ಒಂದು ವರ್ಷದೊಳಗೆ ಹಳ್ಳಿ ಹಳ್ಳಿಗೂ ಗುಣಮಟ್ಟದ ಇಂಟರ್ನೆಟ್ ಸೇವೆ‌: ನಳಿನ್ ಕುಮಾರ್ ಕಟೀಲ್

ಮುಂಡಾಜೆ: ಮುಂದಿನ ಒಂದು ವರ್ಷದೊಳಗೆ ಕೇಂದ್ರ ಸರಕಾರವು ಹಳ್ಳಿಹಳ್ಳಿಗೂ ಒಎಫ್‌ಸಿ ಅಳವಡಿಸಿ, ಗುಣಮಟ್ಟದ ಇಂಟರ್ನೆಟ್‌ ಸೇವೆ ನೀಡುವ ಯೋಜನೆ ರೂಪಿಸಿದ್ದು, ಹಳ್ಳಿಗಳಲ್ಲಿ ಈಗ ಕಂಡುಬರುತ್ತಿರುವ ಅಂತರ್ಜಾಲ ಸಮಸ್ಯೆಗೆ ಮುಕ್ತಿ ಸಿಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು. ಕೇಂದ್ರ ಸರಕಾರದ 6 ಕೋಟಿ ರೂ. ವೆಚ್ಚದ ಕಕ್ಕಿಂಜೆ-ನೆರಿಯ-ಪುದುವೆಟ್ಟು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಹಾಗೂ ನಿಡಿಗಲ್‌ನಲ್ಲಿ ನಿರ್ಮಿಸಿದ ನೂತನ ಸೇತುವೆಯನ್ನು ಭಾನುವಾರ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಪ್ರಧಾನಿ ಮೋದಿಯವರು ಬಿಡುಗಡೆಗೊಳಿಸಿರುವ ಯೋಜನೆಗಳನ್ನು ರಾಜ್ಯ ಸರಕಾರ ಉತ್ತಮವಾಗಿ ಬಳಸಿಕೊಳ್ಳುವುದರ ಜತೆಗೆ ರಾಜ್ಯದ ಅನುದಾನವನ್ನು ಹಳ್ಳಿಹಳ್ಳಿಗಳಲ್ಲಿ ಮೂಲಸೌಕರ್ಯದ ಅಭಿವೃದ್ಧಿಯಲ್ಲಿ ತೊಡಗಿಸಿ ಅತ್ಯುತ್ತಮ ಕೆಲಸ ಮಾಡುತ್ತಿದೆ. ಶಾಸಕ ಹರೀಶ್‌ ಪೂಂಜರ ನಿರಂತರ ಪ್ರಯತ್ನದಿಂದ ಬೆಳ್ತಂಗಡಿ ತಾಲೂಕಿನ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆಗೊಂಡಿದೆ ಎಂದರು. ಅರಣ್ಯವಾಸಿಗಳಿಗೆ ತೊಂದರೆಯಾಗದುಕಸ್ತೂರಿರಂಗನ್‌ ವರದಿಯಿಂದ ಅರಣ್ಯ ಸಮೀಪ ವಾಸಿಗಳಿಗೆ ಯಾವುದೇ ತೊಂದರೆಯಾಗದಂತೆ ಕೇಂದ್ರ ಸರಕಾರ ಮುತುವರ್ಜಿ ವಹಿಸಿದೆ ಎಂದು ಈ ಸಂದರ್ಭ ತಿಳಿಸಿದರು. ನೆರಿಯ ಅಭಿವೃದ್ಧಿಗೆ 16.5 ಕೋಟಿ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಮಾತನಾಡಿ, ಗ್ರಾಮೀಣ ಜನರ ಸಮಸ್ಯೆಗಳನ್ನು ಬಗೆಹರಿಸುವ ಗುರಿ ಹೊಂದಿದ್ದು, ತಾಲೂಕಿನ ಪ್ರತಿ ಗ್ರಾಮಗಳಿಗೆ ಅನುದಾನ ಹಂಚಲಾಗುತ್ತಿದೆ. ನೆರಿಯ ಗ್ರಾಮದ ಅಭಿವೃದ್ಧಿಗೆ ಕಳೆದ ಎರಡೂವರೆ ವರ್ಷಗಳಲ್ಲಿ 16.5 ಕೋಟಿ ರೂ. ಬಿಡುಗಡೆಗೊಳಿಸಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ರೈತರ ಕ್ಷೇಮಕ್ಕಾಗಿ ಮೀಸಲಿಟ್ಟಿರುವ ಯೋಜನೆಗಳು ಪ್ರತಿಯೊಬ್ಬ ಫಲಾನುಭವಿಗಳಿಗೂ ದೊರೆಯಬೇಕು ಎಂದರು. ಎಂಎಲ್‌ಸಿ ಪ್ರತಾಪಸಿಂಹ ನಾಯಕ್‌, ಜಿಪಂ ಸದಸ್ಯ ಕೊರಗಪ್ಪ ನಾಯ್ಕ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಧರ ಎಂ. ಕಲ್ಮಂಜ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ದಕ ವಿಭಾಗದ ಅಭಿಯಂತರ ರಮೇಶ್‌, ಪೂವಾಜೆ ಕುಶಾಲಪ್ಪ ಗೌಡ, ಬಾಬು ಗೌಡ ಪರ್ಪಳ, ವಿಶ್ವನಾಥ ಅಣಿಯೂರು, ಮಂಜುನಾಥ ಶೆಟ್ಟಿ ಉಪಸ್ಥಿತರಿದ್ದರು. ಕೋಟ್‌ ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯ ಪ್ರಥಮ ಹಂತದ ಕಾಮಗಾರಿ ಬಿ.ಸಿ. ರೋಡ್‌ನಿಂದ ಪುಂಜಾಲಕಟ್ಟೆ ತನಕ ಪ್ರಗತಿಯಲ್ಲಿದೆ. ಎರಡನೇ ಹಂತದ ಕಾಮಗಾರಿಯಲ್ಲಿ ಪುಂಜಾಲಕಟ್ಟೆಯಿಂದ ಚಾರ್ಮಾಡಿ ತನಕ ರಸ್ತೆ ಅಭಿವೃದ್ಧಿ ಕಾಮಗಾರಿ ಶೀಘ್ರ ಆರಂಭಿಸಲಾಗುವುದು. ಇದರಿಂದ ಈ ಪ್ರದೇಶಗಳಲ್ಲಿರುವ ಹೆದ್ದಾರಿಯ ರಸ್ತೆ ಸಮಸ್ಯೆಗೆ ಪರಿಹಾರ ಸಿಗಲಿದೆ. ಬಹು ವರ್ಷದ ಬೇಡಿಕೆಯ ನಿಡಿಗಲ್‌ ಸೇತುವೆ ಸುಮಾರು 15 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು, ವಾಹನ ಸವಾರರಿಗೆ ಅನುಕೂಲವಾಗಲಿದೆ. ಸೇತುವೆಯ ಕಾಮಗಾರಿ ಗುಣಮಟ್ಟ ಉತ್ತಮವಾಗಿದೆ. ನಳಿನ್‌ ಕುಮಾರ್‌ ಕಟೀಲ್‌, ಸಂಸದರು


from India & World News in Kannada | VK Polls https://ift.tt/3pVjxTl

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...