ಮಂಗಳೂರು: ಫೇಸ್ಬುಕ್ನಲ್ಲಿ ನಕಲಿ ಖಾತೆ ಸೃಷ್ಟಿಸಿ ಮದುವೆ ಸಂಬಂಧ, ಒಳ್ಳೆಯ ಉದ್ಯೋಗ ಕೊಡಿಸುವುದಾಗಿ ನಂಬಿಸಿ 20 ಲಕ್ಷಕ್ಕೂ ಅಧಿಕ ರೂ. ವಂಚಿಸಿರುವ ಆರೋಪಿಯನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಕುರುಬನಹಳ್ಳಿ ನಿವಾಸಿ (23) ಬಂಧಿತ ಆರೋಪಿ. ಪ್ರಕರಣ ವಿವರ! ಅಂಚೆ ಇಲಾಖೆಯ ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ಎಂದು ನಂಬಿಸುತ್ತಿದ್ದ ಪರಮೇಶ್ವರಪ್ಪ ಗೋವಾದ ನಿವಾಸಿ ಹನುಮಪ್ಪ ಬಿಸಳ್ಳಿ ಎಂಬವರ ಪುತ್ರಿಗೆ ವಾಟ್ಸ್ಯಾಪ್ನಲ್ಲಿ ಅಂಚೆ ಇಲಾಖೆಗೆ ಸಂಬಂಧಿಸಿದಂತೆ ತನಗೆ ರಾಜ್ಯೋತ್ಸವ ಮತ್ತು ಮೇಘದೂತ ಪ್ರಶಸ್ತಿ ಬಂದಿರುವ ಬಗ್ಗೆ ಮಾಹಿತಿ ಕಳುಹಿಸಿದ್ದ. ತನ್ನ ಮಗಳಿಗೆ ನೆಂಟಸ್ಥಿಕೆ ಬಂದ ಹಿನ್ನೆಲೆಯಲ್ಲಿ ಹನುಮಪ್ಪ ಮಂಗಳೂರಿನ ಅಂಚೆ ಇಲಾಖೆಯಲ್ಲಿ ವಿಚಾರಿಸಿದಾಗ ಆತ ವಂಚಿಸುತ್ತಿರುವ ಸಂಗತಿ ಬೆಳಕಿಗೆ ಬಂದಿದೆ. ಸೈಬರ್ ಠಾಣೆಗೆ ದೂರು! ಅಂಚೆ ಇಲಾಖೆಯ ಹಿರಿಯ ಅಧಿಕಾರಿ ಡಿ.2ರಂದು ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದರು. ಆರೋಪಿಯು ಇಲ್ಲಿಯವರೆಗೆ 13 ಮಂದಿಗೆ 15ರಿಂದ 20 ಲಕ್ಷ ರೂ. ವಂಚಿಸಿದ್ದಾನೆ. ಬಂಧಿತ ಆರೋಪಿಯಿಂದ ಲ್ಯಾಪ್ಟಾಪ್, 5 ಮೊಬೈಲ್, ಅಂಚೆ ಇಲಾಖೆಯ ನಕಲಿ ಗುರುತಿನ ಚೀಟಿ, ಐಸಿಐಸಿಐ ಬ್ಯಾಂಕ್ನ ಡೆಬಿಟ್ ಕಾರ್ಡ್ ವಶಕ್ಕೆ ಪಡೆಯಲಾಗಿದೆ. ಸ್ವಾಧೀನಪಡಿಸಿಕೊಳ್ಳಲಾದ ವಸ್ತುಗಳ ಮೌಲ್ಯ 1.35 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಆರೋಪಿಯನ್ನು ನಗರದ 2ನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಕೋವಿಡ್ ಪರೀಕ್ಷೆ ಹಿನ್ನೆಲೆಯಲ್ಲಿ ಈತ ಪೊಲೀಸರ ವಶದಲ್ಲಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 20 ನಕಲಿ ಖಾತೆ ಸೃಷ್ಟಿಸಿದ್ದ ಆರೋಪಿ ಆರೋಪಿ ಫೇಸ್ಬುಕ್ನಲ್ಲಿ ಸುಮಾರು 20 ನಕಲಿ ಖಾತೆಗಳನ್ನು ಸೃಷ್ಟಿಸಿದ್ದಾನೆ. ಬೇರೆ ಬೇರೆ ಹೆಸರಿನಿಂದ ಖಾತೆ ತೆರೆದಿದ್ದು, ಅಂಚೆ, ಪೊಲೀಸ್, ಅರಣ್ಯ, ಕೆಪಿಟಿಸಿಎಲ್, ಶಿಕ್ಷಣ ಇಲಾಖೆ ಸಹಿತ ಇತರ ಸರಕಾರಿ ಇಲಾಖೆಗಳ ಉತ್ತಮ ದರ್ಜೆಯ ಅಧಿಕಾರಿಗಳೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಸ್ನೇಹ ಬೆಳೆಸಿದ್ದ. ಅಧಿಕಾರಿಗಳ ಜತೆಗಿನ 'ಫೇಸ್ಬುಕ್ ಸ್ನೇಹ'ವನ್ನು ಪ್ರಭಾವದಂತೆ ದುರ್ಬಳಕೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರಿಗೂ ವಂಚಿಸಿದ ಭೂಪ ಡಿ.20ರಂದು ಆರೋಪಿಯು ಮಂಗಳೂರು ನಗರದ ಸಶಸ್ತ್ರ ಮೀಸಲು ಪಡೆಯ ಇಬ್ಬರು ಪೊಲೀಸರಿಗೂ ಅಂಚೆ ಇಲಾಖೆಯಲ್ಲಿನ ಗ್ರೇಡ್-1, ಗ್ರೇಡ್-2 ಹುದ್ದೆ ಖಾಲಿ ಇರುವುದಾಗಿ ತಿಳಿಸಿದ್ದ. ಈ ಸಿಬ್ಬಂದಿಗೆ ಈತ ಮಹಿಳೆಯ ಹೆಸರಲ್ಲಿ ನಕಲಿ ಖಾತೆಯ ಮೂಲಕ ಪರಿಚಯವಾಗಿದ್ದ. ಬಳಿಕ ಮೆಸೆಂಜರ್, ವಾಟ್ಸ್ಯಾಪ್ ಚಾಟ್ ಮಾಡಿ ಇಬ್ಬರಿಂದಲೂ 6 ಲಕ್ಷ ರೂ. ಪಡೆದು ವಂಚಿಸಿದ್ದ.ಎರಡೂ ಪ್ರಕರಣಗಳನ್ನು ಕೂಲಂಕಷವಾಗಿ ಅಧ್ಯಯನ ಮಾಡಿದ ಸೈಬರ್ ಕ್ರೈಂ ಪೊಲೀಸರು, ತನಿಖೆ ನಡೆಸಿ ಆರೋಪಿಯನ್ನು ನಗರದ ಕೆಎಎಸ್ಆರ್ಟಿಸಿ ಬಸ್ ನಿಲ್ದಾಣದ ಲ್ಲಿಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
from India & World News in Kannada | VK Polls https://ift.tt/3nUuJys