ತಮಿಳುನಾಡಿನ ವಿಸಿಕೆ ಪಕ್ಷದ ಸಂಸದನ ವಿರುದ್ಧ ಪ್ರತಿಭಟನೆ: ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಬಂಧನ!

ಚೆನ್ನೈ: ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಅವರನ್ನು ಮಮಲಪುರಂ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಅವರ ಚಿದಂಬರಂ ಎಂಬಲ್ಲಿರುವ ನಿವಾಸದ ಬಳಿ ಪ್ರತಿಭಟನೆಗೆ ತೆರಳುವಾಗ ಪೊಲೀಸರು ಖುಷ್ಬೂ ಸುಂದರ್‌ ಹಾಗೂ 16 ಬಿಜೆಪಿ ಕಾರ್ಯಕರ್ತರನ್ನು ಮುತ್ತಕಾಡು ಎಂಬಲ್ಲಿ ಬಂಧಿಸಿ ವಾಹನದಲ್ಲಿ ಕರೆದುಕೊಂಡು ಹೋಗಿದ್ದಾರೆ. ವಿಡುತಲೈ ಚಿರುಥೈಗಲ್‌ ಕಡ್ಚಿ ಪಕ್ಷದ ಮುಖ್ಯಸ್ಥ ಹಾಗೂ ತಮಿಳುನಾಡಿನ ಸಂಸದರಾಗಿರುವ ಥೋಲ್ ತಿರುಮಾವಲನ್ ಮಹಿಳೆಯರಿಗೆ ಅವಮಾನ ಮಾಡುವ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಮಂಗಳವಾರ ಮುಂಜಾನೆ ಅವರ ನಿವಾಸದ ಮುಂದೆ ಪ್ರತಿಭಟನೆಗೆ ತೆರಳಿದ್ದಾರೆ. ಇದೆ ವೇಳೆ ವಿಡುತಲೈ ಚಿರುಥೈಗಲ್‌ ಕಡ್ಚಿ ಪಕ್ಷದ ಕಾರ್ಯಕರ್ತರು ಕೂಡ ಸಂಸದ ತಿರುಮಾವಲನ್ ಪರವಾಗಿ ಹಾಗೂ ಬಿಜೆಪಿ ವಿರುದ್ಧ ತಿರುಮಾವಲನ್ ನಿವಾಸದ ಮುಂದೆ ಪ್ರತಿಭಟನೆ ನಡೆಸುತ್ತಿದ್ದರು. ಈ ಹಿನ್ನೆಲೆ ಗಲಭೆ ಸೃಷ್ಟಿಯಾಗುವ ಸಾಧ್ಯತೆಯನ್ನು ಅರಿತ ಪೊಲೀಸರು ಮುತ್ತಕಾಡು ಎಂಬಲ್ಲಿ ಖೂಷ್ಬು ಅವರ ಕಾರು ತಡೆದು ಅನುಮತಿ ಪತ್ರ ಕೇಳಿದ್ದಾರೆ. ಇನ್ನು ಅನುಮತಿ ಇಲ್ಲವೆಂದು ಖೂಷ್ಬು ಹೇಳಿದಾಗ ಅವರನ್ನು ಹಾಗೂ ಅವರ ಜೊತೆ ಬಂದಿದ್ದ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿದ ಪೊಲೀಸರು‌ ವಾಹನದಲ್ಲಿ ಕರೆದುಕೊಂಡು ಹೋಗಿದ್ದಾರೆ. ಏನು ಹೇಳಿದ್ದರು ಥೋಲ್ ತಿರುಮಾವಲನ್? ಸನಾನತ ಹಿಂದೂ ಧರ್ಮ ಹಾಗೂ ಮನುಸ್ಮೃತಿ ಮಹಿಳೆಯರನ್ನು ವೇಶ್ಯೆ ಎಂದು ಕರೆಯುತ್ತದೆ. ದೇವರ ಸೂಚನೆಯಂತೆ ಇವರೆಲ್ಲ ವೇಶ್ಯೆಯರು ಎಂದು ಧರ್ಮ ಹೇಳುತ್ತದೆ. ಅಲ್ಲದೆ ಸನಾತನ ಧರ್ಮದ ಪ್ರಕಾರ ಮಹಿಳೆಯರು ಪುರಷರಿಗಿಂತ ಕೀಳಾದವರು. ಇದು ಬ್ರಾಹ್ಮಣ ಮಹಿಳೆಯರು ಸೇರಿ ಎಲ್ಲರಿಗೂ ಅನ್ವಯಿಸುತ್ತದೆ ಎಂದು ಹೇಳಿದ್ದರು. ಇವರ ಈ ಹೇಳಿಕೆಯ ವಿಡಿಯೋ ವೈರಲ್‌ ಆಗುತ್ತಿದ್ದಂತೆ, ತಿರುಮಾವಲನ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಹಲವು ಹಿಂದೂ ಸಂಘಟನೆಗಳು ಕಿಡಿ ಕಾರಿವೆ. ಬಿಜೆಪಿ ಕೂಡ ಇಂದು ಪ್ರತಿಭಟನೆಗೆ ಮುಂದಾಗುವಾಗ ಖೂಷ್ಬು ಅವರ ಬಂಧನವಾಗಿದೆ. ಇನ್ನೊಂದೆಡೆ ತಿರುಮಾವಲನ್ ಮನುಸ್ಮೃತಿಯನ್ನು ಬ್ಯಾನ್‌ ಮಾಡುವಂತೆ ಪ್ರತಿಭಟನೆ ನಡೆಸುವ ಮೂಲಕ ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.


from India & World News in Kannada | VK Polls https://ift.tt/3kySx98

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...