ಸಂಪ್ರದಾಯಬದ್ಧವಾಗಿ ಕುಕ್ಕೆ ಸುಬ್ರಹ್ಮಣ್ಯ ಷಷ್ಠಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಸುಬ್ರಹ್ಮಣ್ಯ: ಪೂರ್ವಶಿಷ್ಠ ಸಂಪ್ರದಾಯಗಳಿಗೆ ಅನುಗುಣವಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಚಂಪಾ ಷಷ್ಠಿ ಜಾತ್ರೋತ್ಸವ ನಡೆಯಲಿದೆ ಎಂದು ಮುಜರಾಯಿ ಸಚಿವ ಹೇಳಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭಾನುವಾರ ಆಗಮಿಸಿ ಶ್ರೀ ದೇವರ ದರ್ಶನ ಬಳಿಕ ಸುದ್ದಿಗಾರರ ಜತೆ ಮಾತನಾಡಿ, ಪರಂಪರೆ ಮತ್ತು ಸಂಪ್ರದಾಯಗಳಿಗೆ ಧಕ್ಕೆ ಬಾರದಂತೆ ಕೋವಿಡ್‌ ನಿಯಮಗಳಿಗೆ ಅನುಗುಣವಾಗಿ ಜಾತ್ರೋತ್ಸವ ನಡೆಯಲಿದೆ. ಈ ಹಿಂದೆ ಬ್ರಹ್ಮರಥೋತ್ಸವ ಸೇವೆ ನೆರವೇರಿಸಲು ಭಕ್ತರಿಗೆ ಅವಕಾಶವಿತ್ತು. ಆದರೆ ಈ ಬಾರಿ ಕೋವಿಡ್‌ ಹಿನ್ನೆಲೆಯಲ್ಲಿ ಬ್ರಹ್ಮರಥೋತ್ಸವ ಸೇವೆ ನೆರವೇರಿಸಲು ಭಕ್ತರಿಗೆ ಅವಕಾಶವಿಲ್ಲ. ಪರಂಪರೆ, ಕಟ್ಟುಪಾಡು, ಸಂಪ್ರದಾಯವನ್ನು ಪಾಲಿಸಿಕೊಂಡು ಕೋವಿಡ್‌ ನಿಯಮಗಳನ್ನು ಅನುಸರಿಸಿ ಕುಕ್ಕೆ ಜಾತ್ರೆ ನಡೆಯಲಿದೆ ಎಂದರು. ಡಿಸೆಂಬರ್‌ನಲ್ಲಿ ಸಪ್ತಪದಿ: ಮುಜರಾಯಿ ದೇವಳಗಳಲ್ಲಿ ಸಪ್ತಪದಿ ಸಾಮೂಹಿಕ ವಿವಾಹ ಕಾರ‍್ಯಕ್ರಮ ಕೋವಿಡ್‌ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದನ್ನು ಡಿಸೆಂಬರ್‌ ಮೊದಲ ವಾರದಲ್ಲಿ ಮುಜರಾಯಿ ಇಲಾಖೆಯ ದೇವಳಗಳಲ್ಲಿ ನೆರವೇರಿಸಲು ಕ್ರಮ ಕೈಗೊಳ್ಳಲಾಗಿದೆ. ಕುಕ್ಕೆ ಸೇರಿದಂತೆ ರಾಜ್ಯದ ಮುಜರಾಯಿ ಇಲಾಖೆ ದೇವಳಗಳಲ್ಲಿ ಸರಳ ಸಾಮೂಹಿಕ ವಿವಾಹ ನೆರವೇರಿಸಲು ದೇವಳಗಳು ಸಿದ್ಧತೆ ಮಾಡಿಕೊಂಡಿವೆ ಎಂದರು. ಜನ ಕಂಟಕ ವ್ಯವಸ್ಥೆ ಒಪ್ಪಲ್ಲ: ಕಸ್ತೂರಿರಂಗನ್‌ ವರದಿ ಹಿನ್ನೆಯಲ್ಲಿ ಕೇಂದ್ರದಿಂದ ರಾಜ್ಯ ಸರಕಾರಕ್ಕೆ ಬಂದ ಸೂಚನೆಗೆ ರಾಜ್ಯ ಸರಕಾರವು ಯಾವುದೇ ಮಾರ್ಗಸೂಚಿ ಸಿದ್ಧಪಡಿಸಿಲ್ಲ. ಈ ವರದಿ ಮೂಲಕ ರೈತರನ್ನು ಒಕ್ಕಲೆಬ್ಬಿಸುವ, ಯಾರಿಗಾದರೂ ತೊಂದರೆ ಕೊಡುವ, ಜನರ ಬದುಕಿಗೆ ಕಂಟಕವಾಗುವ ವ್ಯವಸ್ಥೆಗೆ ಸರಕಾರ ಸಹಮತ ವ್ಯಕ್ತಪಡಿಸುವುದಿಲ್ಲಮತ್ತು ಅದನ್ನು ಒಪ್ಪುವುದಿಲ್ಲ. ಮನುಷ್ಯರ ಬದುಕಿಗೆ ತೊಂದರೆಯಾಗದಂತೆ ಪರಿಸರ ಉಳಿಸಲು ನಾವು ಬದ್ಧರಾಗಿದ್ದೇವೆ. ಜನಸಾಮಾನ್ಯರ ಬದುಕಿಗೆ ಮತ್ತು ತಲೆತಲಾಂತರದಿಂದ ವಾಸ ಮಾಡುತ್ತಿದ್ದ ಜನರ ಬದುಕಿಗೆ ತೊಂದರೆಯಾಗದಂತೆ ಸರಕಾರ ಕ್ರಮ ತೆಗೆದುಕೊಳ್ಳಲಿದೆ ಎಂದರು. ನಿಯಮಾನುಸಾರ ಯಕ್ಷಗಾನ, ನೇಮೋತ್ಸವ: ತುಳುನಾಡಿನ ಪ್ರಸಿದ್ಧ ಯಕ್ಷಗಾನ ಹಾಗೂ ದೈವಗಳ ನೇಮೋತ್ಸವ ಸೇರಿದಂತೆ ಇತರ ಸಾಂಸ್ಕೃತಿಕ ಕಾರ‍್ಯಕ್ರಮಗಳನ್ನು ಕೋವಿಡ್‌-19 ನಿಯಮಗಳಿಗೆ ಅನುಗುಣವಾಗಿ ನಡೆಸಲು ಸರಕಾರ ನಿರ್ಧರಿಸಿದೆ. ಸಾಮಾಜಿಕ ಅಂತರ ಪಾಲಿಸಿ ಈ ಕಾರ‍್ಯಕ್ರಮ ನಡೆಸಲು ಸರಕಾರ ಅನುಮತಿ ನೀಡಿದೆ. ಆದರೆ ಯಕ್ಷಗಾನ ಪಾತ್ರಧಾರಿಗಳಿಗೆ ಹಾಗೂ ದೈವ ನರ್ತಕರಿಗೆ ಕಡ್ಡಾಯವಾಗಿ ಕೋವಿಡ್‌ ಟೆಸ್ಟ್‌ ನಡೆಸಿ ಬಳಿಕ ಪಾಲ್ಗೊಳ್ಳಲು ಅವಕಾಶ ನೀಡಲಾಗುವುದು ಎಂದರು. ಕುಕ್ಕೆ ದೇವಳದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶಾಸಕ ಎಸ್‌. ಅಂಗಾರ, ದೇವಳದ ಆಡಳಿತಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿ ರೂಪಾ ಎಂ.ಜೆ. ಉಪಸ್ಥಿತರಿದ್ದರು. ಮೀನಿನ ಕೃಷಿಗೆ ಸಾಲ: ಮೀನುಗಾರಿಕೆ ಇಲಾಖೆಯಲ್ಲಿ 10 ಸಾವಿರ ಹೊಸ ಹುದ್ದೆ ಸೃಷ್ಟಿ ಮೀನುಗಾರಿಕೆ ಇಲಾಖೆಯಲ್ಲಿ ಪ್ರಧಾನ ಮಂತ್ರಿಯವರ ಆತ್ಮನಿರ್ಭರ ಕಲ್ಪನೆಗೆ ಅನುಗುಣವಾಗಿ ಕಾರ‍್ಯಕ್ರಮ ಜಾರಿ ಮಾಡಲಾಗುವುದು. 10 ಸಾವಿರ ಹೊಸ ಹುದ್ದೆಗಳನ್ನು ಸೃಷ್ಟಿಸಲಾಗುತ್ತದೆ. ಪಂಜರ ಕೃಷಿ ವ್ಯವಸ್ಥೆ ಅಳವಡಿಸಲಾಗುವುದು. ಸಮುದ್ರ, ಸರೋವರ, ಹಿನ್ನೀರು, ಹೊಳೆ, ಕೆರೆ ಇತ್ಯಾದಿಗಳಲ್ಲಿ ಪಂಜರ ಹಾಕಿ ಅಲ್ಲಿ ಮೀನಿನ ಕೃಷಿ ಮಾಡಲಾಗುವುದು ಎಂದು ಬಂದರು, ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಮಾತನಾಡಿದ ಅವರು, ಪಂಜರ ಕೃಷಿ ನಡೆಸುವವರಿಗೆ ಇಲಾಖೆಯಿಂದ ರಿಯಾಯಿತಿ ದರದಲ್ಲಿ ಸಾಲ ನೀಡುವ ಯೋಜನೆಯನ್ನು ಇಲಾಖೆ ಮಾಡಿದೆ ಎಂದರು.


from India & World News in Kannada | VK Polls https://ift.tt/396ngaJ

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...