ಮಸ್ಕಿ, ಬಸವಕಲ್ಯಾಣ ಬೈಎಲೆಕ್ಷನ್: ಬಿಜೆಪಿಗೆ ಪ್ರತಿಷ್ಠೆ, ಕಾಂಗ್ರೆಸ್‌ಗೆ ಅನಿವಾರ್ಯತೆ!

ಬೆಂಗಳೂರು: ಹಾಗೂ ವಿಧಾನಸಭಾ ಉಪಚುನಾವಣೆ ಇನ್ನೂ ಘೋಷಣೆಗೊಂಡಿಲ್ಲ. ಹೀಗಿದ್ದರೂ ರಾಜಕೀಯ ಪಕ್ಷಗಳು ಈಗಾಗಲೇ ಪ್ರಚಾರ ಶುರುಮಾಡಿಕೊಂಡಿವೆ. ಅದರಲ್ಲೂ ಕಾಂಗ್ರೆಸ್ ಪಾಲಿಗೆ ಈ ಚುನಾವಣೆ ಅನಿವಾರ್ಯವಾಗಿದ್ದು ಶಿರಾ ಹಾಗೂ ಆರ್‌ ಆರ್‌ ನಗರ ಗೆದ್ದ ಬಿಜೆಪಿಗೆ ಪ್ರತಿಷ್ಠೆಯಾಗಿದೆ. ಎರಡು ಉಪಚುನಾವಣೆಯಲ್ಲಿ ಹೀನಾಯ ಸೋಲುಂಡ ಕಾಂಗ್ರೆಸ್‌ ಹೇಗಾದರೂ ಮಾಡಿ ಮಸ್ಕಿ ಹಾಗೂ ಬಸವಕಲ್ಯಾಣ ಕ್ಷೇತ್ರವನ್ನು ತನ್ನದಾಗಿಸಿಕೊಳ್ಳುವ ತಂತ್ರಗಾರಿಕೆ ನಡೆಸುತ್ತಿದೆ. ಕಾಂಗ್ರೆಸ್ ಬಳಿ ಇದ್ದ ಇವೆರಡು ಕ್ಷೇತ್ರಗಳ ಪೈಕಿ ಪ್ರತಾಪ್ ಗೌಡ ಪಾಟೀಲ್‌ ಬಿಜೆಪಿಗೆ ವಲಸೆ ಹೋದರೆ ಬಸವಕಲ್ಯಾಣ ಶಾಸಕ ನಾರಾಯಣ ರಾವ್ ನಿಧನದಿಂದ ಕ್ಷೇತ್ರದಲ್ಲಿ ಉಪಚುನಾವಣೆ ಎದುರಾಗಿದೆ. ಶಿರಾ ಹಾಗೂ ಆರ್‌ ಆರ್‌ ನಗರದಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸದಲ್ಲಿತ್ತು. ಆದರೆ ಎರಡೂ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಪ್ರದರ್ಶನ ಪಕ್ಷದಲ್ಲಿ ಆಂತರಿಕ ಚರ್ಚೆಯನ್ನು ಹುಟ್ಟುಹಾಕಿದೆ. ಪಕ್ಷದ ನಾಯಕತ್ವದ ನಡುವಿನ ಭಿನ್ನಾಭಿಪ್ರಾಯ ಹಾಗೂ ಅಭ್ಯರ್ಥಿ ಆಯ್ಕೆಯಲ್ಲಿನ ಎಡವಟ್ಟು ಸೋಲಿಗೆ ಕಾರಣ ಎಂದು ವಿಮರ್ಶೆ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಬಸವಕಲ್ಯಾಣ ಹಾಗೂ ಮಸ್ಕಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವ ಅನುವಾರ್ಯತೆಯಲ್ಲಿದೆ. ಈ ಕಾರಣಕ್ಕಾಗಿ ಈಗಾಗಲೇ ಪ್ರಚಾರ ಕಾರ್ಯ ಆರಂಭಿಸಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ನಡೆಸಿ ಕೇವಲ 213 ಮತಗಳ ಅಂತರದಲ್ಲಿ ಸೋತ ಬಸನಗೌಡ ತುರ್ವಿಹಾಳ ಸೋಮವಾರ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಉಪಚುನಾವಣೆಯಲ್ಲಿ ಬಹುತೇಕ ಅವರೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾದ್ಯತೆ ಇದೆ. ಇನ್ನು ಬಸವಕಲ್ಯಾಣ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬುವುದು ಇನ್ನು ಅಂತಿಮಗೊಂಡಿಲ್ಲ. ಇದು ಕಾಂಗ್ರೆಸ್ ಕಥೆಯಾದರೆ ಬಿಜೆಪಿಗೆ ಈ ಎರಡು ಚುನಾವಣೆಗಳು ಪ್ರತಿಷ್ಠೆಯ ಕಣವಾಗಿವೆ. ಶಿರಾ ಹಾಗೂ ಆರ್‌ ಆರ್‌ ನಗರ ಗೆದ್ದ ಬಿಜೆಪಿ ತನ್ನ ಗೆಲುವಿನ ನಾಗಾಲೋಟ ಮುಂದುವರಿಸಲು ರಣತಂತ್ರ ರೂಪಿಸುತ್ತಿದೆ. ಶಿರಾ ಗೆಲುವಿನ ರುವಾರಿ ಬಿ.ವೈ ವಿಜಯೇಂದ್ರ ಅವರೂ ಬಸವಕಲ್ಯಾಣದ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಈಗಾಗಲೇ ಎರಡು ಸುತ್ತಿನ ಪ್ರಚಾರವನ್ನು ನಡೆಸಿದ್ದಾರೆ. ಮಸ್ಕಿಯಲ್ಲಿ ಪ್ರತಾಪ್ ಗೌಡ ಪಾಟೀಲ್ ರಾಜೀನಾಮೆ ಮರುದಿನದಿಂದಲೇ ಸದ್ದಿಲ್ಲದೆ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಒಟ್ಟಿನಲ್ಲಿ ಇವೆರಡು ಕ್ಷೇತ್ರ ಎರಡು ರಾಜಕೀಯ ಪಕ್ಷಗಳ ಪಾಲಿಗೆ ಬಹುಮುಖ್ಯ ಕ್ಷೇತ್ರವಾಗಿ ಮಾರ್ಪಟ್ಟಿದೆ. ಇನ್ನೇನು ಚುನಾವಣೆ ಘೋಷಣೆಗೊಂಡರೆ ಚುನಾವಣಾ ಕಣ ರಂಗೇರಲಿದೆ. ಆದ್ರೆ ಈ ಬಾರಿ ಅದೃಷ್ಟ ಯಾರ ಪಾಲಿಗೆ ಎಂಬುವುದು ಕುತೂಹಲ ಕೆರಳಿಸಿದೆ.


from India & World News in Kannada | VK Polls https://ift.tt/396VXgF

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...