ಆಳ್ವಾಸ್‌ನ ಎಂಟು ಮಂದಿಗೆ ಏಕಲವ್ಯ, ಕ್ರೀಡಾರತ್ನ ಪ್ರಶಸ್ತಿ

ಮೂಡುಬಿದಿರೆ: ರಾಜ್ಯ ಸರಕಾರವು ಕ್ರೀಡಾ ಸಾಧಕರಿಗೆ ನೀಡಿದ ಹಾಗೂ ಕರ್ನಾಟಕ ಪ್ರಶಸ್ತಿಗೆ ಮೂಡುಬಿದಿರೆ ಆಳ್ವಾಸ್‌ ಶಿಕ್ಷಣ ಸಂಸ್ಥೆಯ ಒಟ್ಟು ಎಂಟು ಕ್ರೀಡಾ ವಿದ್ಯಾರ್ಥಿಗಳು ಪಾತ್ರರಾಗಿದ್ದಾರೆ. ಇವರೆಲ್ಲರೂ ಆಳ್ವಾಸ್‌ನ ದತ್ತು ಸ್ವೀಕಾರ ಯೋಜನೆಯಡಿ ತರಬೇತಿ ಪಡೆದು ಸಾಧನೆ ಮಾಡಿದ ಕ್ರೀಡಾಪಟುಗಳಾಗಿದ್ದಾರೆ ಎಂದು ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ್‌ ಆಳ್ವ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಅಭಿನಯ ಶೆಟ್ಟಿ, ಬಾಂಧವ್ಯ, ಅಭಿಷೇಕ್‌ಶೆಟ್ಟಿ ಅವರು ಏಕಲವ್ಯ ಪ್ರಶಸ್ತಿ ಹಾಗೂ ಜಯಲಕ್ಷಿತ್ರ್ಮೕ ಜೆ. ,ಲಾವಣ್ಯ ಬಿ.ಡಿ, ರಕ್ಷಿತ್‌ ಎಸ್‌, ಪಲ್ಲವಿ ಎಸ್‌ ಕೆ, ಮತ್ತು ಅನುಶ್ರೀ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಏಕಲವ್ಯ ಪ್ರಶಸ್ತಿ ಪುರಸ್ಕೃತರಾದ ಅಭಿಷೇಕ್‌ ಶೆಟ್ಟಿ ಅಥ್ಲೆಟಿಕ್‌ನಲ್ಲಿ 2019ರ ಸಾಲಿನ ಪ್ರಶಸ್ತಿ ಗಳಿಸಿದ್ದು, ಅಂತಾರಾಷ್ಟ್ರೀಯ ಕ್ರೀಡಾಪಟುವಾಗಿದ್ದು ಪ್ರಸ್ತುತ ಪಶ್ಚಿಮ ರೈಲ್ವೆಯಲ್ಲಿಉದ್ಯೋಗಿಯಾಗಿದ್ದಾರೆ. ಬಾಂಧವ್ಯ ಬಾಸ್ಕೆಟ್‌ಬಾಲ್‌ನಲ್ಲಿ 2018ರ ಏಕಲವ್ಯ ಪ್ರಶಸ್ತಿ ಗಳಿಸಿದ್ದು ಅಂತಾರಾಷ್ಟ್ರೀಯ ಬಾಸ್ಕೆಟ್‌ಬಾಲ್‌ ಆಟಗಾರ್ತಿಯಾಗಿದ್ದಾರೆ. ಪ್ರಸುತ್ತ ದಕ್ಷಿಣ ಪಶ್ಚಿಮ ರೈಲ್ವೆ ಉದ್ಯೋಗಿ. ಅಂತಾರಾಷ್ಟ್ರೀಯ ಕ್ರೀಡಾಪಟು ಅಭಿನಯ ಶೆಟ್ಟಿ ಅಥ್ಲೆಟಿಕ್ಸ್‌ನಲ್ಲಿ 2019ರ ಏಕಲವ್ಯ ಪ್ರಶಸ್ತಿ ಪುರಸ್ಕೃತರಾಗಿದ್ದು ಪ್ರಸ್ತುತ ಪಶ್ಚಿಮ ರೈಲ್ವೆ ಉದ್ಯೋಗಿ. ಸ್ಟಾರ್‌ ಆಫ್‌ ಇಂಡಿಯಾ ಪ್ರಶಸ್ತಿ ಪುರಸ್ಕೃತ ಬಾಲ್‌ ಬ್ಯಾಡ್ಮಿಂಟನ್‌ ಆಟಗಾರ್ತಿ ಜಯಲಕ್ಷ್ಮೀ ಜೆ 2017ರ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗೆ ಭಾಜನರಾಗಿದ್ದು, ಪ್ರಸುತ್ತ ಆಳ್ವಾಸ್‌ ಸಂಸ್ಥೆಯಲ್ಲಿ ತರಬೇತುದಾರರಾಗಿದ್ದಾರೆ. ಲಾವಣ್ಯ ಬಿ.ಡಿ. ಬಾಲ್‌ಬ್ಯಾಡ್ಮಿಂಟನ್‌ನಲ್ಲಿ 2018ರ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ, ರಾಷ್ಟ್ರೀಯ ಸೀನಿಯರ್‌ ಬಾಲ್‌ ಬ್ಯಾಡ್ಮಿಂಟನ್‌ ಚಾಂಪಿಯನ್‌ ಆಟಗಾರ್ತಿಯಾಗಿದ್ದಾರೆ. ರಾಷ್ಟ್ರೀಯ ಸೀನಿಯರ್‌ ಬಾಲ್‌ ಬ್ಯಾಡ್ಮಿಂಟನ್‌ ಚಾಂಪಿಯನ್‌ ಆಟಗಾರ್ತಿ ಪಲ್ಲವಿ ಎಸ್‌ ಕೆ ಅವರು 2019ರ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ ಗಳಿಸಿದ್ದಾರೆ. ಏಷ್ಯನ್‌ ಜೂನಿಯರ್‌ ಚಾಂಪಿಯನ್‌ಶಿಪ್‌ನಲ್ಲಿ ಸ್ವರ್ಣ ಪದಕ ವಿಜೇತ ಹಾಗೂ ಪ್ರೊ ಕಬಡ್ಡಿ ಆಟಗಾರ ರಕ್ಷಿತ್‌ ಎಸ್‌ ಕಬಡ್ಡಿಯಲ್ಲಿ 2019ರ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ ಗಳಿಸಿದ್ದಾರೆ. ಅಖಿಲ ಭಾರತ ಹಿಂದ್‌ ಕೇಸರಿ ಪ್ರಶಸ್ತಿ ವಿಜೇತೆ ಅನುಶ್ರೀ ಕುಸ್ತಿಯಲ್ಲಿ 2017ರ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬಾಲ್‌ ಬ್ಯಾಡ್ಮಿಂಟನ್‌ ಕ್ರೀಡೆಯಲ್ಲಿ ಆಳ್ವಾಸ್‌ ಸಂಸ್ಥೆಯ ವಿದ್ಯಾರ್ಥಿಗಳು ನಿರಂತರವಾಗಿ ಏಳನೇ ಬಾರಿಗೆ ಕ್ರೀಡಾರತ್ನ ಪ್ರಶಸ್ತಿ ಗಳಿಸಿದ್ದಾರೆ. ಎರಡು ವರ್ಷಗಳ ಹಿಂದೆ ಆಳ್ವಾಸ್‌ ಶಿಕ್ಷಣ ಸಂಸ್ಥೆ ಕ್ರೀಡೆಯಲ್ಲಿ ತೋರಿದ ಗಣನೀಯ ಸಾಧನೆಗಾಗಿ ಕ್ರೀಡಾ ಪೋಷಕ್‌ ಪ್ರಶಸ್ತಿ ಗಳಿಸಿತ್ತು.


from India & World News in Kannada | VK Polls https://ift.tt/3oLTJIZ

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...