ಕಂಗನಾ ರಾಣಾವತ್ ವಿರುದ್ಧ ಕೆಂಡಕಾರಿದ್ದ ಶಿವಸೇನೆ ನಾಯಕನಿಗೆ ಇಡಿ ರೇಡ್ ಶಾಕ್..!

ಮುಂಬೈ: ಬಾಲಿವುಡ್ ನಟಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದ್ದ ಶಿವಸೇನೆಯ ನಾಯಕ ಪ್ರತಾಪ್ ಸರ್‌ನಾಯಕ್‌ಗೆ ಶಾಕ್ ನೀಡಿದೆ..! ಮಹಾರಾಷ್ಟ್ರದ ಹಲವೆಡೆ ಏಕಕಾಲಕ್ಕೆ ನಡೆಸಿರುವ ಜಾರಿ ನಿರ್ದೇಶನಾಲಯ, ಶಿವಸೇನೆ ಶಾಸಕ ಪ್ರತಾಪ್ ಸರ್‌ನಾಯಕ್‌ಗೆ ಸಂಬಂಧಿಸಿದ ಹಲವು ಸ್ಥಳಗಳಲ್ಲಿ ತನಿಖೆ ನಡೆಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದ ಅಡಿ ಈ ದಾಳಿ ನಡೆದಿದೆ ಎನ್ನಲಾಗಿದೆ. ಆದ್ರೆ, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಲಾಗಿದೆಯೇ ಅನ್ನೋದನ್ನು ಇನ್ನಷ್ಟೇ ಇಡಿ ದೃಢಪಡಿಸಬೇಕಿದೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಓವಾಲಾ-ಮಜಿವಾಡ ಕ್ಷೇತ್ರದ ಶಿವಸೇನೆ ಪಕ್ಷದ ಶಾಸಕ , ಈ ಹಿಂದೆ ಕಂಗನಾ ರಾಣಾವತ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಮುಂಬೈ ಮಹಾನಗರವನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿದ್ದ ಕಂಗನಾ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದ್ದರು. ಈ ಸಂಬಂಧ ಮರಾಠಿಯಲ್ಲಿ ಟ್ವೀಟ್‌ ಮಾಡಿದ್ದ ಸರ್‌ನಾಯಕ್, ‘ಬಾಲಿವುಡ್ ನಟಿ ಕಂಗನಾ ರಾಣಾವತ್ ಅವರಿಗೆ ಸಂಜಯ್ ರಾವತ್ ಅವರು ಮೃದು ಭಾಷೆಯಲ್ಲಿ ಎಚ್ಚರಿಕೆ ನೀಡಿದ್ದಾರೆ. ಆಕೆ ಮುಂಬೈಗೆ ಬಂದರೆ ನಮ್ಮ ಮಹಿಳೆಯರು ಆಕೆಗೆ ಕಪಾಳ ಮೋಕ್ಷ ಮಾಡುತ್ತಾರೆ. ಉದ್ಯಮಿಗಳು ಹಾಗೂ ಸಿನೆಮಾ ತಾರೆಯರ ಜನನಕ್ಕೆ ಕಾರಣವಾಗುವ ಮುಂಬೈ ನಗರವನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿದ ಕಂಗನಾ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕು’ ಎಂದು ಆಗ್ರಹಿಸಿದ್ದರು. ಶಿವಸೇನೆ ನಾಯಕ ಸಂಜಯ್ ರಾವತ್‌ ಅವರು ಕಂಗನಾ ರಾಣಾವತ್‌ಗೆ ಎಚ್ಚರಿಕೆ ನೀಡಿದ ಬಳಿಕ ಆಕೆ ಮುಂಬೈ ನಗರವನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿದ್ದರು. ಇದರ ಬೆನ್ನಲ್ಲೇ ಸರ್‌ನಾಯಕ್‌ ಕಂಗನಾ ರಾಣಾವತ್‌ಗೆ ಬೆದರಿಕೆ ಹಾಕಿದ್ದರು. ಸರ್‌ನಾಯಕ್ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗ ಕೂಡಾ ಕೆಂಡಕಾರಿತ್ತು. ಕಂಗನಾ ರಾಣಾವತ್‌ಗೆ ಬೆದರಿಕೆ ಹಾಕಿದ್ದು ಏಕೆ ಎಂದು ಪ್ರಶ್ನಿಸಿತ್ತು. ಅಷ್ಟೇ ಅಲ್ಲ, ಸರ್‌ನಾಯಕ್‌ ಬಂಧನಕ್ಕೂ ಆಗ್ರಹಿಸಿತ್ತು.


from India & World News in Kannada | VK Polls https://ift.tt/3nS4Q1D

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...