ ನಾಲ್ಕು ಓವರ್‌ಗಳಿಗೆ 26 ರನ್‌ಗಳನ್ನು ನೀಡಿ ಎರಡು ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಅಂತಿಮವಾಗಿ ಮುಂಬೈ ಇಂಡಿಯನ್ಸ್ 48 ರನ್‌ಗಳಿಂದ ಗೆಲುವು ಸಾಧಿಸಿತ್ತು. ಪಂದ್ಯದ ಬಳಿಕ ಪ್ರತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಹುಲ್‌ ಚಹರ್‌, "ಇಲ್ಲಿನ ವಿಕೆಟ್‌ ಸ್ಪಿನ್ನರ್‌ಗಳಿಗೆ ಪೂರಕವಾಗಿತ್ತು. ಈ ಅಂಶ ನನ್ನಲ್ಲಿ ಆತ್ಮ ವಿಶ್ವಾಸವನ್ನು ಇನ್ನಷ್ಟು ಹೆಚ್ಚು ಮಾಡಿತು. ಕಡಿಮೆ ರನ್‌ ನೀಡಿ ಎದುರಾಳಿ ತಂಡದ ಮೇಲೆ ಒತ್ತಡ ಹೇರುವುದು ಹಾಗೂ ವಿಕೆಟ್‌ ಪಡೆಯುವುದು ಪಂದ್ಯದಲ್ಲಿನ ನನ್ನ ಯೋಜನೆ ಆಗಿತ್ತು," ಎಂದು ಹೇಳಿದರು. ಆರಂಭದಲ್ಲಿ ರೋಹಿತ್‌ ಶರ್ಮಾ ಅಬ್ಬರದ ಬಳಿಕ, ಇನಿಂಗ್ಸ್‌ನ ಕೊನೆಯ ಓವರ್‌ಗಳಲ್ಲಿ ಹಾರ್ದಿಕ್‌ ಪಾಂಡ್ಯ(30*) ಹಾಗೂ ಕಿರನ್‌ ಪೊಲಾರ್ಡ್(47*) ಸ್ಪೋಟಕ ಬ್ಯಾಟಿಂಗ್‌ ನೆರವಿನಿಂದ ಮುಂಬೈ ಇಂಡಿಯನ್ಸ್ 191 ರನ್‌ಗಳನ್ನು ಕಲೆ ಹಾಕಿತ್ತು. " ಹಾಗೂ ಅವರಲ್ಲಿನ ದೊಡ್ಡ ಹೊಡೆತಗಳನ್ನು ಹೊಡೆಯುವ ಕೌಶಲದ ಬಗ್ಗೆ ನಮ್ಮಲ್ಲಿ ಅಪಾರ ನಂಬಿಕೆ ಇದೆ. ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿಯೂ ಪೊಲಾರ್ಡ್ ತಂಡವನ್ನು ಗೆಲುವಿನ ಸಮೀಪ ತಂದಿದ್ದರು. ಈ ಇಬ್ಬರು ಅದ್ಭುತ ಲಯದಲ್ಲಿದ್ದು, ಯಾವುದೇ ಸನ್ನಿವೇಶದಲ್ಲಿ ಪಂದ್ಯವನ್ನು ಯಶಸ್ವಿಯಾಗಿ ಮುಗಿಸುತ್ತಾರೆ," ಎಂದು ಹೇಳಿದರು. ಗುರಿ ಹಿಂಬಾಲಿಸಿದ ಕಿಂಗ್ಸ್ ಇಲೆವೆನ್‌ ಪಂಜಾಬ್‌ ನಿಗದಿತ 20 ಓವರ್‌ಗಳಿಗೆ ಎಂಟು ವಿಕೆಟ್‌ಗಳನ್ನು ಕಳೆದುಕೊಂಡು 143 ರನ್‌ಗಳಿಗೆ ಸೀಮಿತವಾಯಿತು. ಪವರ್‌ ಪ್ಲೇನಲ್ಲಿ ಮೊದಲ ವಿಕೆಟ್‌ ಕಳೆದುಕೊಂಡ ಬಳಿಕ ಪಂಜಾಬ್‌ ತಂಡ ಮತ್ತೆ ಚೇತರಿಸಿಕೊಳ್ಳಲಿಲ್ಲ. ಕಳೆದ ಪಂದ್ಯಗಳಲ್ಲಿ ಮಿಂಚಿದ್ದ ಕೆ.ಎಲ್‌ ರಾಹುಲ್‌(17) ಹಾಗೂ ಮಯಾಂಕ್‌ ಅಗರ್ವಾಲ್‌(25) ಕಡಿಮೆ ಮೊತ್ತಕ್ಕೆ ವಿಕೆಟ್‌ ಒಪ್ಪಿಸಿದ್ದರು. ಮಧ್ಯಮ ಕ್ರಮಾಂಕದಲ್ಲಿ ಗ್ಲೆನ್‌ ಮ್ಯಾಕ್ಸ್‌ವೆಲ್‌(11) ಹಾಗೂ ಸರ್ಫರಾಜ್‌ ಖಾನ್‌(7) ನಿರಾಸೆ ಹುಸಿಗೊಳಿಸಿದರು. ಆದರೆ, ನಿಕೋಲಸ್‌ ಪೂರನ್‌(44) ಹಾಗೂ ಕೆ ಗೌತಮ್‌ (22*) ಕಠಿಣ ಹೋರಾಟ ನಡೆಸಿತಾದರೂ ಅಮತಿಮವಾಗಿ ಪಂಜಾಬ್‌ 48 ರನ್‌ಗಳಿಂದ ಸೋಲು ಅನುಭವಿಸಿತು. ರಾಹುಲ್‌ ಚಹರ್‌ ಜತೆಗೆ, ಜೇಮ್ಸ್ ಪ್ಯಾಟಿನ್ಸನ್‌ ಹಾಗೂ ಜಸ್ಪ್ರಿತ್‌ ಬುಮ್ರಾ ತಲಾ ಎರಡೆರಡು ವಿಕೆಟ್‌ಗಳನ್ನು ಕಬಳಿಸಿತು. ಟ್ರೆಂಟ್‌ ಬೌಲ್ಟ್ ಹಾಗೂ ಕೃನಾಲ್‌ ಪಾಂಡ್ಯ ತಲಾ ಒಂದು ವಿಕೆಟ್‌ ತೆಗೆದರು. ಕಿಂಗ್ಸ್ ಇಲೆವನ್‌ ಪಂಜಾಬ್‌ ಪರ ನಿಕೋಲಸ್‌ ಪೂರನ್‌ ಅದ್ಭುತ ಬ್ಯಾಟಿಂಗ್‌ ಮಾಡಿದರು. ಅವರು 27 ಎಸೆತಗಳಲ್ಲಿ 44 ರನ್‌ಗಳನ್ನು ಗಳಿಸಿ, ಉತ್ತಮ ಬ್ಯಾಟಿಂಗ್‌ ಮುಂದುವರಿಸಿದ್ದರು, ಆದರೆ, ಮತ್ತೊಂದು ತುದಿಯಲ್ಲಿ ಯಾರೂ ಸಾಥ್‌ ನೀಡದ ಕಾರಣ ಅವರು ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ಉಳಿಯಲಿಲ್ಲ. ಒಟ್ಟಾರೆ ನಿಗದಿತ 20 ಓವರ್‌ಗಳಿಗೆ ಕಿಂಗ್ಸ್ ಇಲೆವೆನ್‌ ಪಂಜಾಬ್‌ ಎಂಟು ವಿಕೆಟ್‌ಗಳನ್ನು ಕಳೆದುಕೊಂಡು 143 ರನ್‌ಗಳಿಗೆ ಸೀಮಿತವಾಯಿತು. ಅಂತಿಮವಾಗಿ 48 ರನ್‌ಗಳ ಭಾರಿ ಅಂತರದಲ್ಲಿ ಸೋಲು ಅನುಭವಿಸಿತು.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/3n58SEp

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...