ಬೆಂಗಳೂರು: ಕೋವಿಡ್ ರೂಪಾಂತರ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಮುಂಜಾಗರೂಕತಾ ಕ್ರಮವಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ನೈಟ್ ಕರ್ಫ್ಯೂಗೆ ಕಾಂಗ್ರೆಸ್ ಶಾಸಕ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ರೂಪಾಂತರಿ ಕೊರೊನಾ ನಿಯಂತ್ರಿಸಲು ರಾಜ್ಯ ಸರ್ಕಾರದ ಕ್ರಮಗಳು ಹುಚ್ಚರ ಸಂತೆಯಲ್ಲಿ ತೆಗೆದುಕೊಳ್ಳುವ ನಿರ್ಧಾರದಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಕಾಟಾಚಾರದ ರಾತ್ರಿ ಕರ್ಪ್ಯೂ ಹೇರಿ ಸರ್ಕಾರ ಏನನ್ನು ಸಾಧಿಸಲು ಹೊರಟಿದೆ? ವಿವೇಕಯುತ ಸರ್ಕಾರ ತೆಗೆದುಕೊಳ್ಳುವ ನಿರ್ಧಾರವೇ ಇದು?ಈ ಸರ್ಕಾರಕ್ಕೇ ಅರಳು ಮರಳೋ? ಅಥವಾ ಸರ್ಕಾರ ನಡೆಸುವವರಿಗೆ ಅರಳು ಮರಳೋ? ಅರ್ಥವಾಗುತ್ತಿಲ್ಲ ಎಂದು ಕಿಡಿಕಾರಿದ್ದಾರೆ. ರಾಜ್ಯ ಸರ್ಕಾರ ಹಳೆಯ ತಪ್ಪುಗಳನ್ನೇ ಪುನಾರವರ್ತನೆ ಮಾಡುತ್ತಿದೆ.ರಾತ್ರಿ ವೇಳೆ ಕರ್ಪ್ಯೂ ಹೇರುವ ಸರ್ಕಾರಕ್ಕೆ ರೂಪಾಂತರಗೊಂಡಿರುವ ಕೊರೊನಾ ವೈರಸ್ ಜ.1 ರಿಂದ ಹರಡುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಟ್ಟಿದೆಯೆ? ವೈರಸ್ಗೆ ಸರ್ಕಾರವೇ ಭಯಪಟ್ಟಿರುವಾಗ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳಿಸುವ ಧೈರ್ಯ ಮಾಡುತ್ತಾರೆಯೆ? ಸರ್ಕಾರ ಉತ್ತರಿಸಿಲಿಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಕೋವಿಡ್ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಡಿಸೆಂಬರ್ 24 ರಿಂದ ಜನವರಿ 1 ರ ವರೆಗೆ ರಾತ್ರಿ ಕರ್ಪ್ಯೂವನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ. ರಾತ್ರಿ 11 ರಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿರುತ್ತದೆ. ಆದರೆ ನೈಟ್ ಬಸ್, ವಿಮಾನ, ರೈಲು ಹಾಗೂ ಗೂಡ್ಸ್ ವಾಹನಗಳ ಸಂಚಾರಕ್ಕೆ ಯಾವುದೇ ನಿರ್ಬಂಧವನ್ನುವಿಧಿಸಿಲ್ಲ.
from India & World News in Kannada | VK Polls https://ift.tt/3hcD7qq