ಆರ್‌ ಆರ್‌ ನಗರ ಬೈಎಲೆಕ್ಷನ್: ಮತದಾನಕ್ಕೂ ಮೊದಲು ದೇವರ ಮೊರೆ ಹೋದ ಕುಸುಮಾ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ಆರಂಭಗೊಂಡಿದೆ. ಮತದಾನಕ್ಕೂ ಮೊದಲು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ವಿಜಯನಗರದ ಆದಿಚುಂಚನಗಿರಿ ಮಠದಲ್ಲಿ ಪೂಜೆ ಸಲ್ಲಿಸಿದರು. ಬೆಂಗಳೂರಿನ ವಿಜಯನಗರದ ಆದಿಚುಂಚನಗಿರಿ ಮಠದ ಆವರಣದಲ್ಲಿರುವ ಕಾಲಭೈರವ ಹಾಗೂ ಗಂಗಾಧರೇಶ್ವರ ಸ್ವಾಮಿ ದೇಗುಲದಲ್ಲಿ ಪೂಜೆ ಸಲ್ಲಿಸಿದ ಕುಸುಮಾ ಗೆಲುವಿಗಾಗಿ ಪ್ರಾರ್ಥಿಸಿದರು. ರಾಜರಾಜೇಶ್ವರಿ ನಗರದ ಉಪಚುನಾವಣೆಯ ಮತದಾನ ಆರಂಭಗೊಂಡಿದೆ. ಜಿದ್ದಾಜಿದ್ದಿಯ ಕಣವಾಗಿ ಮಾರ್ಪಟ್ಟಿರುವ ಈ ಕ್ಷೇತ್ರದಲ್ಲಿ ಎಲ್ಲರ ಚಿತ್ತ ನೆಟ್ಟಿದೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್‌ ಈ ಕಣವನ್ನು ಪ್ರತಿಷ್ಠೆಯ ಕಣವನ್ನಾಗಿ ಸ್ವೀಕರಿಸಿದ್ದಾರೆ. ರಾಜರಾಜೇಶ್ವರಿ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ , ಬಿಜೆಪಿಯಿಂದ ಮುನಿರತ್ನ ನಾಯ್ಡು ಹಾಗೂ ಜೆಡಿಎಸ್‌ನಿಂದ ವಿ. ಕೃಷ್ಣಮೂರ್ತಿ ಕಣದಲ್ಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಅವರ ಸಹೋದರ ಸಂಸದ ಡಿಕೆ ಸುರೇಶ್ ಅವರು ಕೂಡಾ ಈ ಚುನಾವಣೆಯಲ್ಲಿ ಪ್ರತಿಷ್ಠೆಯನ್ನಾಗಿ ಸ್ವೀಕರಿಸಿದ್ದಾರೆ. ಈ ನಿಟ್ಟಿನಲ್ಲಿ ನವೆಂಬರ್ 2 ರ ವರೆಗೂ ಮತದಾರರ ಮನ ಒಲಿಯಲು ಕಸರತ್ತು ನಡೆದಿತ್ತು. ಇದೀಗ ಮತದಾನ ಆರಂಭಗೊಂಡಿದೆ. ನವೆಂಬರ್‌ 10 ರಂದು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ.


from India & World News in Kannada | VK Polls https://ift.tt/389hIf8

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...