‘ನಾನು ಅಸಮಾಧಾನದಿಂದ ವೇದಿಕೆಯಿಂದ ಹೊರ ನಡೆದಿದ್ದೇನೆ ಅನ್ನೋದು ಸುಳ್ಳು’; ಪ್ರಜ್ವಲ್ ರೇವಣ್ಣ

ಹಾಸನ: ಶಿರಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಮ್ಮಜಮ್ಮಾ ಪರ ನಡೆಯುತ್ತಿದ್ದ ಚುನಾವಣಾ ಪ್ರಚಾರದಲ್ಲಿ ಸಂಸದ ಅವರು ಮುನಿಸಿಕೊಂಡು ಹೊರಹೋಗಿದ್ದಾರೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ಸ್ವತಃ ಪ್ರಜ್ವಲ್ ರೇವಣ್ಣ ಅವರೇ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಜ್ವಲ್ ರೇವಣ್ಣ, ‘ಪ್ರಜ್ವಲ್ ರೇವಣ್ಣ ಅವರು ಅಸಮಾಧಾನಿತರಾಗಿ ವೇದಿಕೆಯಿಂದ ನಿರ್ಗಮಿಸಿದರು ಎನ್ನುವ ವರದಿಗಳನ್ನು ಕೆಲವು ಮಾಧ್ಯಮಗಳು ನೆನ್ನೆಯ ದಿನ ಬಿತ್ತರಿಸಿದ್ದು ನನ್ನ ಗಮನಕ್ಕೆ ಬಂದಿದೆ. ಮಾಧ್ಯಮಗಳ ಈ ವರದಿಗಳು ಕೇವಲ ಕಪೋಲಕಲ್ಪಿತ ಎಂದು ಸಮಜಾಯಿಷಿ ನೀಡಿದ್ದಾರೆ. ಅಲ್ಲದೇ ನೆನ್ನೆಯ ದಿನ ಜೆಡಿಎಸ್ ಪಕ್ಷದ ಸಮಾವೇಶ ಅತ್ಯಂತ ಯಶಸ್ವಿಯಾಗಿ ನಡೆಯಿತು. ಶಿರಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ನನ್ನನ್ನು ಎರಡು ಹೋಬಳಿಯ ಪ್ರಚಾರದ ಉಸ್ತುವಾರಿಯನ್ನಾಗಿ ಪಕ್ಷ ನೇಮಿಸಿತ್ತು. ಬಹುತೇಕ ಗ್ರಾಮಗಳ ಪ್ರಚಾರವನ್ನು ಯಶಸ್ವಿಯಾಗಿ ಮುಗಿಸಿ ಕೇವಲ ಇನ್ನೆರಡು ಗ್ರಾಮಗಳ ಪ್ರಚಾರದ ಸಭೆ ಬಾಕಿ ಉಳಿದಿತ್ತು. ಈ ಗ್ರಾಮಗಳಲ್ಲಿ ಪಕ್ಷದ ಕಾರ್ಯಕರ್ತರು ನನ್ನ ಬರುವಿಕೆಗಾಗಿ ಕಾಯುತ್ತಿದ್ದರು ಹಾಗಾಗಿ ನಾನು ಆ ಪ್ರಚಾರ ಸಭೆಗೆ ಹೋಗಲೇ ಬೇಕಾದ ಅನಿವಾರ್ಯತೆ ಇದ್ದಿದ್ದರಿಂದ ದೇವೇಗೌಡ್ರು ಹಾಗೂ ಕುಮಾರಣ್ಣನಿಗೆ ಮಾಹಿತಿ ನೀಡಿ ವೇದಿಕೆಯಿಂದ ನಿರ್ಗಮಿಸಿ,ಎರಡೂ ಗ್ರಾಮಗಳಿಗೆ ತೆರಳಿ ಪ್ರಚಾರ ಮುಗಿಸಿ ಪಕ್ಷ ನನಗೆ ನೀಡಿದ್ದ ಜವಾಬ್ದಾರಿಯನ್ನು ಪೂರ್ಣಗೊಳಿಸಿದೆ ಎಂದು ಪ್ರಜ್ವಲ್ ರೇವಣ್ಣ ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ ಕಾರ್ಯಕರ್ತರು ಮಾಧ್ಯಮಗಳ ಕಪೋಲಕಲ್ಪಿತ ಸುದ್ದಿಗಳಿಗೆ ಕಿವಿಗೊಟ್ಟು ಗೊಂದಲಕ್ಕೆ ಒಳಗಾಗದೆ ಯಶಸ್ವಿಯಾಗಿ ಚುನಾವಣೆ ನಡೆಸಿ ಅಭ್ಯರ್ಥಿ ಶ್ರೀಮತಿ ಅಮ್ಮಾಜಮ್ಮ ಸತ್ಯನಾರಾಯಣ ಅವರ ಗೆಲುವಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ ಭಾನುವಾರ ಶಿರಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಮ್ಮಜಮ್ಮಾ ಪರ ನಡೆಯುತ್ತಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿ ತಮ್ಮ ಭಾಷಣದ ವೇಳೆ ಎಚ್‌ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ಅವರ ಹೆಸರನ್ನು ಉಲ್ಲೇಖ ಮಾಡಿಲ್ಲ ಎಂಬ ಕಾರಣಕ್ಕೆ ಅಸಮಾಧಾನದಿಂದ ಸಭೆಯಿಂದ ಹೊರನಡೆದು ಹೋಗಿದ್ದರು ಎಂದು ಸುದ್ದಿ ಹಬ್ಬಿತ್ತು. ಆದರೆ ಇದೀಗ ಸ್ವತಃ ಪ್ರಜ್ವಲ್ ರೇವಣ್ಣ ಅವರೇ ಇದು ಕಪೋಲಕಲ್ಪಿತ ಸುದ್ದಿಯಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.


from India & World News in Kannada | VK Polls https://ift.tt/2Gkt18X

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...