ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೆಗಾ ಸೀ ಫುಡ್ ಪಾರ್ಕ್ ಶೀಘ್ರ ನಿರ್ಮಾಣ: ಸಚಿವ ಕೋಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ 100 ಕೋಟಿ ರೂ. ವೆಚ್ಚದಲ್ಲಿ ಮೆಗಾ ಸೀ ಫುಡ್‌ ಪಾರ್ಕ್ ಶೀಘ್ರ ನಿರ್ಮಾಣವಾಗಲಿದೆ ಎಂದು ಮೀನುಗಾರಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಹೇಳಿದರು. ನಗರದ ನೆಹರು ಮೈದಾನದಲ್ಲಿ ಭಾನುವಾರ ದಕ ಜಿಲ್ಲಾಮಟ್ಟದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಸಂದೇಶ ನೀಡಿದರು. ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯು ವನ್ಯ ಜೀವಿಗಳಿಂದ ಸಂಭವಿಸುವ ಮಾನವ ಪ್ರಾಣಹಾನಿ ಪ್ರಕರಣಗಳಿಗೆ ನೀಡಲಾಗುತ್ತಿದ್ದ 5 ಲಕ್ಷ ರೂ. ದಯಾತ್ಮಕ ಧನವನ್ನು 7.50 ಲಕ್ಷ ರೂ.ಗೆ ಪರಿಷ್ಕರಿಸಿ ಆದೇಶಿಸಲಾಗಿದೆ ಎಂದರು. ಕೋವಿಡ್‌ ಸಂದರ್ಭ ಹೇರಲಾದ ಲಾಕ್‌ಡೌನ್‌ ವೇಳೆ ಏಳು ಲಕ್ಷ ಜನರಿಗೆ ಊಟೋಪಚಾರದ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ವೆನ್‌ಲಾಕ್‌ ಸರಕಾರಿ ಆಸ್ಪತ್ರೆ, ಜಿಲ್ಲೆಯ ಎಂಟು ಮೆಡಿಕಲ್‌ ಕಾಲೇಜು ಸೇರಿದಂತೆ 9 ಪ್ರಯೋಗಾಲಯಗಳು ಕೋವಿಡ್‌ ಆರ್‌ಟಿಪಿಸಿಆರ್‌ ಪರೀಕ್ಷಾ ಸೌಲಭ್ಯ ಒದಗಿಸುತ್ತಿವೆ. ಜಿಲ್ಲೆಯಲ್ಲಿ ಒಟ್ಟು 73 ಆಸ್ಪತ್ರೆಗಳು ಆಯುಷ್ಮಾನ್‌ ಭಾರತ್‌- ಆರೋಗ್ಯ ಕರ್ನಾಟಕ ಯೋಜನೆ ಅಳವಡಿಸಿಕೊಂಡು ಕೊರೊನಾ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡುತ್ತಿವೆ ಎಂದು ಹೇಳಿದರು. ಕನ್ನಡ ಕಲಿಕೆಯ ಎಲ್ಲ ಆಸಕ್ತರಿಗೆ ಇ-ಕನ್ನಡ ಕಲಿಕಾ ಅಕಾಡೆಮಿ ಸ್ಥಾಪಿಸಿ ಪ್ರತ್ಯೇಕ ಅಂತರ್ಜಾಲ ವೆಬ್‌ಸೈಟ್‌ ಸಿದ್ಧಪಡಿಸಲಾಗಿದೆ. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ನೂತನ ಕೈಗಾರಿಕಾ ನೀತಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಐದು ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ಹಾಗೂ 20 ಲಕ್ಷ ಉದ್ಯೋಗ ಸೃಷ್ಟಿಯ ನಿರೀಕ್ಷೆ ಇದೆ ಎಂದು ಅವರು ಹೇಳಿದರು. ರಾಜ್ಯೋತ್ಸವ ಪ್ರಶಸ್ತಿನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 27 ಮಂದಿಗೆ ವೈಯಕ್ತಿಕ ಹಾಗೂ 11 ಸಂಘ ಸಂಸ್ಥೆಗಳಿಗೆ ಜಿಲ್ಲಾಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಕನ್ನಡ ಮಾಧ್ಯಮದಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಶೈವಿ ಬಿ., ಗೀತಾ ಎಚ್‌, ಮತ್ತು ಶ್ವೇತಾ ಅವರನ್ನು ಲ್ಯಾಪ್‌ಟಾಪ್‌ ಉಡುಗೊರೆ ನೀಡಿ ಸನ್ಮಾನಿಸಲಾಯಿತು. ಸಂಸದ ನಳಿನ್‌ ಕುಮಾರ್‌ ಕಟೀಲ್‌, ಶಾಸಕರಾದ ಡಾ. ಭರತ್‌ ಶೆಟ್ಟಿ, ವೇದವ್ಯಾಸ ಕಾಮತ್‌, ಮೇಯರ್‌ ದಿವಾಕರ ಪಾಂಡೇಶ್ವರ, ದಕ ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತುಳು ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲಸಾರ್‌, ಕಸಪಾ ಜಿಲ್ಲಾಧ್ಯಕ್ಷ ಪ್ರದೀಪ್‌ ಕುಮಾರ್‌ ಕಲ್ಕೂರ, ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ, ಜಿ.ಪಂ. ಸಿಇಒ ಡಾ.ಸೆಲ್ವಮಣಿ ಆರ್‌., ಎಸ್ಪಿ ಬಿ.ಎಂ.ಲಕ್ಷ್ಮೇ ಪ್ರಸಾದ್‌, ಮಂಗಳೂರು ಪೊಲೀಸ್‌ ಆಯುಕ್ತ ವಿಕಾಸ್‌ ಕುಮಾರ್‌, ಮನಪಾ ಆಯುಕ್ತ ಅಕ್ಷಯ್‌ ಶ್ರೀಧರ್‌ ಮತ್ತಿತರರು ಉಪಸ್ಥಿತರಿದ್ದರು.


from India & World News in Kannada | VK Polls https://ift.tt/34Os02s

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...