ಸತತ ಸೋಲುಗಳ ಬಳಿಕ ಈ ಗೆಲುವು ಮಂದಹಾಸ ಮೂಡಿಸಿತೆಂದ ಅಯ್ಯರ್‌!

ಅಬುಧಾಬಿ: ಸತತ ಸೋಲುಗಳಿಂದ ಬೇಸರವಾಗಿದ್ದ ನಮಗೆ ವಿರುದ್ಧ 6 ವಿಕೆಟ್‌ಗಳ ಗೆಲುವು ಮಂದಹಾಸ ಮೂಡಿಸಿದೆ ಎಂದು ಡೆಲ್ಲಿ ಕ್ಯಾಪಿಟಲ್ಸ್ ನಾಯಕ ತಿಳಿಸಿದ್ದಾರೆ. ಸೋಮವಾರ ರಾತ್ರಿ ಶೇಖ್‌ ಝಾಯೆದ್‌ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ರಾಯಲ್‌ ಚಾಲೆಂಜರ್ಸ್ ಬೆಂಗಳೂರು. ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗಳನ್ನು ಕಳೆದುಕೊಂಡು 152 ರನ್‌ಗಳನ್ನು ಕಲೆ ಹಾಕಿತ್ತು. ಬಳಿಕ ಗುರಿ ಹಿಂಬಾಲಿಸಿದ ಇನ್ನೂ ಒಂದು ಓವರ್‌ ಬಾಕಿ ಇರುವಾಗಲೇ ಗುರಿ ತಲುಪಿತು. ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಶ್ರೇಯಸ್‌ ಅಯ್ಯರ್‌, "ಸತತ ನಾಲ್ಕು ಪಂದ್ಯಗಳಲ್ಲಿ ಸೋಲು ಅನುಭವಿಸಿದ್ದ ನಮಗೆ ಈ ಗೆಲುವು ಮಂದಹಾಸ ಮೂಡಿಸಿದೆ. ಸರಿಯಾದ ಸಮಯದಲ್ಲಿ ಬ್ಯಾಟಿಂಗ್‌, ಬೌಲಿಂಗ್‌ ಹಾಗೂ ಫೀಲ್ಡಿಂಗ್ ಎಲ್ಲಾ ವಿಭಾಗಗಳಲ್ಲಿ ಆಟಗಾರರು ಉತ್ತಮ ಪ್ರದರ್ಶನ ತೋರಿದ್ದಾರೆ. ಪ್ರಸಕ್ತ ಆವೃತ್ತಿಯಲ್ಲಿ ಹಲವು ಏರಿಳಿತಗಳನ್ನು ಕಂಡ ಬಳಿಕ ಪಾಯಿಂಟ್ಸ್‌ ಟೇಬಲ್‌ನಲ್ಲಿ ಎರಡನೇ ಸ್ಥಾನ ಪಡೆದಿರುವ ತುಂಬಾ ಖುಷಿ ನೀಡಿದೆ," ಎಂದು ಹೇಳಿದರು. " ಇಲ್ಲಿಯವರೆಗೂ ನಡೆದಿರುವ ಸಂಗತಿಗಳ ಬಗ್ಗೆ ನಾನು ನಿಜವಾಗಿಯೂ ಸಂತೋಷವಾಗಿದ್ದೇನೆ ಮತ್ತು ಎನ್ರಿಕ್‌ ನಾರ್ಟ್ಜ್‌ಅವರ ಇಂದಿನ(ಸೋಮವಾರ) ಪ್ರದರ್ಶನದಿಂದ ನನಗೆ ತುಂಬಾ ಖುಷಿಯಾಗಿದೆ. ಮುಂಬೈ ಇಂಡಿಯನ್ಸ್ (ಎಂಐ) ಅತ್ಯುತ್ತಮ ತಂಡಗಳಲ್ಲಿ ಒಂದಾಗಿದೆ ಹಾಗೂ ಗೆಲುವು ಅಂದಿನ ದಿನವನ್ನು ಅವಲಂಬಿಸಿರುತ್ತದೆ. ನಾವು ಎಲ್ಲವನ್ನೂ ಯೋಜಿಸುತ್ತಿದ್ದೇವೆ, " ಎಂದು ಅಯ್ಯರ್ ತಿಳಿಸಿದರು. "ಮುಂಬೈ ಇಂಡಿಯನ್ಸ್ ಕ್ವಾಲಿಫೈಯರ್‌ ಹಂತದಲ್ಲಿ ತುಂಬಾ ಅನುಭವವನ್ನು ಹೊಂದಿದೆ. ನಾಲ್ಕು ಬಾರಿ ಚಾಂಪಿಯನ್ಸ್ ಆಗಿರುವ ರೋಹಿತ್‌ ಶರ್ಮಾ ಬಳಗದಲ್ಲಿರುವ ಆಟಗಾರರಿಗೆ ಮಹತ್ವದ ಘಟ್ಟದಲ್ಲಿ ಒತ್ತಡವನ್ನು ಹೇಗೆ ನಿಭಾಯಿಸಬೇಕೆಂದು ಗೊತ್ತಿದೆ. ನಾವು ವಿಷಯಗಳನ್ನು ಸರಳವಾಗಿರಿಸಿಕೊಳ್ಳಬೇಕು ಮತ್ತು ಒತ್ತಡದ ಸಂದರ್ಭಗಳಲ್ಲಿ ಜಟಿಲವಾಗಬಾರದು ಎಂದು ನಾನು ಭಾವಿಸುತ್ತೇನೆ," ಎಂದು ಶ್ರೇಯಸ್‌ ಅಯ್ಯರ್‌ ಹೇಳಿದರು. ಸತತ ವೈಫಲ್ಯ ಅನುಭವಿಸಿದ್ದ ಅಜಿಂಕ್ಯ ರಹಾನೆ ಆರ್‌ಸಿಬಿ ವಿರುದ್ಧದ ಮಹತ್ವದ ಪಂದ್ಯದಲ್ಲಿ ನಿರ್ಣಾಯಕ ಅರ್ಧ ಶತಕ ಸಿಡಿಸಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, " ಐಪಿಎಲ್‌ ಟೂರ್ನಿಯಲ್ಲಿ ಅಜಿಂಕ್ಯ ರಹಾನೆ ತುಂಬಾ ಅನುಭವವನ್ನು ಹೊಂದಿದ್ದಾರೆ. ಇದನ್ನೇ ಅವರು ಪಂದ್ಯದಲ್ಲಿ ಪ್ರದರ್ಶಿಸಿದ್ದಾರೆ. ಕಠಿಣ ಎಸೆತಗಳಿಗೆ ಒಂದು ಅಥವಾ ಎರಡು ರನ್‌ಗಳನ್ನು ತೆಗೆದುಕೊಳ್ಳುತ್ತಿದ್ದರು ಹಾಗೂ ಕೆಟ್ಟ ಎಸೆತಗಳಿಗೆ ದೊಡ್ಡ ಹೊಡೆತಗಳನ್ನು ಬಾರಿಸುತ್ತಿದ್ದರು," ಎಂದು ತಿಳಿಸಿದರು.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/3mMBnWf

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...