ಬೆಂಗಳೂರು: ವಿಧಾನಸಭಾ ಕ್ಷೇತ್ರದ ಮತದಾನಕ್ಕೆ ಇನ್ನೇನು ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ . ಅವರು ಬೆಂಗಳೂರಿನ ವಿಜಯನಗರದಲ್ಲಿ ಆದಿಚುಂಚನಗಿರಿ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರನ್ನು ಸೋಮವಾರ ಭೇಟಿ ಮಾಡಿ ಆಶೀರ್ವಾದ ಪಡೆದರು. ಅವರ ತಂದೆ, ಕಾಂಗ್ರೆಸ್ ಮುಖಂಡ ಹನುಮಂತರಾಯಪ್ಪ, ತಾಯಿ ಭೈರಮ್ಮ ಜತೆಗಿದ್ದರು. ಕಳೆದ ಒಂದು ವಾರದಿಂದಲೇ ಉಪಚುನಾವಣೆ ಕಣ ರಂಗೇರಿದ್ದು, ಬಿರುಸಿನ ಪ್ರಚಾರ ನಡೆದಿತ್ತು. ಅಂತಿಮ ಹಂತದ ಪ್ರಚಾರ ಕಾರ್ಯದಲ್ಲಿ ಶುಕ್ರವಾರ ಆರ್.ಆರ್. ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರೋಡ್ ಶೋ ನಡೆಸಿದರು. ಆರ್ ಆರ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಸುಮಾ ಎಚ್, ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ ಹಾಗೂ ಜೆಡಿಎಸ್ನಿಂದ ವಿ. ಕೃಷ್ಣಮೂರ್ತಿ ಕಣದಲ್ಲಿದ್ದಾರೆ. ಮೂವರು ಅಭ್ಯರ್ಥಿಗಳು ಭರ್ಜರಿ ಪ್ರಚಾರ ತಂತ್ರ ಅನುಸರಿಸಿದ್ದಾರೆ. ಆರ್. ಆರ್. ನಗರ ಅತ್ಯಂತ ಸೂಕ್ಷ್ಮ ವಲಯವಾಗಿ ಮಾರ್ಪಟ್ಟಿದ್ದು ಸಾಕಷ್ಟು ಕುತೂಹಲದ ಕಣವಾಗಿದೆ. ಮುಂಜಾಗರೂಕತಾ ಕ್ರಮವಾಗಿ ನವೆಂಬರ್ 1ರಿಂದಲೇ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆಯನ್ನು ಜಾರಿಯಾಗಿದ್ದು, ಬಹಿರಂಗ ಪ್ರಚಾರ ಕಾರ್ಯಕ್ಕೆ ತೆರೆ ಬಿದ್ದಿದೆ. ಆರ್.ಆರ್ ನಗರ ವ್ಯಾಪ್ತಿಯಲ್ಲಿ ಮದ್ಯ ಅಥವಾ ಯಾವುದೇ ಮಾದಕವಸ್ತುಗಳ ಮಾರಾಟ, ಬಳಕೆ, ಸಂಗ್ರಹಣೆಯನ್ನು ನಿಷೇಧಿಸಲಾಗಿದೆ. ನವೆಂಬರ್ 1 ರಂದು ಸಂಜೆ 5 ಗಂಟೆಯಿಂದ ನವೆಂಬರ್ 3 ಮಧ್ಯರಾತ್ರಿಯವರೆಗೆ ಮದ್ಯ ಮಾರಾಟವನ್ನುನಿಷೇಧಿಸಲಾಗಿದೆ.
from India & World News in Kannada | VK Polls https://ift.tt/3jQhY4Q