ಸಿಎಂ ಪ್ರಶ್ನಿಸುವ ನೈತಿಕತೆ ಯಾರಿಗೂ ಇಲ್ಲ! ವಾಟಾಳ್‌ ವಿರುದ್ಧ ರೇಣುಕಾಚಾರ್ಯ ಗರಂ

ಬೆಂಗಳೂರು: ಮರಾಠ ಪ್ರಾಧಿಕಾರ ವಿರೋಧಿಸಿ ಡಿಸೆಂಬರ್‌ 5 ರಂದು ಕರ್ನಾಟಕ ಬಂದ್‌ ಕರೆ ಕೊಟ್ಟ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌ ವಿರುದ್ಧ ಶಾಸಕ ಕಿಡಿಕಾರಿದ್ದಾರೆ. ವಾಟಾಳ್ ನಾಗರಾಜ್ ಸಿಎಂ ಬಿಎಸ್‌ವೈ ಕನ್ನಡಿಗರಿಗೆ ದ್ರೋಹ ಮಾಡಿದ್ದಾರೆ ಎಂದಿದ್ದ ವಾಟಾಳ್‌ ನಾಗರಾಜ್‌ ಕ್ಷಮೆಯಾಚಿಸುವಂತೆ ರೇಣುಕಾಚಾರ್ಯ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ಮಾತನಾಡಿದ ಅವರು, ರೋಲ್ ಕಾಲ್ ಹೋರಾಟಗಾರರಿಗೆ ಸಿಎಂ ಬಿಎಸ್‌ ಯಡಿಯೂರಪ್ಪ ಹೆದರಬೇಕಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಬೆಂಬಲ ವ್ಯಕ್ತಪಡಿಸಿದರು. ಯತ್ನಾಳ್ ಹೇಳಿಕೆಯನ್ನು ನಾನು ಸಮರ್ಥನೆ ಮಾಡುತ್ತೇನೆ, ಅವರು ಹೇಳಿರುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು. ಕನ್ನಡದ ವಿಚಾರವಾಗಿ ಸಿಎಂ ಬಿಎಸ್‌ವೈ ಪ್ರಶ್ನಿಸುವ ನೈತಿಕತೆ ಯಾರಿಗೂ ಇಲ್ಲ. ಆದರೆ ವಾಟಾಳ್ ನಾಗರಾಜ್ ಬಳಸಿರುವ ಪದ ಎಂತಹದ್ದು ಎಂದು ಆಕ್ರೋಶ ವ್ಯಕ್ತಪಡಿಸಿದರು. ಒಬ್ಬ ಮುಖ್ಯಮಂತ್ರಿ ಬಗ್ಗೆ ಇಂತಹ ಭಾಷೆ ಬಳಸಿದರೆ ಸರಿ ಇರಲ್ಲ, ವಾಟಾಳ್ ಬಳಸಿರುವ ಭಾಷೆ ಸರಿ ಇಲ್ಲ. ಕೂಡಲೇ ವಾಟಾಳ್ ನಾಗರಾಜ್ ಕ್ಷಮೆಯಾಚನೆ ಮಾಡಬೇಕು, ಇಲ್ಲದಿದ್ದರೆ ನನ್ನ ಭಾಷೆಯಲ್ಲೇ ಉತ್ತರ ಕೊಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ. ನಾವೆಲ್ಲರೂ ಕನ್ನಡಿಗರೇ, ನಮಗೂ ಕನ್ನಡ ನಾಡು ನುಡಿಯ ಬಗ್ಗೆ ಬದ್ಧತೆ ಇದೆ ಎಂದ ರೇಣುಕಾಚಾರ್ಯ ವಾಟಾಳ್ ನಾಗರಾಜ್ ನಾಲಗೆ ಬಿಡಿ ಹಿಡಿದು ಮಾತನಾಡಲಿ ಎಂದರು. ಬೆಂಗಳೂರಿನಲ್ಲಿ ಮಾತನಾಡಿದ್ದ ವಾಟಾಳ್ ನಾಗರಾಜ್‌, ಬಿಎಸ್‌ವೈಗೆ ದ್ವೇಷವಿದೆ. ಅವರ ರಕ್ತವೇ ದ್ವೇಷವಾಗಿದೆ. ದ್ವೇಷದಿಂದ ರಾಜ್ಯೋತ್ಸವದ ಅನುದಾನ ಕೊಟ್ಟಿಲ್ಲ ಹಾಗೂ ಅವರೊಬ್ಬ ಬ್ಲ್ಯಾಕ್ ಮೇಲ್ ರಾಜಕಾರಣಿ ಎಂದು ವಾಗ್ದಾಳಿ ನಡೆಸಿದ್ದರು.


from India & World News in Kannada | VK Polls https://ift.tt/391LWBj

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...