ಮತದಾನ ಮಾಡಲು ಹೊರಟ ಮಹಿಳೆ ಅಪಘಾತಕ್ಕೆ ಬಲಿ

ಬೆಂಗಳೂರು ಗ್ರಾಮಾಂತರ: ಇಂದು ರಾಜ್ಯದಲ್ಲಿ ಎರಡನೇ ಹಂತದ ಪ್ರಕ್ರಿಯೆ ಆರಂಭಗೊಂಡಿದ್ದು, ಮತದಾನ ಮಾಡಲು ಹೊರಟ ಅಪಘಾತಕ್ಕೆ ಬಲಿಯಾಗಿದ್ದಾರೆ. ಹೊಸಕೋಟೆ-ಕೋಲಾರ ಹೆದ್ದಾರಿಯಲ್ಲಿ ಬೈಕ್ ಮತ್ತು ಕೆಎಸ್ಆರ್ ಟಿಸಿ ಬಸ್ ಮಧ್ಯೆ ಸಂಭವಿಸಿದ್ದು, ಹೇಮಾವತಿ(25) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜೊತೆಯಲ್ಲಿದ್ದ ಸಹೋದರ ರಾಘವೇಂದ್ರ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೊಸಕೋಟೆಯ ಅಯ್ಯಪ್ಪ ನಗರದ ನಿವಾಸಿ ಸ್ವಗ್ರಾಮಕ್ಕೆ ಆಕ್ಟಿವಾ ಬೈಕ್ ನಲ್ಲಿ ಮತದಾನಕ್ಕೆಂದು ಹೋಗುವಾಗ ಕೆಎಸ್ಆರ್ ಟಿಸಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಬೈಕ್ ನಿಂದ ಬಿದ್ದ ಮಹಿಳೆ ಮೇಲೆ ಕೆಎಸ್ಆರ್ ಟಿಸಿ ಬಸ್ ಚಕ್ರ ಹಾದುಹೋಗಿ ಮಹಿಳೆ ಸಾವನ್ನಪ್ಪಿದ್ದಾರೆ. ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


from India & World News in Kannada | VK Polls https://ift.tt/3hjmwBj

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...