ಸಿಗಂದೂರು ದೇವಾಲಯ ಅರಣ್ಯಭೂಮಿ ಒತ್ತುವರಿ ಪರಿಶೀಲನೆ ನಡೆಸಲು ಹೈಕೋರ್ಟ್‌ ನಿರ್ದೇಶನ

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಿಗಂದೂರು ಚೌಡೇಶ್ವರಿ ದೇವಾಲಯದ ಹೆಸರಿನಲ್ಲಿ ಆರೋಪದ ಬಗ್ಗೆ ಸ್ಥಳೀಯ ತಹಸೀಲ್ದಾರ್‌ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಬೇಕು ಎಂದು ಹೈಕೋರ್ಟ್‌ ಸೋಮವಾರ ಸರಕಾರಕ್ಕೆ ನಿರ್ದೇಶನ ನೀಡಿದೆ. ಸಾಗರ ತಾಲೂಕಿನ ಕೆ.ಎಸ್‌. ಲಕ್ಷ್ಮೇನಾರಾಯಣ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಸಿಜೆ ಎ.ಎಸ್‌. ಓಕ್‌ ನೇತೃತ್ವದ ವಿಭಾಗೀಯಪೀಠ, ಅರಣ್ಯ ಭೂಮಿ ಒತ್ತುವರಿಯಾಗಿದೆಯೇ ಎನ್ನುವುದರ ಕುರಿತು ತಹಸೀಲ್ದಾರ್‌ ಅವರು ಪರಿಶೀಲಿಸಿ ವರದಿ ಸಲ್ಲಿಸಬೇಕು. ಒತ್ತುವರಿ ಖಾತ್ರಿಯಾಗಿದ್ದರೆ ಅದನ್ನು ತಕ್ಷಣ ತೆರವುಗೊಳಿಸಲು ಜಿಲ್ಲಾಧಿಕಾರಿ ಹಾಗೂ ಉಪ ವಿಭಾಗಾಧಿಕಾರಿ ಮುಂದಾಗಬೇಕು. ಈ ಸಂಬಂಧ ಕೈಗೊಂಡ ಕ್ರಮಗಳ ಕುರಿತು ಮುಂದಿನ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿತು. ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ಕಂದಾಯ ಇಲಾಖೆ, ಮುಜರಾಯಿ ಇಲಾಖೆ ಹಾಗೂ ಅರಣ್ಯ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಧಾರ್ಮಿಕ ಇಲಾಖೆಯ ಆಯುಕ್ತರು, ಶಿವಮೊಗ್ಗ ಜಿಲ್ಲಾಧಿಕಾರಿ ದೇವಾಲಯದ ಟ್ರಸ್ಟಿ ರಾಮಪ್ಪ ಸೇರಿ ಎಲ್ಲ ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಿತು. ಅರ್ಜಿದಾರರ ಪರ ವಾದಿಸಿದ ವಕೀಲ ಪಿ.ಪಿ. ಹೆಗ್ಡೆ, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಸವಳ್ಳಿ ಗ್ರಾಮದ ಸರ್ವೆ 65ರಲ್ಲಿನ ಸರಕಾರಿ ಭೂಮಿಯನ್ನು ದೇವಸ್ಥಾನದ ಹೆಸರಿನಲ್ಲಿಒತ್ತುವರಿ ಮಾಡಲಾಗಿದೆ. ಈ ಪ್ರದೇಶವು ಶರಾವತಿ ಕಣಿವೆ ವನ್ಯಜೀವಿಧಾಮ ಜಾಗವ198ಂದು ಸರಕಾರ ಅಧಿಸೂಚನೆ ಹೊರಡಿಸಿದೆ. 2020ರ ಅ.23ರಂದು ಜಿಲ್ಲಾಧಿಕಾರಿಗಳು ನೀಡಿರುವ ವರದಿಯಲ್ಲಿ ಅರಣ್ಯ ಭೂಮಿ ಒತ್ತುವರಿಯಾಗಿದೆ ಎಂದು ಒಪ್ಪಿಕೊಳ್ಳಲಾಗಿದೆ. ಆದರೆ, ಒತ್ತುವರಿ ತೆರವಿಗೆ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಾದಿಸಿದರು. ಆಡಳಿತ ಮಂಡಳಿ ಅವ್ಯವಹಾರ ಕೂಡ ಪ್ರಸ್ತಾಪ ಈ ಮಧ್ಯೆ, ಇತ್ತೀಚೆಗೆ ಮುಖ್ಯ ಅರ್ಚಕ ಹಾಗೂ ಧರ್ಮದರ್ಶಿ ನಡುವೆ ಕೈ-ಕೈ ಮಿಲಾಯಿಸಲು ಕಾರಣವಾಗಿದ್ದ ಆಡಳಿತ ಮಂಡಳಿ ಅವ್ಯವಹಾರದ ಕುರಿತೂ ಅರ್ಜಿಯಲ್ಲಿ ಪ್ರಸ್ತಾಪಿಸಲಾಗಿದೆ. ದೇವಾಲಯದ ಹೆಸರಿನಲ್ಲಿ ಕೆಲ ವ್ಯಕ್ತಿಗಳು ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದಾರೆ. ಜತೆಗೆ, ಆಡಳಿತ ಮಂಡಳಿ ಹಣಕಾಸು ಅವ್ಯವಹಾರ ನಡೆಸಿದೆ. ಆಡಳಿತ ಮಂಡಳಿಯ ಲೆಕ್ಕಪತ್ರ ಅನುಸಾರ ದೇವಸ್ಥಾನಕ್ಕೆ ವಾರ್ಷಿಕ ಐದು ಕೋಟಿ ರೂ. ಆದಾಯವಿದೆ. ಆದರೆ, ಅನಧಿಕೃತ ಆದಾಯ ನೂರಾರು ಕೋಟಿ ರೂ.ಗಳಷ್ಟಿದ್ದು, ಟ್ರಸ್ಟ್‌ ಅದನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಅರಣ್ಯ ಜಮೀನಿನಲ್ಲಿ ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ಕೆಲ ಸಚಿವರು, ರಾಜಕಾರಣಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಸಹಾಯ ಮಾಡುತ್ತಿದ್ದಾರೆ. ರಾಜ್ಯ ಸರಕಾರ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸುತ್ತಿಲ್ಲಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.


from India & World News in Kannada | VK Polls https://ift.tt/371SX2v

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...