ಆಂಧ್ರ, ತಮಿಳುನಾಡು, ಪುದುಚೇರಿ ಕರಾವಳಿಗೆ ನಿವರ್‌ ಚಂಡಮಾರುತ ಭೀತಿ, 12 ಗಂಟೆಯೊಳಗೆ ರಕ್ಕಸ ಬಿರುಗಾಳಿ ಎಂಟ್ರಿ!

ಹೊಸದಿಲ್ಲಿ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ, ಹಾಗೂ ಪುದುಚೆರಿಯ ಕರಾವಳಿ ತೀರಕ್ಕೆ 'ನಿವರ್‌' ಚಂಡಮಾರುತವು ಮಂಗಳವಾರ ಮತ್ತು ಗುರುವಾರದ ಮಧ್ಯೆ ಅಪ್ಪಳಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಂಪುಟ ಕಾರ‍್ಯದರ್ಶಿ ರಾಜೀವ್‌ ಗೌಬಾ ನೇತೃತ್ವದ ರಾಷ್ಟ್ರೀಯ ಬಿಕ್ಕಟ್ಟು ನಿರ್ವಹಣಾ ಸಮಿತಿ (ಎನ್‌ಸಿಎಂಸಿ) ಸೋಮವಾರ ಸನ್ನದ್ಧತೆ ಕುರಿತು ಪರಿಶೀಲನಾ ಸಭೆ ನಡೆಸಿತು. ಗೌಬಾ ಅವರು ಸಂಭವನೀಯ ಹಾನಿ, ಜನರ ತೆರವು ಕಾರ್ಯಾಚರಣೆ ಮತ್ತು ಪುನರ್‌ವಸತಿ ಕ್ರಮಗಳ ಬಗ್ಗೆಯೂ ಮಾಹಿತಿ ಪಡೆದುಕೊಂಡು, ಈ ನಿಟ್ಟಿನಲ್ಲಿ ಸಕಲ ವ್ಯವಸ್ಥೆ ಮಾಡಿಟ್ಟುಕೊಳ್ಳುವಂತೆ ಸೂಚಿಸಿದರು. ಗೃಹ, ಇಂಧನ, ದೂರಸಂಪರ್ಕ, ನಾಗರಿಕ ವಿಮಾನಯಾನ, ಬಂದರು, ಆರೋಗ್ಯ, ರೈಲ್ವೆ ಮಂಡಳಿ, ಎನ್‌ಡಿಆರ್‌ಎಫ್‌ನ ಹಿರಿಯ ಅಧಿಕಾರಿಗಳೂ ಸಭೆಯಲ್ಲಿ ಪಾಲ್ಗೊಂಡಿದ್ದರು. ಇನ್ನು 12 ಗಂಟೆಯೊಳಗೆ ಚಂಡಮಾರುತ ತಮಿಳುನಾಡಿಗೆ ಎಂಟ್ರಿಕೊಡಲಿದ್ದು ತೀವ್ರ ಪ್ರಮಾಣದಲ್ಲಿ ಅಬ್ಬರಿಸಲಿದೆ ಎಂದು ತಿಳಿದುಬಂದಿದೆ. ಭಾರೀ ಪ್ರಮಾಣದ ಗುಡುಗು ಸಹಿತ ಮಳೆ, ಸುಂಟರಗಾಳಿ ಉಂಟಾಗಲಿದೆ. 100 ರಿಂದ 120 ಕಿ.ಮೀ ವೇಗದಲ್ಲಿ ಬಿರುಗಾಳಿ ಬಂದು ಅಪ್ಪಳಿಸಲಿದೆ. ಚಂಡಮಾರುತದ ಎಂಟ್ರಿ!ವಾಯುಭಾರ ಕುಸಿತದಿಂದ ನಿವಾರ್ ಚಂಡಮಾರುತವು ಕಾರೈಕಲ್ ಮತ್ತು ಮಹಾಬಲಿಪುರಂ ನಡುವೆ ದಾಟಿ ಹೋಗಲಿದೆಯಂತೆ. ಈ ವೇಳೆ ಸುಂಟರಗಾಳಿ ಸಮೇತ ಭಾರೀ ಮಳೆಯಾಗುವ ಸಾದ್ಯತೆ ಎದೆ ಎಂದು ಭಾರತದ ಹವಾಮಾನ ಇಲಾಖೆ ತಿಳಿಸಿದೆ. ಇನ್ನು ತಮಿಳುನಾಡಿನ ನಾಗಪಟ್ಟಣಂ, ಮೈಲಾಡುತುರೈ, ಅರಿಯಲೂರು, ಪೆರಂಬಲೂರ್, ಕಡಲೂರು, ವಿಲ್ಲುಪುರಂ ಪ್ರದೇಶಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ನವೆಂಬರ್ 25 ರಂದು ಕಲ್ಲಾಪುರಿಚಿ, ತಿರುವಣ್ಣಾಮಲೈ ಜಿಲ್ಲೆಗಳು ಮತ್ತು ಪುದುಚೇರಿ. ತಿರುವರೂರಿನ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇತ್ತ ಆಂಧ್ರಪ್ರದೇಶ, ತೆಲಂಗಾಣದ ಕೆಲವು ಪ್ರದೇಶಗಳ ಮೇಲೂ ನಿವರ್‌ ಚಂಡಮಾರುತದ ಪರಿಣಾಮ ಬೀರಲಿದೆ. ಈಗಾಗಲೇ ತಮಿಳುನಾಡಿನ ಏಳು ಜಿಲ್ಲೆಗಳಲ್ಲಿ ಬಸ್‌ ಸಂಚಾರ ಸ್ಥಗಿತಗೊಳಿಸಲಾಗಿದೆ. ಕೆಲವೆಡೆ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ. ಎನ್‌ಡಿಆರ್‌ಎಫ್‌ ತಂಡಗಳು ರೆಡಿ! ಇನ್ನು ಹವಾಮಾನ ಇಲಾಖೆ ಮುನ್ಸೂಚನೆ ಹಿನ್ನೆಲೆ ತಮಿಳುನಾಡು ಹಾಗೂ ಆಂಧ್ರಪ್ರದೇಶದ ಕರಾವಳಿಗೆ ಈಗಾಗಲೇ ಎನ್‌ಡಿಆರ್‌ಎಫ್‌ನ ವಿವಿಧ ತಂಡಗಳು ಭೇಟಿ ನೀಡಿವೆ. ಅಲ್ಲಿನ ಜನರನ್ನು ಸುರಕ್ಷಿತ ತಾಣಗಳಿಗೆ ಸ್ಥಳಾಂತರಿಸಿದೆ. ಕಡಲ್ಲೂರು, ಪುದುಚೇರಿ ಹಾಗೂ ಕರೈಕಾಲ್‌ನಲ್ಲಿ ಈಗಾಗಲೇ ಎನ್‌ಡಿಆರ್‌ಎಫ್ ಬೀಡುಬಿಟ್ದಿದೆ. ತನ್ನ ರಕ್ಷಣಾ ಸಿಬ್ಬಂದಿಗಳೊಂದಿಗೆ ಎಲ್ಲಾ ರೀತಿಯ ಸಮಸ್ಯೆ ಎದುರಿಸಲು ಸಜ್ಜಾಗಿದೆ.


from India & World News in Kannada | VK Polls https://ift.tt/35VYaJN

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...