ಕರ್ನಾಟಕ ಬಂದ್‌ನಿಂದಾಗುವ ನಷ್ಟಕ್ಕೆ ಆಯೋಜಕರೆ ಹೊಣೆ: ಹೈಕೋರ್ಟ್‌

ಬೆಂಗಳೂರು: ರಾಜ್ಯ ಸರಕಾರದ ಮರಾಠ ನಿಗಮ ರಚನೆ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದೆ ಇಂದು ವಿವಿಧ ಕನ್ನಡ ಸಂಘಟನೆಗಳು ರಾಜ್ಯದಾದ್ಯಂತ ಬಂದ್‌ಗೆ ಕರೆ ನೀಡಿದೆ. ಆದರೆ ಕರ್ನಾಟಕ ಬಂದ್‌ನಿಂದಾಗುವ ಆರ್ಥಿಕ ನಷ್ಟಕ್ಕೆ ಆಯೋಜಕರೇ ಹೊಣೆಯಾಗಲಿದ್ದಾರೆ ಎಂದು ಖಡಕ್‌ ಎಚ್ಚರಿಕೆ ನೀಡಿದೆ. ಬಂದ್‌ ಆಚರಿಸುವವರು ಮಾಸ್ಕ್‌ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೋವಿಡ್‌ ನಿಯಮ ಉಲ್ಲಂಘಿಸಿದರೂ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ. ಲೆಟ್ಸ್‌ ಕಿಡ್‌ ಫೌಂಡೇಷನ್‌ ಹಾಗೂ ಸಾಮಾಜಿಕ ಕಾರ್ಯಕರ್ತ ಸಾಯಿದತ್ತ ಮತ್ತಿತರರು ಸಲ್ಲಿಸಿರುವ ಅರ್ಜಿಗಳನ್ನು ಮುಖ್ಯ ನ್ಯಾಯ-ಮೂರ್ತಿ ಎ.ಎಸ್‌. ಓಕ್‌ ನೇತೃತ್ವದ ಪೀಠ ಶುಕ್ರವಾರ ವಿಚಾರಣೆ ನಡೆಸಿತು. ಶನಿವಾರ ನಡೆಯಲಿರುವ ಪ್ರತಿಭಟನೆ ವಿಷಯವನ್ನು ಅರ್ಜಿದಾರರ ಪರ ವಕೀಲರು ಪ್ರಸ್ತಾಪಿಸಿದಾಗ ಪೀಠ, ''ಈ ಬಂದ್‌ನಿಂದಾಗುವ ನಷ್ಟಕ್ಕೆ ಆಯೋಜಕರೇ ಹೊಣೆಯಾಗಿರುತ್ತಾರೆ. ವ್ಯಾಪಾರಿಗಳಿಗೆ ಆಗುವ ನಷ್ಟಕ್ಕೂ ಆಯೋಜಕರೇ ಹೊಣೆ ಹೊರಬೇಕಾಗುತ್ತದೆ,''ಎಂದು ಹೇಳಿತು. ''ಕೋವಿಡ್‌ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲು ಸಾಂಕ್ರಾಮಿಕ ರೋಗಗಳ ತಡೆ ಕಾಯಿದೆಗೆ ತಿದ್ದುಪಡಿ ತಂದಿದೆ. ಆ ಪ್ರಕಾರ ಕಠಿಣ ಕ್ರಮಗಳನ್ನು ಜರುಗಿಸಬೇಕು. ಆದರೆ, ಸರಕಾರ ಕಾಯಿದೆಯ ನಿಯಮಗಳನ್ನು ಅಮಾನತಿನಲ್ಲಿಟ್ಟು, ಅದಕ್ಕೆ ತಿದ್ದುಪಡಿ ತರುತ್ತೇವೆ ಎನ್ನುತ್ತಿದೆ. ಕಡೇ ಪಕ್ಷ ಕಾಯಿದೆಗೆ ತಿದ್ದುಪಡಿ ಮಾಡುವುದಕ್ಕೂ ಮುಂದಾಗಿಲ್ಲ. ಸರಕಾರದ ಈ ನಡೆ ಸರಿಯಾದುದಲ್ಲ,'' ಎಂದು ಆಕ್ಷೇಪಿಸಿತು. ''ಈ ಹಿಂದೆ ಬಂದ್‌, ರಾರ‍ಯಲಿ ವೇಳೆ ದೊಡ್ಡ ಸಂಖ್ಯೆಯಲ್ಲಿ ಕೋವಿಡ್‌ ಮಾರ್ಗಸೂಚಿ ಉಲ್ಲಂಘನೆ ಮಾಡಲಾಗಿದೆ. ಅವರಿಂದ ದಂಡ ಸಂಗ್ರಹಿಸಿರುವ ಕುರಿತು ಸರಕಾರ ಈವರೆಗೆ ಮಾಹಿತಿ ನೀಡಿಲ್ಲ. ಹಾಗೆಯೇ, ಕೋವಿಡ್‌ ಮಾರ್ಗಸೂಚಿ ಪಾಲನೆ ಬಗ್ಗೆ ವಾಟಾಳ್‌ ಪಕ್ಷ ಈವರೆಗೂ ಸ್ಪಷ್ಟನೆ ನೀಡಿಲ್ಲ. ಮಾರ್ಗಸೂಚಿ ಜಾರಿ ವಿಚಾರದಲ್ಲಿ ಪೊಲೀಸರಿಗೆ ನಿರ್ದೇಶನ ನೀಧಿಡಧಿಬೇಕು. ನಿಧಿಯಮ ಉಲ್ಲಂಘನೆ ವಿರುದ್ಧ ದಂಡ ವಿಧಿಸಿ, ಮುಂದಿನ ವಿಚಾರಣೆ ವೇಳೆ ಆ ವರದಿ ಸಲ್ಲಿಸಬೇಕು,'' ಎಂದು ಸರಕಾರಕ್ಕೆ ನಿರ್ದೇಶಿಸಿತು. ಸಿಪಿಐ(ಎಂ) ಪರ ವಕೀಲರು, ನಮ್ಮ ಪಕ್ಷದ ಸದಸ್ಯರು ಕೋವಿಡ್‌ ನಿಯಮ ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದಾರೆ. ನ್ಯಾಯಾಲಯ ನೀಡುವ ನಿರ್ದೇಶನಗಳನ್ನು ಪಾಲಿಸಲು ಬದ್ಧವಾಗಿದೆ' ಎಂದು ಭರವಸೆ ನೀಡಿದರು.


from India & World News in Kannada | VK Polls https://ift.tt/3qwrT48

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...