'ಈತ ಇನಿಂಗ್ಸ್‌ ಆರಂಭಿಸೋದು ಪಕ್ಕಾ' : ಆಸ್ಟ್ರೇಲಿಯಾ ಟೆಸ್ಟ್‌ ಸರಣಿಗೆ ಭಾರತದ ಓಪನರ್‌ ಆಗಿ ಕನ್ನಡಿಗನನ್ನು ಆರಿಸಿದ ಸಚಿನ್‌!

ಹೊಸದಿಲ್ಲಿ: ಇತ್ತೀಚೆಗೆ ಮುಕ್ತಾಯವಾಗಿದ್ದ ಹದಿಮೂರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಗಮನಾರ್ಹ ಪ್ರದರ್ಶನ ತೋರಿದ್ದ , ಮೊದಲ ಬಾರಿ ಎಲ್ಲಾ ಸ್ವರೂಪದ ತಂಡದಲ್ಲಿ ಅವಕಾಶವನ್ನು ಗಿಟ್ಟಿಸಿಕೊಂಡಿದ್ದಾರೆ. ಹಾಗಾಗಿ ಅವರ ಮೇಲೆ ಆಸ್ಟ್ರೇಲಿಯಾ ಪ್ರವಾಸದಲ್ಲಿ ಸಾಕಷ್ಟು ನಿರೀಕ್ಷೆಯನ್ನು ಇಡಲಾಗಿದೆ. ಮಯಾಂಕ್‌ ಅಗರ್ವಾಲ್‌ ಕಿಂಗ್ಸ್ ಇಲೆವೆನ್‌ ಪಂಜಾಬ್‌ ಪರ ಆಡಿದ 11 ಪಂದ್ಯಗಳಿಂದ 424 ರನ್‌ಗಳನ್ನು ಕಲೆ ಹಾಕಿದ್ದರು. ಅಲ್ಲದೆ, ಕೆ.ಎಲ್‌ ರಾಹುಲ್‌ ಹಾಗೂ ಮಯಾಂಕ್‌ ಅಗರ್ವಾಲ್‌ ಟೂರ್ನಿಯಲ್ಲಿ ಅತ್ಯಂತ ಭರವಸೆ ಆರಂಭಿಕ ಜೋಡಿಯಾಗಿ ಗುರುತಿಸಿಕೊಂಡಿತ್ತು. ಸೀಮಿತ ಓವರ್‌ಗಳ ಭಾರತ ತಂಡದ ಆರಂಭಿಕ ಸ್ಥಾನಕ್ಕೆ ಕೆ.ಎಲ್‌ ರಾಹುಲ್‌, ಶುಭಮನ್‌ ಗಿಲ್‌ ಅವರೊಂದಿಗೆ ಮಯಾಂಕ್‌ಗೆ ಕಠಿಣ ಸ್ಪರ್ಧೆ ಏರ್ಪಟ್ಟಿದೆ. ಆದರೆ, ಮಾಸ್ಟರ್‌ ಬ್ಲಾಸ್ಟರ್‌ , ಟೆಸ್ಟ್‌ ಸರಣಿಯಲ್ಲಿ ಭಾರತ ತಂಡಕ್ಕೆ ಮಯಾಂಕ್‌ ಅಗರ್ವಾಲ್ ಅವರು ಆರಂಭಿಕನಾಗಿ ಇನಿಂಗ್ಸ್ ಆರಂಭಿಸುವುದು ಖಚಿತ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿರಾಟ್‌ ಕೊಹ್ಲಿ ನಾಯಕತ್ವದ ಭಾರತ ತಂಡದ ಪೂರ್ಣ ಪ್ರಮಾಣದ ಆಸ್ಟ್ರೇಲಿಯಾ ಪ್ರವಾಸ ಇದಾಗಿದೆ. ನ.27 ರಿಂದ ಓಡಿಐ ಸರಣಿ ಆರಂಭವಾದರೆ, ಡಿ. 4 ರಿಂದ ಟಿ20 ಸರಣಿ ಹಾಗೂ ಡಿ.17 ರಿಂದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಶುರುವಾಗಲಿದೆ. ಪಿಟಿಐ ಸುದ್ದಿ ಸಂಸ್ಥೆಯ ಸಂದರ್ಶನದಲ್ಲಿ ಮಾತನಾಡಿದ ಸಚಿನ್‌ ತೆಂಡೂಲ್ಕರ್‌, "ಟೆಸ್ಟ್ ಸರಣಿಯಲ್ಲಿ ಮಯಾಂಕ್‌ ಅಗರ್ವಾಲ್‌ ಆರಂಭಿಕನಾಗಿ ಬ್ಯಾಟಿಂಗ್‌ ಮಾಡುವುದು ಸ್ಪಷ್ಟ ಹಾಗೂ ರೋಹಿತ್‌ ಶರ್ಮಾ ತಂಡಕ್ಕೆ ಮರಳಿದರೂ ಕನ್ನಡಿಗನಿಗೆ ಆರಂಭಿಕನಾಗಿ ಆಡಲಿದ್ದಾರೆ. ಏಕೆಂದರೆ ಅವರು ಈ ಹಿಂದೆ ಆಸ್ಟ್ರೇಲಿಯಾ ಪ್ರವಾಸದಲ್ಲಿ ದೊಡ್ಡ ಮೊತ್ತ ಕಲೆ ಹಾಕಿದ್ದಾರೆ. ಇನ್ನುಳಿದವರಾದ ಪೃಥ್ವಿ ಶಾ ಹಾಗೂ ಕೆ.ಎಲ್‌ ರಾಹುಲ್‌ ಅವರಲ್ಲಿ ಫಾರ್ಮ್‌ನಲ್ಲಿರುವ ಒಬ್ಬರನ್ನು ಆರಂಭಿಕನಾಗಿ ಆಡಿಸುವುದು ಟೀಮ್‌ ಮ್ಯಾನೇಜ್‌ಮೆಂಟ್‌ ಆಯ್ಕೆಯಾಗಿರುತ್ತದೆ," ಎಂದು ತಿಳಿಸಿದರು. "ಸ್ಟೀವನ್‌ ಸ್ಮಿತ್‌, ಡೇವಿಡ್‌ ವಾರ್ನರ್‌ ತಂಡಕ್ಕೆ ಮರಳಿರುವುದು ಆಸ್ಟ್ರೇಲಿಯಾ ಬ್ಯಾಟಿಂಗ್‌ ವಿಭಾಗಕ್ಕೆ ಇನ್ನಷ್ಟು ಬಲವನ್ನು ತಂದುಕೊಡುತ್ತದೆ. ಅಲ್ಲದೆ, ಮಾರ್ನಸ್‌ ಲಾಬುಶೇನ್‌ ಇರುವುದು ಆತಿಥೇಯರ ತಂಡಕ್ಕೆ ಮತ್ತೊಂದು ಪ್ಲಸ್‌ ಪಾಯಿಂಟ್‌. ಇದೆಲ್ಲವನ್ನು ಗಮನಿಸಿದರೆ, ಭಾರತ ತಂಡಕ್ಕಿಂತ ಆಸ್ಟ್ರೇಲಿಯಾ ಬ್ಯಾಟಿಂಗ್‌ ವಿಭಾಗ ಬಲಿಷ್ಠವಾಗಿದೆ ಎಂದು ಹೇಳಬಹುದು. ಇದು ತುಂಬಾ ಸ್ಪರ್ಧಾತ್ಮಕ ಸರಣಿಯಾಗಿದ್ದು, ಭಾರತ ತಂಡ ಎದುರಿಸಲು ಸಿದ್ದವಾಗಿದೆ," ಎಂದು ಹೇಳಿದರು. ಮೊದಲನೇ ಮಗುವಿನ ನಿರೀಕ್ಷೆಯಲ್ಲಿರುವ ವಿರಾಟ್‌ ಕೊಹ್ಲಿ ಮೊದಲನೇ ಟೆಸ್ಟ್ ಪಂದ್ಯದ ಬಳಿಕ ತವರಿಗೆ ವಾಪಸ್‌ ಆಗುವುದು, ಇನ್ನುಳಿದ ಮೂರು ಟೆಸ್ಟ್‌ ಪಂದ್ಯಗಳ ಫಲಿತಾಂಶದ ಮೇಲೆ ಗಂಭೀರ ಪರಿಣಾಮ ಬೀರುವುದನ್ನು ಸಚಿನ್‌ ಒಪ್ಪಿಕೊಂಡಿದ್ದಾರೆ. ಅಲ್ಲದೆ, ಕೊಹ್ಲಿ ಅನುಪಸ್ಥಿತಿಯಲ್ಲಿ ಬೇರೆ ಆಟಗಾರರಿಗೆ ಮಿಂಚಲು ಅತ್ಯುತ್ತಮ ಅವಕಾಶವಿದೆ ಎಂದರು. "ವಿರಾಟ್‌ ಕೊಹ್ಲಿ ಅನುಪಸ್ಥಿತಿಯಲ್ಲಿ ಕೊನೆಯ ಮೂರು ಟೆಸ್ಟ್ ಪಂದ್ಯಗಳಿಗೆ ಭಾರತಕ್ಕೆ ಸ್ವಲ್ಪ ಹಿನ್ನಡೆಯಾಗಬಹುದು. ಆದರೆ, ಟೀಮ್‌ ಇಂಡಿಯಾ ನಾಯಕನ ಅನುಪಸ್ಥಿತಿಯಲ್ಲಿ ಇತರೆ ಆಟಗಾರರು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ಅತ್ಯುತ್ತಮ ಅವಕಾಶ ಸಿಗಲಿದೆ, " ಎಂದು ಸಚಿನ್‌ ತೆಂಡೂಲ್ಕರ್ ತಿಳಿಸಿದರು.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/3fuGCHX

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...