ಕೊಡಗಿನಲ್ಲಿ ಮತ್ತೆ ಚಿಗುರಿದ ಪ್ರವಾಸೋದ್ಯಮ..! ಮೂರ್ನಾಲ್ಕು ದಿನದಲ್ಲಿ 50ಸಾವಿರಕ್ಕೂ ಹೆಚ್ಚು ಮಂದಿ ಭೇಟಿ..!

ಉದಿಯಂಡ ಜಯಂತಿ ಮಂದಣ್ಣ ಮಡಿಕೇರಿ: ಪ್ರಾಕೃತಿಕ ವಿಕೋಪ ಹಾಗೂ ಕೋವಿಡ್‌-19 ಲಾಕ್‌ಡೌನ್‌ ನಡೆದ ನಂತರ ಸೊರಗಿದ್ದ ಕೊಡಗಿನ ಪ್ರವಾಸೋದ್ಯಮ ವರ್ಷಾಂತ್ಯದ ವೇಳೆಗೆ ಚೇತರಿಸಿಕೊಂಡಿದ್ದು, ಕೊಡಗಿನಲ್ಲಿ ಕಳೆದ ಎರಡು ಮೂರು ದಿನಗಳಿಂದ ಪ್ರವಾಸಿಗರ ಕಲರವ ಕಂಡು ಬರುತ್ತಿದೆ. ಹೊಸ ವರ್ಷ ಹಾಗೂ ಕ್ರಿಸ್‌ಮಸ್‌ ರಜೆ ಆರಂಭ ಆಗುತ್ತಿದಂತೆಯೇ ಜಿಲ್ಲೆಯ ಕಡೆಗೆ ಪ್ರವಾಸಿಗರು ದೊಡ್ಡ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಸಾಕಾನೆ ಶಿಬಿರಕ್ಕೆ ಹೆಸರಾದ ಕುಶಾಲನಗರದ ದುಬಾರೆ, ಕಾವೇರಿ ನಿಸರ್ಗಧಾಮ, ಹಾರಂಗಿ ಜಲಾಶಯ, ರಾಜಾ ಸೀಟ್‌, ತಲಕಾವೇರಿ, ಭಾಗಮಂಡಲ ಸೇರಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ದಟ್ಟಣೆ ಹೆಚ್ಚಾಗಿ ಕಂಡು ಬರು ತ್ತಿದ್ದು, ಪ್ರವಾಸೋದ್ಯಮಿಗಳ ಮುಖದಲ್ಲಿ ಮತ್ತೆ ಮಂದಹಾಸ ಕಾಣಿಸಿಕೊಂಡಿದೆ. ಕೋವಿಡ್‌-19 ಜಿಲ್ಲೆಯ ಪ್ರವಾಸೋದ್ಯಮಕ್ಕೆ ದೊಡ್ಡ ಪೆಟ್ಟನ್ನೇ ನೀಡಿತ್ತು. ಆದರೆ ಹೊಸ ವರ್ಷ ಹಾಗೂ ಕ್ರಿಸ್‌ಮಸ್‌ ಹಿನ್ನೆಲೆ ಹೆಚ್ಚು ಪ್ರವಾಸಿಗರು ಜಿಲ್ಲೆಯತ್ತ ಆಗಮಿಸುತ್ತಿದ್ದಾರೆ. ಇದರೊಂದಿಗೆ ಮನೆಯಲ್ಲಿಯೇ ಕುಳಿತಿದ್ದ ಸ್ಥಳೀಯರು ಕೂಡ ಪ್ರವಾಸಿ ತಾಣಗಳತ್ತ ಮುಖ ಮಾಡಿದ್ದಾರೆ. ಜಿಲ್ಲೆಯಲ್ಲಿ ಬೆಂಗಳೂರು, ಮೈಸೂರು ಸೇರಿದಂತೆ ಕರ್ನಾಟಕದ ಪ್ರವಾಸಿಗರೇ ಶೇ.80 ರಷ್ಟಿದ್ದಾರೆ. ಆಂಧ್ರಪ್ರದೇಶ, ತಮಿಳುನಾಡು, ಕೇರಳದಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಮೂರ್ನಾಲ್ಕು ದಿನದಿಂದ 50 ಸಾವಿರಕ್ಕೂ ಅಧಿಕ ಮಂದಿ ಜಿಲ್ಲೆಗೆ ಭೇಟಿ ನೀಡಿದ್ದು, ಜಿಲ್ಲೆಯ ಬಹುತೇಕ ರೂಂಗಳು ಭರ್ತಿಯಾಗಿದೆ ಎನ್ನುತ್ತಾರೆ ಹೊಟೇಲ್‌ ಮತ್ತು ರೆಸಾರ್ಟ್‌ ಮಾಲಿಕರ ಸಂಘದ ಜಿಲ್ಲಾಧ್ಯಕ್ಷ ಬಿ.ಆರ್‌. ನಾಗೇಂದ್ರ ಪ್ರಸಾದ್‌. ಕೋವಿಡ್‌-19 ನಿಧಾನವಾಗಿ ಕಡಿಮೆ ಯಾಗುತ್ತಿದೆಯಾದರೂ ರೂಪಾಂತರಗೊಂಡ ವೈರಸ್‌ ಮತ್ತೆ ಎಲ್ಲರಲ್ಲಿಯೂ ಭೀತಿ ಹುಟ್ಟಿಸಿದ್ದು, ಪ್ರವಾಸಿಗರ ಹೆಚ್ಚಳ ಮತ್ತೆ ಆತಂಕಕ್ಕೆ ಕಾರಣ ವಾಗಿದೆ. ಕೆಲವೆಡೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆಯಾದರೂ ಹೆಚ್ಚಿನ ಜನದಟ್ಟಣೆ ನಿಭಾಯಿಸಲು ಸಾಧ್ಯವಾಗದ ಸ್ಥಿತಿಯೂ ಇದೆ. ಸಾಮಾಜಿಕ ಅಂತರ, ಮಾಸ್ಕ್‌ ಧರಿ ಸುವಿಕೆ ಕಡಿಮೆಯಾ ಗಿದೆ. ಇನ್ನು ಚುನಾವಣೆ ಬಂದೋಬಸ್ತ್‌ಗೆ ಪೊಲೀಸರು ನಿಯೋಜನೆಯಾಗಿದ್ದು, ವಾಹನ ದಟ್ಟಣೆಯನ್ನು ನಿಭಾಯಿಸಲು ಸಂಚಾರ ಪೊಲೀಸರು ಪರದಾಡುತ್ತಿದ್ದಾರೆ.


from India & World News in Kannada | VK Polls https://ift.tt/3mTXwBQ

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...